ಹಕ್ಕುಪತ್ರ ಸಮಸ್ಯೆ :ಪ್ರಧಾನಿ ರಾಷ್ಟ್ರಪತಿಯವರಿಂದ ಪತ್ರಕ್ಕೆ ಸ್ಪಂದನೆ


Team Udayavani, Mar 14, 2017, 5:13 PM IST

spandane.jpg

ಸುಳ್ಯ: ಇಲ್ಲಿಯ ಜಯನಗರದ ಮಿಲಿಟ್ರಿ ಗ್ರೌಂಡ್‌ನ‌ಲ್ಲಿ ಸುಮಾರು 250 ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಇನ್ನೂ ಮನೆಗಳ ಸ್ಥಳದ ಹಕ್ಕುಪತ್ರ ದೊರೆತಿಲ್ಲ. ಈ ಜಾಗ ಮಿಲಿಟ್ರಿ ಗ್ರೌಂಡ್‌ ಎಂಬ ಕಾರಣಕ್ಕಾಗಿ ಹಕ್ಕುಪತ್ರ ನೀಡಿಲ್ಲ. ಈ ಸಮಸ್ಯೆಯನ್ನು ನಿವಾರಿಸಬೇಕೆಂದು ಸ್ಥಳೀಯರೊಬ್ಬರು ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗೆ ಪತ್ರ ಬರೆದಿದ್ದು, ಅದಕ್ಕೆ ಸ್ಪಂದನ ದೊರೆತಿದೆ.

ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಅವರು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಕ್ತ ವರದಿ ಕೋರಿದ್ದಾರೆ. ಅದರಂತೆ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿಗಳು, ಸಹಾಯಕ ಕಮೀಷನರ್‌ ಅವರ ಮುಖಾಂತರ ತಹಶೀಲ್ದಾರ್‌ ಅವರಿಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ತಾಲೂಕು ಕಂದಾಯ ಇಲಾಖೆಯ ಸ್ವಾಧೀನದಲ್ಲಿರುವ ಮನೆ ನಿವೇಶನದ ವಿಸ್ತೀರ್ಣ ಸರ್ವೆ ಕಾರ್ಯ ಪೂರ್ಣಗೊಂಡಿದೆ.

ನಿರಂತರ ಪ್ರಯತ್ನ
ಜಯನಗರದಲ್ಲಿ ಮನೆಕಟ್ಟಿ ವಾಸಿಸುತ್ತಿರುವ ಸುಮಾರು 250 ಕುಟುಂಬಗಳ ಮನೆಗಳ ನಿವೇಶನ ಸ್ಥಳ ತಮ್ಮ ಹೆಸರಿಗೆ ಮಂಜೂರಾಗಬೇಕೆಂದು  ಹಲವು ವರ್ಷಗಳಿಂದ ನಿವಾಸಿಗಳು ಪ್ರಯತ್ನ ನಿರತರಾಗಿದ್ದರು. ಇವರೆಲ್ಲಾ ಸುಮಾರು 40-50 ವರ್ಷಗಳಿಂದ ನೆಲೆಸಿದ್ದಾರೆ. ಕೆಲವರು ಬೇರೆಯವರಿಂದ ಜಾಗ ಖರೀದಿಸಿದವರೂ ಇದ್ದಾರೆ. ಎಲ್ಲರಿಗೂ ಮಿಲಿಟರಿ ಗ್ರೌಂಡ್‌ ಎಂಬುದೆ ತೊಡಕಾಗಿದೆ. ಆದ ಕಾರಣ ಇವರ್ಯಾರಿಗೂ ಮನೆ ನಿವೇಶನದ ಹಕ್ಕುಪತ್ರ ದೊರೆತಿಲ್ಲ.

ದಾಖಲೆ ಹೀಗಿದೆ
1939ರಲ್ಲಿ ಬ್ರಿಟಿಷರ ಕಾಲದಲ್ಲಿ ಜಯನಗರದಲ್ಲಿ 76 ಎಕ್ರೆ ಸ್ಥಳವನ್ನು ಮಿಲಿಟರಿ ಉದ್ದೇಶಕ್ಕಾಗಿ ಮೀಸಲಿರಿಸಿದ್ದು, ಆದರೆ ಆ ಜಾಗದಲ್ಲಿ ಸ್ವಾತಂತ್ರÂ ಪೂರ್ವದಲ್ಲಾಗಲಿ, ಸ್ವಾತಂತ್ರÂ ಅನಂತರದಲ್ಲಾಗಲಿ ಯಾವುದೇ ಮಿಲಿಟ್ರಿ ಚಟುವಟಿಕೆ ನಡೆದಿರಲಿಲ್ಲ.  ಅಲ್ಲದೆ ಮಿಲಿಟರಿಗೆ ಸಂಬಂಧಿಸಿದ ಯಾವುದೇ ಕುರುಹುಗಳು ಇರಲಿಲ್ಲ.  ಕಂದಾಯ ಇಲಾಖೆಯ ದಾಖಲೆಯಲ್ಲಿ ಮಿಲಿಟರಿ ಗ್ರೌಂಡ್‌ ಎಂದು ಕೈಬರಹದ ಉಲ್ಲೇಖ ಒಂದು ಕಡೆ ಇರುವುದು ಹೊರತುಪಡಿಸಿದರೆ ರಕ್ಷಣಾ ಇಲಾಖೆ ಕಡತದಲ್ಲಿ ಈ ಜಾಗದ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಎಂಬ ಅಂಶ ಗೋಚರಿಸಿದೆ.

