ಪ್ಲಾಸ್ಟಿಕ್‌ ತ್ಯಾಜ್ಯ ತಂದರೆ ಅಕ್ಕಿ ಬಹುಮಾನ!

ರಾಮಕುಂಜ: ಕಸ ವಿಲೇವಾರಿ ಜಾಗೃತಿಗೆ ವಿಭಿನ್ನ ಸ್ಪರ್ಧೆ

Team Udayavani, Dec 9, 2019, 5:33 AM IST

RAMAKUNJA-1

ಕಡಬ: ಪ್ಲಾಸ್ಟಿಕ್‌ ತ್ಯಾಜ್ಯ ವಿಲೇವಾರಿ ಜಾಗೃತಿಗಾಗಿ ಸುಳ್ಯ ತಾಲೂಕಿನ ಪಟ್ನೂರು ಹಾಗೂ ಅಮರ ಪಟ್ನೂರು ಗ್ರಾಮದ ಅಮರ ಸಂಘಟನ ಸಮಿತಿಯ ಆಶ್ರಯದಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ರಾಮಕುಂಜ ಗ್ರಾ.ಪಂ. ಸಹಯೋಗದಲ್ಲಿ ಜರಗಿದ ವಿಶಿಷ್ಟ ಕಾರ್ಯಕ್ರಮ ಗಮನ ಸೆಳೆಯಿತು.

ಪ್ಲಾಸ್ಟಿಕ್‌ನ ದುಷ್ಪರಿಣಾಮಗಳು ಮತ್ತು ನಮಗೆ ಬೇಡವಾದ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಯಾವ ರೀತಿ ವ್ಯವಸ್ಥಿತವಾಗಿ ವಿಲೇವಾರಿ ಮಾಡಬಹುದೆನ್ನುವ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಸಲುವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅಮರ ಸಂಘಟನ ಸಮಿತಿಯ ಕಾರ್ಯಕರ್ತರ ಪರಿಸರ ಕಾಳಜಿ ಎಲ್ಲರ ಶ್ಲಾಘನೆಗೆ ಪಾತ್ರವಾಯಿತು.

ವಿದ್ಯಾರ್ಥಿಗಳು ಶಿಕ್ಷಕರ ಪ್ರೋತ್ಸಾಹದಿಂದ ಎಲ್ಲೆಂದರಲ್ಲಿ ಬಿಸುಟ ಪ್ಲಾಸ್ಟಿಕ್‌ಗಳನ್ನು ಹೆಕ್ಕಿ ಸಾರ್ವಜನಿಕರಲ್ಲಿ ಪ್ಲಾಸ್ಟಿಕ್‌ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿಗಳು ನೇರವಾಗಿ ಈ ಕಾರ್ಯ ಕ್ರಮದಲ್ಲಿ ಪಾಲ್ಗೊಂಡರೆ ಅವರ ಮನೆ ಮಂದಿಯೂ ವಿಶೇಷ ಕಾಳಜಿಯಿಂದ ಸ್ಪಂದಿಸಿದ್ದಾರೆ. ತನ್ಮೂಲಕ ವಿದ್ಯಾರ್ಥಿಗಳ ಮನೆ ಹಾಗೂ ಪರಿಸರದಲ್ಲಿಯೂ ಜಾಗೃತಿ ಉಂಟಾಗಿದೆ.

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್‌., ರಾಮಕುಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್‌ ಆರ್‌.ಕೆ., ಪಿಡಿಒ ಜೆರಾಲ್ಡ್‌ ಮಸ್ಕರೇನ್ಹಸ್‌, ಅಮರ ಸಂಘಟನ ಸಮಿತಿಯ ಗೌರವಾಧ್ಯಕ್ಷ ರಜನೀಕಾಂತ್‌, ಅಧ್ಯಕ್ಷ ಶಿವಪ್ರಸಾದ್‌ ದೊಡ್ಡಹಿತ್ಲು, ಕಾರ್ಯದರ್ಶಿ ಶಶಿಕಾಂತ್‌ ಮಿತ್ತೂರು, ಶಾಲಾ ಮುಖ್ಯ ಶಿಕ್ಷಕ ಸತೀಶ್‌ ಭಟ್‌ ಉದ್ಘಾಟನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಬಾಲಚಂದ್ರ ಮುಚ್ಚಿಂತಾಯ ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಕುರಿತು ಮಾತನಾಡಿದರು.

