ಹಬ್ಬಗಳ ಹಿನ್ನೆಲೆ: ವಾಹನ ನೋಂದಣಿಯಲ್ಲಿ ಏರಿಕೆ


Team Udayavani, Nov 19, 2021, 12:33 AM IST

ಹಬ್ಬಗಳ ಹಿನ್ನೆಲೆ: ವಾಹನ ನೋಂದಣಿಯಲ್ಲಿ ಏರಿಕೆ

ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ವಾಹನಗಳ ಖರೀದಿ ಏರಿಕೆಯಾಗಿದ್ದು, ನವೆಂಬರ್‌ನಲ್ಲಿ ಒಟ್ಟು 4,961 ನೋಂದಣಿಯಾಗಿವೆ. ಕೆಲವು ತಿಂಗಳ ಬಳಿಕ ವಾಹನ ಖರೀದಿಗೆ ಇಷ್ಟೊಂದು ಬೇಡಿಕೆ ಇದೇ ಮೊದಲು.

ಈ ವರ್ಷಾರಂಭದಲ್ಲಿ ಕೊರೊನಾ 2ನೇ ಅಲೆಯ ಪ್ರಭಾವ ವಾಹನ ಖರೀದಿಯತ್ತ ಬೀರಿ ಎಪ್ರಿಲ್‌, ಮೇ, ಜೂನ್‌ನಲ್ಲಿ ವಹಿವಾಟು ಕುಂಠಿತಗೊಂಡಿತ್ತು. ಜುಲೈಯಿಂದ ಮತ್ತೆ ಚೇತರಿಕೆಯತ್ತ ಸಾಗಿದ್ದು, ಅಕ್ಟೋಬರ್‌ ಆರಂಭದಲ್ಲಿ ನವರಾತ್ರಿ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ವಾಹನ ಖರೀದಿ ತುಸು ಏರಿಕೆ ಕಂಡಿತ್ತು. ಇದೀಗ ಪ್ರತೀ ದಿನ 250ಕ್ಕೂ ಹೆಚ್ಚು ನೋಂದಣಿಯಾಗುತ್ತಿವೆ.

ಕಳೆದ ವರ್ಷ ವಾಹನ ಖರೀದಿ ನಿರೀಕ್ಷಿತ  ಮಟ್ಟದಲ್ಲಿರಲಿಲ್ಲ. ಆದರೆ ಈ ವರ್ಷ  ಕಳೆದ ವರ್ಷಕ್ಕಿಂತ ವಾಹನ ಖರೀದಿ ಏರಿಕೆ  ಸಾಧ್ಯತೆ ಇದೆ. ಮಂಗಳೂರು ಆರ್‌ಟಿಒ ವ್ಯಾಪ್ತಿಯಲ್ಲಿ ಕಳೆದ ವರ್ಷ 32,151 ವಾಹನ ನೋಂದಣಿಗೊಂಡಿದ್ದು, ಈ ವರ್ಷ ಈವರೆಗೆ 31,578 ನೋಂದಣಿ ಯಾಗಿವೆ. ಪುತ್ತೂರು ಆರ್‌ಟಿಒದಲ್ಲಿ ಕಳೆದ ವರ್ಷ 10,024 ವಾಹನ, ಈ ವರ್ಷ 9,643 ವಾಹನ, ಬಂಟ್ವಾಳ ತಾಲೂಕಿನಲ್ಲಿ ಕಳೆದ ವರ್ಷ 6,024 ವಾಹನ, ಈ ವರ್ಷ 5,237 ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ 23,228 ವಾಹನ, ಈ ವರ್ಷ 22,452 ವಾಹನ ನೋಂದಣಿಯಾಗಿವೆ.

ಎಲೆಕ್ಟ್ರಿಕ್ ವಾಹನದತ್ತ ಬೇಡಿಕೆ:

ತೈಲ ಬೆಲೆ ಏರಿಕೆಯ ಜತೆಗೆ ಸರಕಾರದ ಸಬ್ಸಿಡಿ ಲಾಭ ಪಡೆಯುವ ಉದ್ದೇಶದಿಂದ ಪರಿಸರ ಸ್ನೇಹಿ ವಾಹನದತ್ತ ಜನ ಆಕರ್ಷಿತರಾಗುತ್ತಿದ್ದಾರೆ. ನವೆಂಬರ್‌ನಲ್ಲಿ ಕರಾವಳಿಯಲ್ಲಿ 222 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿವೆ. ಮಂಗಳೂರು ಆರ್‌ಟಿಒದಲ್ಲಿ 126, ಬಂಟ್ವಾಳದಲ್ಲಿ 15, ಪುತ್ತೂರಿನಲ್ಲಿ 30 ಮತ್ತು ಉಡುಪಿಯಲ್ಲಿ 51 ನೋಂದಣಿಯಾಗಿವೆ.

ಕರಾವಳಿಯಲ್ಲಿ ಕಳೆದ ಎರಡು ವಾರಗಳಲ್ಲಿ ಖರೀದಿಯ ವಿವರ:

ಆರ್‌ಟಿಒ        ಬೈಕ್‌   ಕಾರು

ಮಂಗಳೂರು   2,005   517

ಬಂಟ್ವಾಳ       153      37

ಪುತ್ತೂರು       413      83

ಉಡುಪಿ         1,027    252

ನವೆಂಬರ್ನಲ್ಲಿ ನೋಂದಣಿ

ಆರ್ಟಿಒ        ವಾಹನ ಖರೀದಿ

ಮಂಗಳೂರು   2,675

ಪುತ್ತೂರು       573

ಬಂಟ್ವಾಳ       287

ಉಡುಪಿ         1,426

ಒಟ್ಟು  4,961

ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ವಾಹನ ನೋಂದಣಿ ಏರಿಕೆಯಾಗುತ್ತಿದೆ. ಈ ಹಿಂದೆ ಕೊರೊನಾ ಕಾರಣ ಆಟೋಮೊಬೈಲ್‌ ಕ್ಷೇತ್ರದತ್ತ ಗ್ರಾಹಕರು ಅಷ್ಟೊಂದು ಆಸಕ್ತಿ ತೋರುತ್ತಿರಲಿಲ್ಲ. ಕೊರೊನಾ ಕಡಿಮೆಯಾಗು ತ್ತಿದ್ದಂತೆ ಖರೀದಿ ಚೇತರಿಕೆ ಕಾಣುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಆರ್. ವರ್ಣೇಕರ್, ಮಂಗಳೂರು ಆರ್ಟಿಒ

ನವೀನ್ ಭಟ್ ಇಳಂತಿಲ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.