ವಸತಿ ನೋಡಲ್‌ ಅಧಿಕಾರಿಗಳಿಗೆ 40 ತಿಂಗಳಿನಿಂದ ವೇತನ ಸಿಕ್ಕಿಲ್ಲ !


Team Udayavani, Oct 12, 2019, 5:06 AM IST

d-14

ಸಾಂದರ್ಭಿಕ ಚಿತ್ರ

ಪುತ್ತೂರು: ಒಂದೆಡೆ ಪ್ರಾಕೃತಿಕ ವಿಕೋಪದಿಂದ ತತ್ತರಿಸಿರುವ ಕುಟುಂಬಗಳಿಗೆ ಸೂರು ಒದಗಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದರೆ, ಇನ್ನೊಂದೆಡೆ ಸರ್ವರಿಗೂ ಸೂರು ಸಿಗಬೇಕು ಎಂಬ ಉದ್ದೇಶದಿಂದ ನೇಮಕ ಆಗಿರುವ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ವಸತಿ ನೋಡಲ್‌ ಅಧಿಕಾರಿಗಳಿಗೆ 40 ತಿಂಗಳಿಂದ ವೇತನವೇ ಸಿಕ್ಕಿಲ್ಲ! ಈ ಎರಡು ಸಮಸ್ಯೆಗಳಿಗೆ ತತ್‌ಕ್ಷಣ ಪರಿಹಾರ ಒದಗಿಸಬೇಕಿರುವ ಸರಕಾರ ಮಾತ್ರ ವಿಳಂಬ ಧೋರಣೆ ಅನುಸರಿಸುತ್ತಿದೆ.

206 ವಸತಿ ಅಧಿಕಾರಿಗಳು
2010-11ನೇ ಸಾಲಿನಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮವು ಎಲ್ಲ ತಾ.ಪಂ.ಗಳಲ್ಲಿ ವಸತಿ ನೋಡಲ್‌ ಅಧಿಕಾರಿಗಳನ್ನು ಗುತ್ತಿಗೆ ಪದ್ಧತಿಯಡಿ ನಿಯಕ್ತಿಗೊಳಿಸಲು ನಿರ್ಧರಿಸಿತ್ತು. ಅದರ ಅನ್ವಯ ಲಿಖೀತ ಪರೀಕ್ಷೆ, ಮೌಖೀಕ ಸಂದರ್ಶನ ನಡೆಸಿ ಅರ್ಹರನ್ನು ಆಯ್ಕೆ ಮಾಡಿತ್ತು. ರಾಜ್ಯದ 176 ತಾಲೂಕು ಮತ್ತು 30 ಜಿಲ್ಲಾ ಕೇಂದ್ರಗಳಲ್ಲಿ ಒಟ್ಟು 206 ವಸತಿ ನೋಡಲ್‌ ಅಧಿಕಾರಿಗಳು 8 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಯಾ ತಾಲೂಕು ಮತ್ತು ಜಿಲ್ಲಾ ಕೇಂದ್ರಕ್ಕೆ ಓರ್ವ ಅಧಿಕಾರಿ ಇದ್ದು, 196 ಮಂದಿ ಕರ್ತವ್ಯದಲ್ಲಿದ್ದಾರೆ.

ಹೊರಗುತ್ತಿಗೆ ವಿರುದ್ಧ ದಾವೆ
2015ರಲ್ಲಿ ನಿಗಮವು ವಸತಿ ನೋಡಲ್‌ ಅಧಿಕಾರಿಗಳ ಗುತ್ತಿಗೆ ಆಧಾರಿತ ಪದ್ಧತಿ ಬದಲಾಯಿಸಿ ಹೊರಗುತ್ತಿಗೆ ಮೂಲಕ ಸೇವೆ ಪಡೆಯಲು ಸೂಚಿಸಿತ್ತು. 2 ವರ್ಷ ಗುತ್ತಿಗೆ ಅವಧಿ ಪೂರೈಸಿದವರನ್ನು ಖಾಯಂ ಮಾಡಬೇಕು ಎಂಬ ಬೇಡಿಕೆಗೂ ಪೂರ್ಣ ನ್ಯಾಯ ಸಿಗಲಿಲ್ಲ. ಇದರ ವಿರುದ್ಧ 2015ರಲ್ಲಿ ಸಿಬಂದಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. 2016 ಮೇ ತಿಂಗಳ ಅನಂತರ ಸಿಬಂದಿಗೆ ನಿಗಮವು ವೇತನ ಪಾವತಿ ಸ್ಥಗಿತಗೊಳಿಸಿತ್ತು. ನಿಗಮದ ವತಿಯಿಂದ ಹೈಕೋರ್ಟ್‌ ನಲ್ಲಿ ಹಾಜರಾದ ಅಧಿಕಾರಿ ನ್ಯಾಯಾಲಯ ಅಂತಿಮ ತೀರ್ಮಾನ ಕೈಗೊಂಡರೆ ಪೂರ್ಣ ವೇತನ ನೀಡುವ ಭರವಸೆ ನೀಡಿದ್ದರು.