ಈಗ ಪಹಣಿಯಲ್ಲಿ ದಾಖಲಾತಿ 38.61 ಎಕ್ರೆ ಎಂದಿದೆ. 1939ರಲ್ಲಿ 76 ಎಕ್ರೆ ಮಿಲಿಟರಿ ಗ್ರೌಂಡ್‌ ಮೀಸಲಿರಿಸಿದೆ ಎಂದು ದಾಖಲೆಗಳಿದ್ದರೂ 1994-95ರಲ್ಲಿ ನಡೆಸಿದ ಸರ್ವೆ ಪ್ರಕಾರ 43 ಎಕ್ರೆ ಜಾಗವಿರುವುದಾಗಿ ದಾಖಲೆಗಳು ಹೇಳುತ್ತವೆ. ಅದರಲ್ಲಿ ಕಟ್ಟಡ ದಾರಿ ರಸ್ತೆ 16 ಎಕ್ರೆ. ಮನೆ ನಿವೇಶನ 11 ಎಕ್ರೆ, ಹೌಸಿಂಗ್‌ ಕಾರ್ಪೋರೇಶನ್‌ 2 ಎಕ್ರೆ, ಬಂಜರು ಬೆಟ್ಟ ಪ್ರದೇಶ 5.60 ಎಕ್ರೆ ಇದೆ. ಆದರೆ ಇತ್ತೀಚೆಗೆ ಮಾಡಿದ ಸರ್ವೆ ಪ್ರಕಾರ ಒಟ್ಟು 38.61 ಎಕ್ರೆ ಸ್ಥಳ ಕಂಡು ಬಂದಿದ್ದು, ಈ ಸ್ಥಳದಲ್ಲಿ 250ಕ್ಕೂ ಹೆಚ್ಚು ಮನೆಗಳಿವೆ. ಹಕ್ಕುಪತ್ರಕ್ಕಾಗಿ ಪ್ರಯತ್ನ ಇಲ್ಲಿಯ ನಿವಾಸಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರ ದೊರೆತಿಲ್ಲ ಎಂಬುದನ್ನು ಬಿಟ್ಟರೆ ನ.ಪಂ.ನಿಂದ ಕಟ್ಟಡ ನಂಬ್ರ ಇದೆ. ಮನೆ ತೆರಿಗೆ ಸ್ವೀಕರಿಸಲಾಗುತ್ತಿದೆ.

ವಿದ್ಯುತ್‌, ನೀರಿನ ಸಂಪರ್ಕ, ರೇಶನ್‌ ಕಾರ್ಡು ಎಲ್ಲ ಇದೆ. ಆದ್ದರಿಂದ ಹಕ್ಕುಪತ್ರಕ್ಕಾಗಿ ನಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ. 

ಹಕ್ಕುಪತ್ರ ಇಲ್ಲದ ಕಾರಣ, ಇವರೆಲ್ಲರೂ ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದೀಗ ಹಕ್ಕೊತ್ತಾಯ ಸಮಿತಿ ರಚಿಸಿಕೊಂಡಿದ್ದು, ಅದರ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಜಯನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ. ಜಗನ್ನಾಥ ಅವರು, ರಾಷ್ಟÅಪತಿ ಪ್ರಣವ್‌ಮುಖರ್ಜಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. 

ಈ ಬಗ್ಗೆ ಶಾಸಕರು, ಸಂಸದರು ಹಲವು ಬಾರಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ. ತಹಶೀಲ್ದಾರ್‌ ಅವರು ಪರಿಶೀಲನೆ ನಡೆಸಿದ್ದು, ಕೊನೆ ವರದಿ ಸಲ್ಲಿಸಲು ಬಾಕಿ ಇದೆ. ಇತ್ತೀಚೆಗೆ ಜಿಲ್ಲಾಧಿಕಾರಿ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಜಿ.ಜಗನ್ನಾಥ ಅವರೊಳಗೆ ಸಮಾಲೋಚನೆ ನಡೆಸಿದ್ದರು. 

ಈ ಪ್ರದೇಶದಲ್ಲಿರುವವರಿಗೆ  ಜಿಲ್ಲಾಧಿಕಾರಿ ಅವರು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.  ಕಂದಾಯ ಇಲಾಖೆಯಲ್ಲಿ ರುವ ಸಮಸ್ಯೆಯನ್ನು  ಇತ್ಯರ್ಥಪಡಿಸುವುದಾಗಿ ಶಾಸಕರು ಭರವಸೆ ನೀಡಿದ್ದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.