ಫಲಿತಾಂಶ ,ಅಂಕಪಟ್ಟಿ ನೀಡದೆ ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಣೆ


Team Udayavani, Jul 12, 2018, 10:42 AM IST

vv.jpg

ಮಂಗಳೂರು: ಮಂಗಳೂರು ವಿ.ವಿ.ಯಲ್ಲಿ ಜು. 4ರಂದು ನಡೆದ ಅತಿಥಿ ಉಪನ್ಯಾಸಕರ ಸಂದರ್ಶನಕ್ಕೆ ವಿ.ವಿ.ಯಲ್ಲಿ ಕಲಿತ ವಿದ್ಯಾರ್ಥಿಗಳಿಗೇ ಅವಕಾಶ ನಿರಾಕರಿಸಲಾಗಿದೆ. ವಿದ್ಯಾರ್ಥಿಗಳ ಬಳಿ ಅಂಕ ಪಟ್ಟಿ ಇಲ್ಲದಿರುವುದರಿಂದ ನೇರ ಸಂದರ್ಶನಕ್ಕೆ ಅವಕಾಶ ನೀಡಿಲ್ಲವೆಂದು ವಿ.ವಿ. ಹೇಳಿದೆ.

ಆದರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿರುವಾಗ ನಮಗೂ ಬೇಗ ಫಲಿತಾಂಶ ಪ್ರಕಟಿಸಿ ಅಂಕ ಪಟ್ಟಿ ನೀಡಬೇಕಿತ್ತು ಎಂಬುದು ವಿದ್ಯಾರ್ಥಿಗಳ ಅಳಲು.

ಮಂಗಳೂರು ವಿ.ವಿ.ಯಲ್ಲಿ ಎಂಎ, ಎಂಕಾಂ ಮತ್ತು ಎಂಎಸ್ಸಿ ತರಗತಿಗಳಿಗೆ ಮೇ ಕೊನೆಯ ವಾರದಲ್ಲಿ ಪರೀಕ್ಷೆ ಮುಗಿದಿದೆ. ಪರೀಕ್ಷೆ ಮುಗಿದು ಒಂದೂವರೆ ತಿಂಗಳಾದರೂ ನಾಲ್ಕನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟವಾಗಿಲ್ಲ. ಫಲಿತಾಂಶ ಪ್ರಕಟವಾಗಿ ಅಂಕಪಟ್ಟಿ ನೀಡುವ ಮೊದಲೇ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆದರೂ ವಿ.ವಿ. ವಿದ್ಯಾರ್ಥಿಗಳೇ ಆದ ಕಾರಣ ಹಿಂದಿನ ಪರೀಕ್ಷೆಗಳ ಅಂಕ ಆಧಾರಿತವಾಗಿ ಸಂದರ್ಶನ ಎದುರಿಸೋಣವೆಂದು ಹೋದರೆ ಸಂದರ್ಶನ ಅವಕಾಶ ನಿರಾಕರಿಸಲಾಗಿದೆ.

ಸುಮಾರು 50 ಮಂದಿ ಅಭ್ಯರ್ಥಿಗಳಿಗೆ ಇದರಿಂದ ನಿರಾಶೆಯಾಗಿದೆ ಎಂದು ಹೆಸರು ಹೇಳಲಿಚ್ಛಿಸದ ವಿದ್ಯಾರ್ಥಿನಿಯೋರ್ವರು ಅಸಮಾಧಾನ ತೋಡಿಕೊಂಡಿದ್ದಾರೆ.

ಇತರ ವಿದ್ಯಾರ್ಥಿಗಳು ಪಾಲ್ಗೊಂಡರು
ಇತರ ಕಾಲೇಜುಗಳಲ್ಲಿ ಪರೀಕ್ಷೆಗಳು ಮುಗಿದು, ಫಲಿತಾಂಶ ಪ್ರಕಟವಾಗಿ ಅಂಕಪಟ್ಟಿಯನ್ನೂ ನೀಡಲಾಗಿದೆ. ಅವರೆಲ್ಲ ನೇರ ಸಂದರ್ಶನಕ್ಕೆ ಹಾಜರಾಗಿ ಸಂದರ್ಶನ ಎದುರಿಸಿದ್ದರು. ಆದರೆ ವಿ.ವಿ. ವಿದ್ಯಾರ್ಥಿಗಳಾದ ನಮಗೆ ಮಾತ್ರ ಅವಕಾಶ ಇರಲಿಲ್ಲ ಎಂದಿದ್ದಾರೆ ಈ ವಿದ್ಯಾರ್ಥಿನಿ.

