![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನಶಿಸಿ ಹೋಗುವ ವಿಶಿಷ್ಟ ಕಲೆಗಳಿಗೆ ಪುನರುಜ್ಜೀವನದ ಯೋಗ!
ಕರಾವಳಿಯ ತಳ ಸಮುದಾಯ ಕಲಾ ಪ್ರಕಾರಗಳು ಮುನ್ನೆಲೆಗೆ
Team Udayavani, Feb 15, 2023, 7:22 AM IST
![ನಶಿಸಿ ಹೋಗುವ ವಿಶಿಷ್ಟ ಕಲೆಗಳಿಗೆ ಪುನರುಜ್ಜೀವನದ ಯೋಗ!](https://www.udayavani.com/wp-content/uploads/2023/02/suggi-620x413.jpg)
ಮಂಗಳೂರು: ಕೊರಗರ ಡೊಳ್ಳು, ಸುಗ್ಗಿ ಕುಣಿತ, ಕುಡುಬಿ ನೃತ್ಯ, ಪಾಡ್ದನ ಹೀಗೆ ತಳ ಸಮುದಾಯದ ಅಪರೂಪದ ಜನಪದ ಕಲೆಗಳು ಕಣ್ಮರೆಯಾಗುತ್ತಿವೆ ಎನ್ನುವ ಭೀತಿಯ ನಡುವೆ ಅವುಗಳನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ವಿಶಿಷ್ಟ ಕಾರ್ಯಕ್ರಮವೇ “ಮೂಲಸಂಸ್ಕೃತಿ-ಕನ್ನಡ ಸಂಸ್ಕೃತಿ…’
ಈ ಯೋಜನೆಯಡಿ ಪ್ರತೀ ಜಿಲ್ಲೆಯ ತಳ ಸಮುದಾಯದ 10 ವಿಶೇಷ ಕಲೆಗಳನ್ನು ಗುರುತಿಸಿ, ನುರಿತ ತಜ್ಞರಿಂದ ಆಯ್ದ ಯುವಕರಿಗೆ ತರಬೇತಿ ನೀಡಿ, ಅವರ ಮೂಲಕ ಮುಂದಿನ ಪೀಳಿಗೆಗೆ ತಲುಪಿಸುವ ಯೋಜನೆ ಇದು. ತಳ ಸಮುದಾಯದ ವಿಶಿಷ್ಟ ಮತ್ತು ಅಪರೂಪದ ಕಲೆಗಳು ಹೆಚ್ಚಾಗಿ ಪರಿಶಿಷ್ಟ ಜಾತಿ / ಪಂಗಡದ ಸಮುದಾಯಗಳಲ್ಲಿ ಇರುವುದರಿಂದ ಆ ಸಮುದಾಯಗಳನ್ನು ವಿಶೇಷವಾಗಿ ಗಮನದಲ್ಲಿರಿಸಿ ಅಂತಹ ಕಲಾಪ್ರಕಾರಗಳನ್ನು ಗುರುತಿಸಲಾಗುತ್ತಿದೆ.
ತರಬೇತಿ ಆರಂಭ
ದ.ಕ. ಜಿಲ್ಲೆಯಲ್ಲಿ 5 ಪ್ರಕಾರಗಳ ಕಲೆಗೆ ಸಂಬಂಧಿಸಿ ಆಸಕ್ತ ತಲಾ 10 ಮಂದಿಯನ್ನು ಆಯ್ಕೆ ಮಾಡಿ ವಾರದಿಂದೀಚೆಗೆ ತರಬೇತಿ ನೀಡಲಾಗುತ್ತಿದೆ. ಪಾಡªನ ತರಬೇತಿಯಲ್ಲಿ ಆಯ್ದ ಶಿಬಿರಾರ್ಥಿಗಳಲ್ಲದೆ 60ಕ್ಕೂ ಅಧಿಕ ಯುವ ಜನರು ಜಾತಿ ಭೇದವಿಲ್ಲದೆ ಸ್ವ ಆಸಕ್ತಿಯಿಂದ ಸೇರುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಆಯ್ದ ಕಲಾ ಪ್ರಕಾರಗಳ ತರಬೇತಿ ನಡೆಯುತ್ತಿದೆ.
20 ದಿನಗಳ ಈ ತರಬೇತಿ ಶಿಬಿರ ಆಯೋಜಿಸಲು ಜಿಲ್ಲೆಗೆ ತಲಾ 10 ಲಕ್ಷ ರೂ.ಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಿಸಿದೆ.
ನಶಿಸುತ್ತಿರುವ ವಿಶೇಷ ಕಲೆಗಳನ್ನು ಪುನರುಜ್ಜೀವನಗೊಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಈ ಕಾರ್ಯಕ್ರಮದ ಉದ್ದೇಶ. ಮೊದಲ ಹಂತದಲ್ಲಿ ಪ್ರತೀ ಜಿಲ್ಲೆಯಲ್ಲೂ ತರಬೇತಿ ನೀಡಿ ಅನಂತರ ತರಬೇತಾದ ಯುವಕರಿಂದ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪ್ರದರ್ಶನವೇರ್ಪಡಿಸಿ ಪ್ರಚುರಪಡಿಸುವ ಕಾರ್ಯವಾಗಲಿದೆ.
– ಸುನಿಲ್ ಕುಮಾರ್, ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ
– ಸತ್ಯಾ ಕೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.