Bantwala; ಯಶಸ್ವಿಯಾಗಿ ನಡೆದ ವೀರ-ವಿಕ್ರಮ ಜೋಡಿ ಕಂಬಳ; ಇಲ್ಲಿದೆ 2 ಕಂಬಳಗಳ ಫಲಿತಾಂಶ


Team Udayavani, Mar 17, 2024, 1:03 PM IST

Bantwala; ಯಶಸ್ವಿಯಾಗಿ ನಡೆದ ವೀರ-ವಿಕ್ರಮ ಜೋಡಿ ಕಂಬಳ; ಇಲ್ಲಿದೆ 2 ಕಂಬಳಗಳ ಫಲಿತಾಂಶ

ಸಂಗ್ರಹ ಚಿತ್ರ ಬಳಸಲಾಗಿದೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಹೋಕ್ಕಾಡಿಗೋಳಿಯಲ್ಲಿ ನಡೆದ ಎರಡು ಕಂಬಳಗಳು ಸಂಪನ್ನವಾಗಿದೆ. ಇದೇ ಮೊದಲ ಬಾರಿಗೆ ಒಂದೇ ಊರಿನಲ್ಲಿ ಏಕಕಾಲಕ್ಕೆ ಎರಡು ಕಂಬಳಗಳು ನಡೆದಿದೆ.

ಹಿಂದೆ ಒಂದು ಕಂಬಳ ನಡೆಯುತ್ತಿದ್ದ ಹೊಕ್ಕಾಡಿಗೋಳಿಯಲ್ಲೇ ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿಯ ವತಿಯಿಂದ ರಶ್ಮಿತ್‌ ಶೆಟ್ಟಿ ಕೈತ್ರೋಡಿ ಅಧ್ಯಕ್ಷತೆಯಲ್ಲಿ ಒಂದು ಕಂಬಳ ನಡೆದರೆ, ಮತ್ತೊಂದು ಕಂಬಳ ಅಲ್ಲೇ ಪಕ್ಕದ ಕೊಡಂಗೆಯಲ್ಲಿ ಶ್ರೀ ವೀರ-ವಿಕ್ರಮ ಕಂಬಳ ಸಮಿತಿ ವತಿಯಿಂದ ಸಂದೀಪ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಎರಡೂ ಕಂಬಳಗಳ ಜೋಡುಕರೆಗಳಿಗೆ ವೀರ-ವಿಕ್ರಮ ಎಂದೇ ಹೆಸರಿಡಲಾಗಿತ್ತು.

ಹೊಕ್ಕಾಡಿಗೋಳಿ ಕಂಬಳಕ್ಕೆ ಸಂಬಂಧಿಸಿ ಜಾಗದ ಗೊಂದಲದ ಕಾರಣದಿಂದ ಹಿಂದೆ ಜ. 13ರಂದು ನಿಗದಿಯಾಗಿದ್ದ ಕಂಬಳವು ಬಳಿಕ ಮುಂದೂಡಲ್ಪಟ್ಟಿತ್ತು. ಆದರೆ ಮುಂದೆ ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿಯು ಹಿಂದಿನ ಸ್ಥಳದಲ್ಲೇ ಕಂಬಳ ನಡೆಸಲು ತೀರ್ಮಾನಿಸಿದರೆ, ಶ್ರೀ ವೀರ-ವಿಕ್ರಮ ಕಂಬಳ ಸಮಿತಿಯು ಕೊಡಂಗೆಯಲ್ಲಿ ಹೊಸ ಕರೆಗಳನ್ನು ನಿರ್ಮಿಸಿ ಕಂಬಳ ಆಯೋಜಿಸಿದೆ. ಜಿಲ್ಲಾ ಕಂಬಳ ಸಮಿತಿಯು ಕೊಡಂಗೆ ಕಂಬಳಕ್ಕೆ ಅವಕಾಶ ನೀಡಿ ಇನ್ನೊಂದು ತಂಡದ ಜತೆ ಮಾತುಕತೆ ನಡೆಸಿದರೂ ವಿಫಲವಾಗಿತ್ತು. ಹೀಗಾಗಿ ಹೊಕ್ಕಾಡಿಗೋಳಿ ಕಂಬಳ ಆಯೋಜನೆಯ ವಿರುದ್ಧ ಕಾನೂನು ಹೋರಾಟ ನಡೆಸಿದರೂ ಹೈಕೋರ್ಟ್‌ ಹಿಂದೆ ನಡೆಯುತ್ತಿದ್ದ ಸ್ಥಳದಲ್ಲಿ ನಡೆಯುವ ಕಂಬಳಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದೀಗ ಎರಡೂ ಕಡೆ ಕಂಬಳ ಕೂಟ ಯಶಸ್ವಿಯಾಗಿ ನಡೆದಿದೆ.

ಹೊಕ್ಕಾಡಿಗೋಳಿ ಮಹಿಷಮರ್ದಿನಿ ಕಂಬಳದಲ್ಲಿ ಕೂಟದಲ್ಲಿ ಒಟ್ಟು 115 ಕೋಣಗಳ ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಎರಡು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಎರಡು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ ಏಳು ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 15 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 11 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 30 ಜೊತೆ ಮತ್ತು ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 48 ಕೋಣಗಳಿದ್ದವು.