ಯಾವ ಸಂದರ್ಶನಕ್ಕೂ ಹಾಜರಾಗುವಂತಿಲ್ಲ
ಅಂಕಪಟ್ಟಿ ಸಿಗದಿರುವುದರಿಂದ ಇತರ ಯಾವುದೇ ಸಂದರ್ಶನವನ್ನು ಎದುರಿಸಲೂ ಸಾಧ್ಯವಾಗುತ್ತಿಲ್ಲ. ಬೆಳಗಾವಿ ಕೆ.ಎಲ್‌.ಇ. ಸೊಸೈಟಿ ಅನುದಾನಿತ ಕಾಲೇಜುಗಳ ಖಾಯಂ ಉಪನ್ಯಾಸಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಅಲ್ಲಿಗೂ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಈಗ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೂ ಅರ್ಜಿ ಆಹ್ವಾನಿಸಲಾಗಿದ್ದು, ಈ ಅವಕಾಶವನ್ನೂ ಕಳೆದುಕೊಳ್ಳುವಂತಾಗಿದೆ ಎನ್ನುತ್ತಾರೆ ಅವಕಾಶ ವಂಚಿತ ವಿದ್ಯಾರ್ಥಿಗಳು.

ಈ ಬಗ್ಗೆ ಮಂಗಳೂರು ವಿ.ವಿ.ಯ ವಿಶೇಷ ಅಧಿಕಾರಿ ಡಾ| ನಾಗಪ್ಪ ಗೌಡ ಪ್ರತಿಕ್ರಿಯಿಸಿ, ಫಲಿತಾಂಶ ಪ್ರಕಟವಾದ ಅನಂತರವಷ್ಟೇ ಅಂಕಪಟ್ಟಿ ಸಿಗುತ್ತದೆ. ವಿ.ವಿ.ಯಲ್ಲಿ ಸ್ನಾತಕೋತ್ತರ ಪರೀಕ್ಷೆಗಳ ಮೌಲ್ಯ
ಮಾಪನವನ್ನು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಮೌಲ್ಯಮಾಪನ ಎಂಬ ಎರಡು ರೀತಿಯ ಪ್ರಕ್ರಿಯೆಗಳಿಗೆ ಒಳಪಡಿಸಲಾಗುತ್ತದೆ. ಇದರಿಂದ ಫಲಿತಾಂಶ ತಡವಾಗುತ್ತದೆ. ಅತಿಥಿ ಉಪನ್ಯಾಸಕರ ಹುದ್ದೆಗೆ ಶೇ. 55 ಅಂಕ ಇಲ್ಲದೆ ಸಂದರ್ಶನ ನಡೆಸುವುದು ಅಸಾಧ್ಯ. ಹಾಗಾಗಿ ಅಂಕಪಟ್ಟಿ ದೊರೆಯದೆ ವಿದ್ಯಾರ್ಥಿಗಳ ಅಂಕ ಗೊತ್ತಾಗುವುದಿಲ್ಲ. ಅದಕ್ಕಾಗಿ ಅವರಿಗೆ ನೇರ ಸಂದರ್ಶನಕ್ಕೆ ಅವಕಾಶ ನೀಡಲು ಸಾಧ್ಯ
ವಾಗಿಲ್ಲ. ಮುಂದಿನ ದಿನಗಳಲ್ಲಿ ಸಂದರ್ಶನ ನಡೆದರೆ ಅವರೂ ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.

ಮಂಗಳೂರು ವಿ.ವಿ.ಯ ಮಂಗಳ ಗಂಗೋತ್ರಿ, ಚಿಕ್ಕ ಅಳುವಾರ, ಮಡಿಕೇರಿಯಲ್ಲಿರುವ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಸಲ್ಲಿಸಲು ಜೂ. 28 ಕೊನೆಯ ದಿನಾಂಕವಾಗಿತ್ತು. ಜು. 3, 4 ಮತ್ತು 5ರಂದು ವಿ.ವಿ.ಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆದಿತ್ತು. ಯುಜಿಸಿ, ಎನ್‌ಇಟಿ/ಎಸ್‌ಎಲ್‌ಇಟಿ ಉತ್ತೀರ್ಣರಾದವರಿಗೆ/ ಪಿಎಚ್‌ಡಿ ಮಾಡಿದವರಿಗೆ ಆದ್ಯತೆ ನೀಡಲಾಗಿತ್ತು. ಅಲ್ಲದೆ ಅಂಗೀಕೃತ ವಿ.ವಿ.ಯಿಂದ ಕನಿಷ್ಠ ಶೇ. 55 ಅಂಕಗಳೊಂದಿಗೆ ಎಂಎ, ಎಂಕಾಂ, ಎಂಎಸ್ಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಅಂತಿಮ ಸೆಮಿಸ್ಟರ್‌ನ ಅಂಕಪಟ್ಟಿ ಇಲ್ಲದ ಹಿನ್ನೆಲೆಯಲ್ಲಿ ವಿ.ವಿ.ಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಅವಕಾಶ ಇರಲಿಲ್ಲ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.