ಮಂಗಳೂರು: ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ಲೈಸನ್ಸ್‌ ರದ್ದು

ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು

Team Udayavani, Mar 27, 2023, 1:20 PM IST

ಮಂಗಳೂರು: ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ಲೈಸನ್ಸ್‌ ರದ್ದು

ಮಹಾನಗರ: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಚಾಲನಾ ಪರವಾನಿಗೆ ರದ್ದುಪಡಿಸಲು ಆರ್‌ಟಿಒಗೆ ಶಿಫಾರಸು ಮಾಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ರವಿವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಜರಗಿದ ಪರಿಶಿಷ್ಟ ಜಾತಿ, ಪಂಗಡದವರ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ಕೆಲವರು ಪದೇ ಪದೇ ಸಂಚಾರ ನಿಯಮ ಉಲ್ಲಂ ಸಿ ದಂಡ ಪಾವತಿಸುತ್ತಾರೆ. ದಿನದಲ್ಲಿ ಒಮ್ಮೆ ದಂಡ ಪಾವತಿಸಿದರೆ ಅನಂತರ ನಿಶ್ಚಿಂತೆಯಿಂದ ಸಂಚಾರ ನಿಯಮ ಉಲ್ಲಂಘಿಸಬಹುದು ಎಂಬ ಮನೋಭಾವ ಇನ್ನು ಕೆಲವರಲ್ಲಿದೆ. ಅಂಥವರ ವಿರುದ್ಧ ಕಠಿನ ಕ್ರಮದ ಅಗತ್ಯವಿದೆ. ಹಾಗಾಗಿ ಹೆಲ್ಮೆಟ್‌ ರಹಿತ ಬೈಕ್‌ ಸವಾರಿ, ಟ್ರಿಪಲ್‌ ರೈಡ್‌ ಸಹಿತ ಸಂಚಾರ ನಿಯಮಗಳ ಉಲ್ಲಂಘನೆ ಪುನರಾವರ್ತನೆ ಮಾಡುವವರ ಡ್ರೈವಿಂಗ್‌ ಲೈಸನ್ಸ್‌ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಚಾಲಕರ ವಿರುದ್ಧ ದೂರಿಗೆ ವಾಟ್‌ಆ್ಯಪ್‌ ಸಂಖ್ಯೆ ಕೆಲವು ಖಾಸಗಿ ಬಸ್‌ಗಳ ಚಾಲಕರು ಇಯರ್‌ಫೋನ್‌ ಹಾಕಿಕೊಂಡೇ ಬಸ್‌ ಚಲಾಯಿಸುತ್ತಿರುವುದು ಸಹಿತ ಸಂಚಾರ ನಿಯಮ ಉಲ್ಲಂ ಸುತ್ತಿದ್ದಾರೆ. ಅದನ್ನು ಕೂಡಲೇ ಪೊಲೀಸರಿಗೆ ತಿಳಿಸಲು ಬಸ್‌ಗಳಲ್ಲಿ ವಾಟ್‌ಆ್ಯಪ್‌ ನಂಬರ್‌ ಪ್ರದರ್ಶಿಸಬೇಕು ಎಂದು ಸದಾಶಿವ ಉರ್ವಸ್ಟೋರ್‌ ಮನವಿ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಬೇರೆ ವಾಹನಗಳ ಚಾಲಕರು, ಸವಾರರು ವಾಹನ ಸಂಚಾರ ನಿಯಮ ಉಲ್ಲಂಘಿಸಿದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಗಾಂಜಾ ಹಾವಳಿ
ಚೆಂಬುಗುಡ್ಡೆ ಪರಿಸರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಸಣ್ಣ ವಯಸ್ಸಿನ ಹುಡುಗರು ಕೂಡ ಗಾಂಜಾ ಸೇವನೆ, ಮಾರಾಟದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿದೆ. ಪೊಲೀಸರು ಬೀಟ್‌ ಕರ್ತವ್ಯವನ್ನು ಸರಿಯಾಗಿ ಮಾಡಿ ಭಯ ಹುಟ್ಟಿಸುವ ಅಗತ್ಯವಿದೆ ಎಂದು ದಲಿತ ಮುಂದಾಳು ಓರ್ವರು ಹೇಳಿದಾಗ, ಇಂತಹ ಸೂಕ್ಷ್ಮ ವಿಚಾರಗಳನ್ನು ಪೊಲೀಸರಿಗೆ ತಿಳಿಸಲು ಸಭೆಗಳಿಗಾಗಿ ಕಾಯಬೇಕಿಲ್ಲ. ನೇರವಾಗಿ ಫೋನ್‌ನಲ್ಲಿಯೇ ಮಾಹಿತಿ ನೀಡಬಹುದು. ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಪ್ರತಿಕ್ರಿಯಿಸಿದರು.

