ರಿಕ್ಷಾ ಚಾಲಕ-ಮಾಲಕರ ಹೋರಾಟ ಸಮಿತಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಒಕ್ಕೊರಲ ಆಗ್ರಹ

Team Udayavani, Jul 18, 2019, 5:00 AM IST

u-15

ರಿಕ್ಷಾ ಚಾಲಕ-ಮಾಲಕರ ಹೋರಾಟ ಸಮಿತಿಯ ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ ಮಾತನಾಡಿದರು.

ಪುತ್ತೂರು: ತಾಲೂಕು ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ, ಸ್ನೇಹ ಸಂಗಮ ಮತ್ತು ಎಸ್‌ಡಿಎಸಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಬುಧವಾರ ನಗರದ ಮಿನಿ ವಿಧಾನಸೌಧದ ಎದುರು ನಡೆಯಿತು.

ಬಡ ರಿಕ್ಷಾ ಚಾಲಕರೇ ಗುರಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ, ಬಡವರು ಮತ್ತು ಪ್ರಾಮಾಣಿಕ ಸೇವೆ ನೀಡುವ ರಿಕ್ಷಾ ಚಾಲಕರ ಮೇಲೆ ಎಲ್ಲ ರೀತಿಯ ಪ್ರಹಾರ ನಡೆಸುವ ಕೆಲಸ ಇಂದು ನಡೆಯುತ್ತಿದೆ. ಬಿಡಿಭಾಗಗಳು ಹಾಗೂ ಪೆಟ್ರೋಲ್‌ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರ ಬದುಕು ತತ್ತರಿಸಿದೆ. ಶಾಲೆಗೆ ಮಕ್ಕಳನ್ನು ಭದ್ರತೆಯಿಂದ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಹೊಂದಿ ರುವ ರಿಕ್ಷಾಗಳಿಗೆ ಕಾನೂನಿನ ಮಿತಿ ಹೇರಿ ಅವರ ಬದುಕಿಗೆ ಮತ್ತೂಂದು ಪೆಟ್ಟು ಕೊಡಲಾಗಿದೆ. ಪೊಲೀಸ್‌ ಇಲಾಖೆ ದೊಡ್ಡ ಕುಳಗಳನ್ನು ಬಿಟ್ಟು ಬಡ ರಿಕ್ಷಾ ಚಾಲಕರ ಮೇಲೆ ಕೇಸು ದಾಖಲಿಸುತ್ತಿರುವುದು ಎಷ್ಟು ಸರಿ? ಎಂದವರು ಖಾರವಾಗಿ ಪ್ರಶ್ನಿಸಿದರು.

ಸಿಕ್ಕಾಪಟ್ಟೆ ಪರ್ಮಿಟ್‌ ಬೇಡ
ಸ್ನೇಹ ಸಂಗಮ ಆಟೋ ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, ಪ್ರಸ್ತುತ ರಿಕ್ಷಾಗಳಿಗೆ ಸಿಕ್ಕಾಪಟ್ಟೆ ಪರ್ಮಿಟ್‌ ನೀಡುವುದರಿಂದ ಸಮಸ್ಯೆ ಉಂಟಾಗಿದೆ. ಈ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದ ಅವರು, ತಾಲೂಕಿನಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ರಿಕ್ಷಾಗಳ ವಿಚಾರದಲ್ಲಿ ಯಾವುದೇ ಸಮಸ್ಯೆ ಬಂದಿಲ್ಲ. ಆದರೂ ರಿಕ್ಷಾಗಳನ್ನೇ ಟಾರ್ಗೆಟ್‌ ಮಾಡಿ ನಿಯಮಗಳನ್ನು ಹೇರಲಾಗುತ್ತಿದೆ. ರಿಕ್ಷಾ ಚಾಲಕರ ಮೇಲೆ ಪೊಲೀಸ್‌ ವ್ಯವಸ್ಥೆ, ಅಧಿಕಾರಿಗಳು ಕರುಣೆ ತೋರಬೇಕು ಎಂದರು.

