ತುಂಬಿ ಹರಿಯುತ್ತಿರುವ ನೇತ್ರಾವತಿ ; ಅಪಾಯದ ಮಟ್ಟದಲ್ಲಿ ಇಳಿಕೆ
ದಕ್ಷಿಣ ಕನ್ನಡ ಭಾಗದಲ್ಲಿ ಮಳೆ ಇಳಿಮುಖ ; ಅಪಾಯದ ಮಟ್ಟದ ಸನಿಹ ಬಂದ ಜೀವನದಿ
Team Udayavani, Aug 7, 2019, 2:22 PM IST
ಬಂಟ್ವಾಳ : ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿ ಮೈದುಂಬಿ ಹರಿಯುತ್ತಿದೆ. ಮಂಗಳವಾರ ದಕ್ಷಿಣ ಕನ್ನಡದ ವಿವಿಧ ಕಡೆಗಳಲ್ಲಿ ಮುಖ್ಯವಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದೀ ಪಾತ್ರಗಳಲ್ಲಿ ಮತ್ತು ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ನದಿಗೆ ಹರಿದುಬಂದಿತ್ತು.
ತುಂಬೆಯಲ್ಲಿ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಗಳಾಗಿದ್ದು ಬುಧವಾರ ಬೆಳಗ್ಗೆ ನದಿ ನೀರಿನ ಮಟ್ಟ 8.4 ಮೀಟರ್ ಇತ್ತು. ಆದರೆ ಬಳಿಕ ನೆರೆ ನೀರು ಇಳಿದ ಪರಿಣಾಮ ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ಮಳೆ ಇಳಿಮುಖವಾದ ಕಾರಣ ಇದೀಗ ನೇತ್ರಾವತಿಯಲ್ಲಿ ಅಪಾಯದ ಮಟ್ಟ ಇಳಿಕೆಯಾಗಿದೆ. ಬುಧವಾರ ಮಧ್ಯಾಹ್ನದ ಹೊತ್ತಿಗೆ ನೇತ್ರಾವತಿ ನೀರಿನ ಮಟ್ಟ 8.2 ಮೀಟರ್ ಗಳಷ್ಟಿತ್ತು ಎಂದು ತಿಳಿದುಬಂದಿದೆ.
ಆದರೆ ನೇತ್ರಾವತಿ ನದೀ ಪಾತ್ರಗಳು ಹಲವು ಕಡೆಗಳಲ್ಲಿ ಮುಳುಗಡೆಗೊಂಡಿದೆ. ಅಜಿಲಮೊಗರು, ಸರಪಾಡಿ ಮೊದಲಾದ ಕಡೆಗಳಲ್ಲಿ ತಗ್ಗುಪ್ರದೇಶಗಳಿಗೆ ನದಿ ನೀರಿ ನುಗ್ಗಿತ್ತು. ಇನ್ನು ಕುಮಾರಧಾರಾ ಹರಿಯುವ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಮುಳುಗಡೆಯಾಗಿರುವ ಕುರಿತು ವರದಿ ಲಭ್ಯವಾಗಿದೆ.
ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಸಹಜ ಸ್ಥಿತಿ ಇದೆ. ಕುಮಾರಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇನ್ನೊಂದು ಬದಿಯಿಂದ ಹರಿಯುವ ನೇತ್ರಾವತಿಯಲ್ಲಿ ಹರಿವು ಸಾಮಾನ್ಯವಾಗಿದೆ ಎಂದು ತಿಳಿದುಬಂದಿದೆ. ಸದ್ಯದ ಲೆಕ್ಕಾಚಾರದಂತೆ ಉಪ್ಪಿನಂಗಡಿಯಲ್ಲಿ ನದಿನೀರಿನ ಮಟ್ಟ 30 ಮೀಟರ್ ಗಳಷ್ಟಾದರೆ ‘ಸಂಗಮ’ವಾಗುತ್ತದೆ.
ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪುತ್ತೂರು ಸಹಾಯಕ ಕಮಿಷನರ್ ಕೃಷ್ಣಮೂರ್ತಿ, ತಾಲೂಕು ಕಂದಾಯ ನಿರೀಕ್ಷಕ ವಿಜಯ ವಿಕ್ರಮ ಅವರು ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಉಪ್ಪಿನಂಗಡಿಗೆ ಭೇಟಿ ನೀಡಿ ನದಿ ನೀರಿನ ಮಟ್ಟ ಹಾಗೂ ಒಟ್ಟಾರೆ ಪರಿಸ್ಥಿತಿಯ ಅವಲೋಕನ ನಡೆಸಿದರು.
ಸುದ್ದಿ-ಚಿತ್ರ-ವಿಡಿಯೋ ಮಾಹಿತಿ: ಕಿರಣ್ ಸರಪಾಡಿ, ಎಂ.ಎಸ್. ಭಟ್, ಉಪ್ಪಿನಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