ವೇತನ ಇಲ್ಲವಾದರೂ ಹೆಚ್ಚಿನ ಸಿಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಉಚ್ಚ ನ್ಯಾಯಾಲಯ ವಸತಿ ನೋಡಲ್‌ ಅಧಿಕಾರಿಗಳನ್ನು ಯೋಜನೆ ಇರುವ ತನಕ ಮುಂದುವರಿಸಬೇಕು ಎಂಬ ಮಧ್ಯಾಂತರ ಆದೇಶ ನೀಡಿರುವುದು ಸಮಧಾನ ತಂದರೂ ಬಾಕಿ ವೇತನ ಪಾವತಿ ಮಾತ್ರ ಇನ್ನೂ ಆಗಿಲ್ಲ.

ಗೋಳು ಕೇಳುವವರಿಲ್ಲ
ವೇತನ ಪಾವತಿ ಆಗದ ಕಾರಣ ಬಹುತೇಕ ಸಿಬಂದಿಯ ಜೀವನ ಸಂಕಷ್ಟದಲ್ಲಿದೆ. ಈ ಅಧಿಕಾರಿಗಳ ಅಗತ್ಯ ಮತ್ತು ಅನಿವಾರ್ಯತೆಯ ಬಗ್ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಜಿ.ಪಂ.
ಸಿಇಒ, ಜಿಲ್ಲಾಧಿಕಾರಿಗಳು ನಿಗಮಕ್ಕೆ ಪತ್ರ ಬರೆದಿದ್ದರೂ ನಿಗಮ ಅದಕ್ಕೆ ಸ್ಪಂದಿಸಿಲ್ಲ. ರಾಜ್ಯದ ನಾನಾ ಕಡೆ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಸೂರು ಒದಗಿಸುವ ಪ್ರಕ್ರಿಯೆಗೆ ವೇಗಸಿಗಬೇಕಿದ್ದು, ಈ ಸಿಬಂದಿಯ ಸೇವೆ ಅತ್ಯಗತ್ಯ.

ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು
ನಿಯಮಾನುಸಾರ ನೇಮಕಗೊಂಡ ತಾಲೂಕು ವಸತಿ ನೋಡೆಲ್‌ ಅಧಿಕಾರಿಗಳನ್ನು ಯಥಾಸ್ಥಿತಿ ಮುಂದುವರಿಸಿಕೊಂಡು, ವೇತನ ಬಿಡುಗಡೆ ಮಾಡಲು ಕಳೆದ ತಿಂಗಳು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಆದರೂ ವೇತನ ಬಂದಿಲ್ಲ. ಇದರ ಪ್ರಕ್ರಿಯೆ ವಸತಿ ಇಲಾಖೆ ಕಾರ್ಯದರ್ಶಿಯ ಹಂತದಲ್ಲಿದೆ ಎಂಬ ಉತ್ತರವಷ್ಟೇ ಸಿಕ್ಕಿದೆ ಎನ್ನುತ್ತಾರೆ ಕೆಲವು ಸಿಬಂದಿ.

ವಸತಿ ನೋಡಲ್‌ ಅಧಿಕಾರಿಗಳು ಟಾರ್ಗೆಟ್‌
ಗ್ರಾ.ಪಂ., ತಾ.ಪಂ., ಜಿ.ಪಂ.ನಲ್ಲಿ ನಡೆಯುವ ಸಭೆಗಳಲ್ಲಿ ವಸತಿ ಯೋಜನೆಗಳ ಪ್ರಗತಿ ಬಗ್ಗೆ ಜನಪ್ರತಿನಿಧಿಗಳು, ಮೇಲಧಿಕಾರಿಗಳು, ಸಾರ್ವಜನಿಕರು ವಸತಿ ನೋಡಲ್‌ ಅಧಿಕಾರಿಗಳನ್ನೇ ಪ್ರಶ್ನಿಸುತ್ತಾರೆ. ಆದರೆ ಸಿಬಂದಿ ವೇತನವಿಲ್ಲದೆ ದುಡಿಯಬೇಕಾದ ಸ್ಥಿತಿ ಬಗ್ಗೆ ಸಭೆಗಳಲ್ಲಿ ಯಾರೂ ಚಕಾರ ಎತ್ತುತ್ತಿಲ್ಲ.

ವೇತನ ಪಾವತಿಗೆ ತತ್‌ಕ್ಷಣ ಕ್ರಮ
ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಬುಧವಾರ ಚರ್ಚೆ ಮಾಡಿದ್ದೇನೆ. ಎರಡು ದಿನಗಳಲ್ಲಿ ಪೂರ್ಣ ಮಾಹಿತಿ ಸಂಗ್ರಹಿಸಿ, ಪ್ರಕ್ರಿಯೆಗೆ ವೇಗ ನೀಡಿ ತತ್‌ಕ್ಷಣ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.