ಹೋರಾಟ ಅನಿವಾರ್ಯ
ಎಸ್‌ಡಿಎಸಿಯು ಜಿಲ್ಲಾ ಸಂಚಾಲಕ ಜಾಬಿರ್‌ ಅರಿಯಡ್ಕ ಮಾತನಾಡಿ, ಹಗಲಿರುಳು ಜನಸಾಮಾನ್ಯರ ಸೇವೆ ಗೈಯುವ ಆಟೋ ಚಾಲಕರನ್ನು ತೃತೀಯ ದರ್ಜೆಯಾಗಿ ಕಾಣುವ ಪರಿಸ್ಥಿತಿ ಉಂಟಾಗಿದೆ. ಕೇವಲ ಆರು ಮಕ್ಕಳನ್ನು ಕರೆದುಕೊಂಡು ಹೋಗುವ ಕಾನೂನು ಹೊರಡಿಸಿರುವ ಸರಕಾರ, ಅಧಿಕಾರಿಗಳು ಕಾನೂನಿನ ಮೂಲಕ ಆಟೋ ಚಾಲಕರನ್ನು ದಮನಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಚಾಲಕರ ಸಮಸ್ಯೆಯ ಕುರಿತು ಗಮನಹರಿಸಿ ಕಾನೂನು ಸಡಿಲಗೊಳಿಸುವಲ್ಲಿ ಪ್ರಯತ್ನಿಸಲಿ. ಇಲ್ಲದಿದ್ದಲ್ಲಿ ಆಟೋ ಚಾಲಕರ ಕುಟುಂಬದವರನ್ನು ಸೇರಿಸಿ ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದರು.

12 ಬೇಡಿಕೆಗಳ ಮನವಿ
ಆಟೋ ಚಾಲಕ-ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ ಕುಲಾಲ್‌ ಸ್ವಾಗತಿಸಿದರು. ಬಳಿಕ ಸಂಘದ ವತಿಯಿಂದ ಸುಮಾರು 12 ಬೇಡಿಕೆಗಳ ಮನವಿ ಪತ್ರವನ್ನು ಸಹಾಯಕ ಕಮಿಷನರ್‌ ಮೂಲಕ ಸರಕಾರಕ್ಕೆ ನೀಡಲಾಯಿತು.

ಸ್ವಚ್ಛತೆಯ ಮಾದರಿ
ಪ್ರತಿಭಟನ ಸಭೆಯ ಮೊದಲು ಸಮಿತಿಯ ಗೌರವಾಧ್ಯಕ್ಷ ಸಂಜೀವ ನಾಯಕ್‌ ಕಲ್ಲೇಗ ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಸಮಿತಿಯ ಪದಾಧಿಕಾರಿಗಳು ಸ್ಮಾರಕದ ಆವರಣದಲ್ಲಿ ಹುಲ್ಲುಗಳನ್ನು ಕೀಳುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಕಾನೂನು ಸಲಹೆಗಾರ ದೇವಾನಂದ ಕೆ., ಹರಿಣಾಕ್ಷಿ ಜೆ. ಶೆಟ್ಟಿ, ಪ್ರಮುಖರಾದ ಬಾತೀಶ್‌ ಬಡಕ್ಕೋಡಿ, ಇಸ್ಮಾಯಿಲ್‌ ಬೊಳುವಾರು, ಸಿಲ್ವೆಸ್ಟರ್‌ ಡಿ’ಸೋಜಾ ಪಾಲ್ಗೊಂಡಿದ್ದರು.

ಅನಗತ್ಯ ನಿಯಮ
ಒಂದು ಮಗುವಿಗೆ ತಿಂಗಳಿಗೆ 500 ರೂ.ನಂತೆ ತೆಗೆದುಕೊಂಡು 6 ಮಕ್ಕಳನ್ನು ರಿಕ್ಷಾದಲ್ಲಿ ಕರೆದುಕೊಂಡು ಹೋದರೆ ತಿಂಗಳಿಗೆ 3 ಸಾವಿರ ರೂ. ಮಾತ್ರ ಆಗುತ್ತದೆ. ಬೆಳಗ್ಗೆ, ಸಂಜೆ ಮತ್ತು ಮಧ್ಯದಲ್ಲೂ ಮಕ್ಕಳನ್ನು ಮನೆಗೆ ಬಿಡುವ ರಿಕ್ಷಾಗಳಿಗೆ ಇದು ಯಾವುದಕ್ಕೂ ಸಾಕಾಗುವುದಿಲ್ಲ. 4 ಕಿ.ಮೀ. ವ್ಯಾಪ್ತಿಯಲ್ಲಿ ಒಂದು ಮಗುವಿನಿಂದ ಕನಿಷ್ಠ 1 ಸಾವಿರ ರೂ. ಪಡೆಯುವುದು ಅನಿವಾರ್ಯವಾಗುತ್ತದೆ. ಇದರ ಜತೆಗೆ ಹಲವು ಅನಗತ್ಯ ನಿಯಮಗಳನ್ನೂ ಹೇರಲಾಗಿದೆ.
– ಜಯರಾಮ ಕುಲಾಲ್‌ , ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.