ಮಣ್ಣು ಸುರಿದು ನದಿ ಅತಿಕ್ರಮಣ: ಆರೋಪ 


Team Udayavani, Nov 12, 2018, 11:24 AM IST

12-november-6.gif

ಉಪ್ಪಿನಂಗಡಿ : ನದಿ ಪಾತ್ರದ ಕಲ್ಲು ಬಂಡೆಯನ್ನು ಬಳಸಿಕೊಂಡು, ಮಣ್ಣು ತುಂಬಿಸಿ ನದಿಪಾತ್ರದ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ವ್ಯಕ್ತಿಯೊಬ್ಬರು ಯತ್ನಿಸುತ್ತಿರುವುದು ಕಂಡುಬಂದಿದ್ದು, ಇದಕ್ಕೆ 34 ನೆಕ್ಕಿಲಾಡಿ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾಗಿದೆ.

ಪುತ್ತೂರು ತಾಲೂಕು 34 ನೆಕ್ಕಿಲಾಡಿ ಗ್ರಾಮದ ಕುಡಿಪ್ಪಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಜಾಗವಿರುವ ವ್ಯಕ್ತಿಯೊಬ್ಬರು ನದಿಯನ್ನು ಅತಿಕ್ರಮಿಸುತ್ತಿದ್ದು, ಸುಮಾರು ಒಂದು ಎಕ್ರೆ ಜಾಗದಲ್ಲಿ ಮಣ್ಣು ಹಾಕಿ, ಸಮತಟ್ಟು ಮಾಡಿಸುತ್ತಿದ್ದಾರೆ. ಟಿಪ್ಪರ್‌ ಮೂಲಕ ಬೇರೆ ಕಡೆಯಿಂದ ಮಣ್ಣು ತಂದು ಸುರಿಯುತ್ತಿದ್ದಾರೆ. ಈವರೆಗೆ ಸಾವಿರಕ್ಕೂ ಹೆಚ್ಚು ಲೋಡ್‌ ಮಣ್ಣು ಹಾಕಿದ್ದಾರೆ. ತನ್ನ ಜಮೀನಿನ ಎತ್ತರಕ್ಕೆ ಮಣ್ಣು ಹಾಕುತ್ತಿದ್ದು, ಈಗಾಗಲೇ ಅರ್ಧ ಎಕ್ರೆಯಷ್ಟು ಜಾಗ ಸಮತಟ್ಟಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಮಣ್ಣು ಸುರಿಯುವುದರಿಂದ ನದಿಯ ಪ್ರಾಕೃತಿಕ ಹರಿವಿಗೆ ಅಡ್ಡಿಯಾಗುತ್ತದೆ. ನೀರಿಗೆ ತಡೆಯುಂಟಾದರೆ ನದಿ ದಿಕ್ಕು ಬದಲಿಸುವ ಸಾಧ್ಯತೆಯಿದೆ. ನದಿಯಲ್ಲಿ ಒರತೆ ಕಡಿಮೆಯಾಗುವ ಅಪಾಯವಿದೆ. ಮಣ್ಣು ಬಿದ್ದು, ನೀರು ಮಲಿನವಾಗುತ್ತಿದ್ದು, ಕೆಂಪು ಬಣ್ಣಕ್ಕೆ ತಿರುಗಿದೆ. ನೀರಿನ ಕೊರತೆಯಾಗಿ ಮೀನುಗಳು, ಇತರ ಜಲಚರಗಳು ಸಾಯುತ್ತಿದ್ದು, ದುರ್ವಾಸನೆ ಹರಡುತ್ತಿದೆ. ಈ ಜಾಗದ ಪಕ್ಕದಲ್ಲೇ ಮತ್ತೊಂದು  ಕಡೆಯಲ್ಲೂ ಅಲ್ಪ ಪ್ರಮಾಣದ ಅತಿಕ್ರಮಣವಾಗಿದ್ದು, ಮಳೆ ನೀರಿಗೆ ನೀರು ಕೊಚ್ಚಿ ಹೋಗಿ, ನದಿ ದಡದಲ್ಲಿ ನಿಂತಿದೆ. ಈ ಜಾಗದಲ್ಲಿ ನೀರು ಹರಿಯಲು ತಡೆಯುಂಯಾಗಿದೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 ವರದಿಗೆ ಸೂಚನೆ
ಖಾಸಗಿ ವ್ಯಕ್ತಿಗಳು ನದಿ ಪರಂಬೋಕು ಜಾಗವನ್ನು ಅತಿಕ್ರಮಿಸಿದರೆ ಕ್ರಮ ಜರಗಿಸುವೆ. ಅಲ್ಲದೆ, ತತ್‌ಕ್ಷಣವೇ ಗ್ರಾಮ ಕರಣಿಕರಿಗೆ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸುತ್ತೇನೆ.
– ಜಯವಿಕ್ರಮ
ಕಂದಾಯ ನಿರೀಕ್ಷಕರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.