ಅಕ್ಕಿ ಬಹುಮಾನ
“ಒಂದು ಕೆಜಿ ಪ್ಲಾಸ್ಟಿಕ್‌ತ್ಯಾಜ್ಯ ತಂದರೆ ಒಂದು ಕೆಜಿ ಅಕ್ಕಿ ಬಹುಮಾನ’ ಘೋಷಣೆಯೊಂದಿಗೆ ಸಂಘಟಿಸಲಾದ ಈ ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 400 ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದರು. ಸ್ಪರ್ಧಿಗಳಿಂದ ಒಟ್ಟು 280 ಕೆಜಿ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹವಾಯಿತು. 1 ಕೆಜಿಗಿಂತ ಕಡಿಮೆ ಪ್ಲಾಸ್ಟಿಕ್‌ ತಂದ ಸ್ಪರ್ಧಿಗೂ 1 ಕೆಜಿ ಅಕ್ಕಿ ವಿತರಿಸಲಾಯಿತು. ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿ ಹೃತಿಕ್‌ ಅತೀ ಹೆಚ್ಚು (27 ಕೆಜಿ) ಪ್ಲಾಸ್ಟಿಕ್‌ ಸಂಗ್ರಹಿಸಿದರು. 8ನೇ ತರಗತಿಯ ಲಿಕಿತ್‌ ಗೌಡ 23 ಕೆಜಿ ಪ್ಲಾಸ್ಟಿಕ್‌ ಸಂಗ್ರಹಿಸಿದರು. ಬಹುಮಾನವಾಗಿ ಒಟ್ಟು 350 ಕೆಜಿ ಅಕ್ಕಿ ವಿತರಣೆಯಾಯಿತು.

 ವಿಶಿಷ್ಟ ಕಾರ್ಯಕ್ರಮ
ಎಂಜಿನಿಯರ್‌, ಡಾಕ್ಟರ್‌, ಡ್ರೈವರ್‌, ಫೂಟೋಗ್ರಾಫರ್‌, ಕೂಲಿ, ಸರಕಾರಿ ಉದ್ಯೋಗಿಗಳು ಹೀಗೆ ಎಲ್ಲ ವರ್ಗಗಳ, ಎಲ್ಲ ವಯೋಮಾನದ ಸುಮಾರು 60 ಮಂದಿ ಸಮಾನ ಮನಸ್ಕರು ಇರುವ ಸಂಘಟನೆ ನಮ್ಮದು. ಎರಡು ವರ್ಷಗಳಿಂದ ನಾವು ಶಿಕ್ಷಣ, ಕ್ರೀಡೆ, ಸೇವೆ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಕೊಡಗು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿಯೂ ನಾವು ಆಹಾರ, ಆರ್ಥಿಕ ನೆರವು ಹಾಗೂ ಸೇವೆ ನೀಡಿದ್ದೇವೆ.
-ರಜನೀಕಾಂತ್‌,ಗೌರವಾಧ್ಯಕ್ಷ,ಅಮರ ಸಂಘಟನ ಸಮಿತಿ

ವಾಹನ ಮಾಡಿ ತಂದಿದ್ದಾರೆ
ಮಕ್ಕಳು ಖುಷಿಯಿಂದಲೇ ಪಾಲ್ಗೊಂಡಿದ್ದಾರೆ. ಬಹಳ ಆಸಕ್ತಿಯಿಂದ ಪ್ಲಾಸ್ಟಿಕ್‌ ಹೆಕ್ಕಿ ಸಂಗ್ರಹಿಸಿದ್ದಾರೆ. ಕೆಲವು ಮಕ್ಕಳಂತೂ ತಾವು ಸಂಗ್ರಹಿಸಿದ ಪ್ಲಾಸ್ಟಿಕ್‌ನ್ನು ವಾಹನ ಮಾಡಿಕೊಂಡು ಶಾಲೆಗೆ ತಂದಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಸ್ವತ್ಛತೆಯ ಕುರಿತು ಮತ್ತು ಪ್ಲಾಸ್ಟಿಕ್‌ ತ್ಯಾಜ್ಯ ವಿಲೇವಾರಿಯ ಮಹತ್ವದ ಅರಿವು ಮೂಡಿಸುವ ಕೆಲಸ ಆಗಿದೆ.
– ಪ್ರಶಾಂತ್‌ ಆರ್‌.ಕೆ.
ಅಧ್ಯಕ್ಷ, ರಾಮಕುಂಜ ಗ್ರಾ.ಪಂ.

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.