ಫಲಿತಾಂಶಕ್ಕೆ ಮೊದಲೇ ಸಂದೇಹಗಳಿಗೆ ಪರಿಹಾರ
ಎಸೆಸೆಲ್ಸಿ ಅನಂತರ ಎಷ್ಟೆಲ್ಲ ಅವಕಾಶ -ಉದಯವಾಣಿ ಕಾರ್ಯಕ್ರಮ
Team Udayavani, May 18, 2022, 12:54 AM IST
ಮಂಗಳೂರು: ಎಸೆಸೆಲ್ಸಿ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ ಇರುವಾಗಲೇ ಮುಂದೇನು ಮಾಡಬೇಕು, ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ ವಿದ್ಯಾರ್ಥಿಗಳ, ಹೆತ್ತವರ ಗೊಂದಲ ಅನುಮಾನ ಬಗೆಹರಿಸಲು “ಉದಯವಾಣಿ’ ಮಂಗಳವಾರ ಮಂಗಳೂರಿನಲ್ಲಿ ಆಯೋಜಿಸಿದ್ದ ಎಸೆಸೆಲ್ಸಿ ಅನಂತರ ಎಷ್ಟೆಲ್ಲ ಅವಕಾಶ ಎಂಬ ಕಾರ್ಯಕ್ರಮ ನೆರವಾಯಿತು.
ಉರ್ವ ಕೆನರಾ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಕುರಿಯನ್, ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ| ಅನಂತ ಜಿ. ಪ್ರಭು, ಮೂಲ್ಕಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ವಾಸುದೇವ ಬೆಳ್ಳೆ ಮಾಹಿತಿಯಿತ್ತರು.
ಮುಖ್ಯವಾಗಿ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಮೊದಲು ವಿದ್ಯಾರ್ಥಿಗಳು ತಮ್ಮ ಶಕ್ತಿಯೇನು, ದೌರ್ಬಲ್ಯಗಳೇನು ಎನ್ನುವುದನ್ನು ಅರಿತುಕೊಂಡು ಮುಂದಿನ ಹೆಜ್ಜೆ ಇರಿಸಬೇಕು ಎಂಬ ಒಟ್ಟು ಅಭಿಪ್ರಾಯದೊಂದಿಗೆ ವಿಜ್ಞಾನ, ಕಲೆ ಹಾಗೂ ವಾಣಿಜ್ಯ ಅಲ್ಲದೆ ಐಟಿಐ, ಡಿಪ್ಲೊಮಾ ಕೋರ್ಸ್ಗಳನ್ನು ಯಾವ ರೀತಿ ಸೇರಿಕೊಂಡು ಮುಂದಡಿ ಇಡಬಹುದು ಎಂಬ ಬಗ್ಗೆ ಪರಿಣಿತರು ಸಮಗ್ರ ಮಾಹಿತಿ ನೀಡಿದರು.
ಹೆತ್ತವರು, ವಿದ್ಯಾರ್ಥಿಗಳು ಪ್ರಶ್ನೋತ್ತರದಲ್ಲಿ ಭಾಗಿಯಾಗುವ ಮೂಲಕ ಅನುಮಾನಗಳನ್ನು ಬಗೆಹರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