ಹೊಕ್ಕಾಡಿಗೋಳಿ ಕೊಡಂಗೆ ಕಂಬಳದಲ್ಲಿ 99 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಒಂದು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಮೂರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ ಆರು ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 11 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 36 ಜೊತೆ ಮತ್ತು ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 30 ಕೋಣಗಳು ಭಾಗವಹಿಸಿದ್ದವು.

ಫಲಿತಾಂಶಗಳು

ಹೊಕ್ಕಾಡಿಗೋಳಿ “ವೀರ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕನೆಹಲಗೆ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ

ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ನೇರಳ ಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ

ಪ್ರಥಮ: ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”

ಓಡಿಸಿದವರು: ನಕ್ರೆ ಪವನ್ ಮಡಿವಾಳ

ಹಗ್ಗ ಕಿರಿಯ

ಪ್ರಥಮ: ಶಿಬರೂರು ಮುಟ್ಟಿಕಲ್ಲು ಕೀರ್ತನ್ ರಾಜೇಶ್ ಪಾಣಾರ

ಓಡಿಸಿದವರು: ಕಡಂದಲೆ ಮುಡಾಯಿಬೆಟ್ಟು ರೋಹಿತ್ ಪಾಣಾರ್

ದ್ವಿತೀಯ: ಕಕ್ಕೆಪದವು ಕಕ್ಯ ಇಂದಿರಾ ಮಹಾಬಲ ರೈ

ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

ನೇಗಿಲು ಹಿರಿಯ

ಪ್ರಥಮ: ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಾಣಿ ಗುತ್ತು ಪ್ರಸನ್ನ ರಘುರಾಮ್ ನಾಯ್ಕ

ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ

ನೇಗಿಲು ಕಿರಿಯ

ಪ್ರಥಮ: ಹೆಬ್ರಿ ಮಾಡಿಗೆ ಮನೆ ದಿಲೀಪ್ ಶಿವರಾಮ ಹೆಗ್ಡೆ

ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ

ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೀಶ್ ಭಂಡಾರಿ

ಓಡಿಸಿದವರು: ಮಾಳ ಆಧೀಶ್ ಪೂಜಾರಿ

ನೇಗಿಲು ಸಬ್ ಜೂನಿಯರ್

ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ

ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ

ದ್ವಿತೀಯ: ಪಡು ಸಾಂತೂರು ಕಲ್ಯಾಣಿ ನಿವಾಸ ರಾಮ ದೇಜು ಪೂಜಾರಿ

ಓಡಿಸಿದವರು: ಪಡು ಸಾಂತೂರು ಸುಕೇಶ್ ಪೂಜಾರಿ

 

ಪ್ರಥಮ ವರ್ಷದ ಹೊಕ್ಕಾಡಿಗೋಳಿ ಕೊಡಂಗೆ “ವೀರ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕನೆಹಲಗೆ

ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮೆಟ್ಟಿದವರು: ಬೈಂದೂರು ಬಾಸ್ಕರ ದೇವಾಡಿಗ

ಅಡ್ಡ ಹಲಗೆ

ಪ್ರಥಮ: ಹೊಸ್ಮಾರ್ ಸೂರ್ಯಶ್ರೀ ಜ್ಯೋತಿ ಸುರೇಶ್ ಕುಮಾರ್ ಶೆಟ್ಟಿ

ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ

ಹಲಗೆ ಮೆಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ

ಹಗ್ಗ ಹಿರಿಯ

ಪ್ರಥಮ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “ಎ”

ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

ದ್ವಿತೀಯ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “ಬಿ”

ಓಡಿಸಿದವರು: ಬಾರಾಡಿ ನತೀಶ್

ಹಗ್ಗ ಕಿರಿಯ

ಪ್ರಥಮ: ಕಾರ್ಕಳ ನೆಕ್ಲಾಜೆ ಗುತ್ತು ಪ್ರಜ್ವಲ್ ಪ್ರಖ್ಯಾತ್ ಕೋಟ್ಯಾನ್

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚೇತನ್ ಚಂದ್ರಹಾಸ ಸಾಧು ಸನಿಲ್

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ನೇಗಿಲು ಹಿರಿಯ

ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಬಿ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಕಿರಿಯ

ಪ್ರಥಮ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ “ಎ”

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ “ಬಿ”

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ನೇಗಿಲು ಸಬ್ ಜೂನಿಯರ್

ಪ್ರಥಮ: ಶ್ರೀ ಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ

ಓಡಿಸಿದವರು: ಕೋರಿಂಜೆ ಅರುಣ್ ಕುಮಾರ್

ದ್ವಿತೀಯ: ಕಕ್ಕೆಪದವು ಕಿಂಜಾಲು ಶಾಂಭವಿ ಸಂಜೀವ ಶೆಟ್ಟಿ

ಓಡಿಸಿದವರು: ಕಕ್ಕೆಪದವು ಕಿಂಜಾಲು ಪ್ರದೀಪ್ ಶೆಟ್ಟಿ

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.