ಶಾಲಾ ಮೈದಾನದಲ್ಲೇ ಪಾರ್ಕಿಂಗ್‌ ಮಾಡಿಸಿ
ಬೆಂದೂರ್‌ವೆಲ್‌ನಲ್ಲಿ ಪ್ರತಿದಿನ ಟ್ರಾಫಿಕ್‌ ಜಾಮ್‌ ಆಗುತ್ತಿದೆ. ಇಲ್ಲಿರುವ ಎರಡು ಶಾಲೆಗಳ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಬರುವ ಅವರ ವಾಹನಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುತ್ತಿರುವುದು ಇದಕ್ಕೆ ಮುಖ್ಯ ಕಾರಣ. ಹಾಗಾಗಿ ಅಂತಹ ವಾಹನಗಳನ್ನು ಶಾಲೆಗಳ ಮೈದಾನ ದಲ್ಲಿಯೇ ನಿಲ್ಲಿಸಲು ಸೂಚನೆ ನೀಡಬೇಕು ಎಂದು ಅನಿಲ್‌ ಕಂಕನಾಡಿ ಆಗ್ರಹಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್‌ ಉಪಸ್ಥಿತರಿದ್ದರು. ದಲಿತ ಮುಂದಾಳುಗಳಾದ ಎಸ್‌ಪಿ ಆನಂದ, ವಿಶ್ವನಾಥ ಚೆಂಡ್ತಿಮಾರು, ಅಮಲ ಜ್ಯೋತಿ, ಸುನಿಲ್‌, ಜಗದೀಶ್‌ ಪಾಂಡೇಶ್ವರ ಮೊದಲಾದವರು ವಿವಿಧ ವಿಷಯಗಳನ್ನು ಪ್ರಸ್ತಾವಿಸಿದರು.

ದೂರು ನೀಡಿ ವಾಪಸಾಗುವಾಗ ಬೆದರಿಕೆ!
ಮಟ್ಕಾ ದಂಧೆಯ ಬಗ್ಗೆ ಇತ್ತೀಚೆಗೆ ಪೊಲೀಸ್‌ ಅಧಿಕಾರಿಯೋರ್ವರಿಗೆ ಮಾಹಿತಿ ನೀಡಲಾಗಿತ್ತು. ಆದರೆ ದೂರುದಾರರು ಮನೆ ತಲುಪುವಾಗ ಅವರಿಗೆ ಮಟ್ಕಾ
ದಂಧೆಯವರಿಂದ ಬೆದರಿಕೆ ಕರೆ ಬಂದಿತ್ತು. ದೂರಿನ ವಿಷಯ ಸೋರಿಕೆಯಾಗಿದ್ದು ಹೇಗೆ ಎಂದು ಓರ್ವರು ಪ್ರಶ್ನಿಸಿದರು. ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್‌ ಕುಮಾರ್‌ ಹೇಳಿದರು.

ಪ್ರಸ್ತಾವಗೊಂಡ ಇತರ ಪ್ರಮುಖ ವಿಷಯಗಳು zಉಳ್ಳಾಲದಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‌ ರಹಿತ ಸಂಚಾರ, ಟ್ರಿಪಲ್‌ ರೈಡ್‌ ಸಾಮಾನ್ಯವಾಗಿದೆ. ಪೊಲೀಸರು ಕೇಸು ಹಾಕಲು ಹೆದರುತ್ತಿದ್ದಾರೆ. zತಡರಾತ್ರಿವರೆಗೂ ಡಿಜೆ ಹಾಕುವುದನ್ನು ತಡೆಯಬೇಕು. ಡಿಜೆ ಆಪರೇಟರ್‌ಗಳ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿಟ್ಟುಕೊಳ್ಳಬೇಕು.

ಟಾಪ್ ನ್ಯೂಸ್

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.