ಭಟ್ಕಳ ಮೂಲದ ನಾಲ್ವರ ಸಾವು, ಓರ್ವ ಗಂಭೀರ

ಬ್ರಹ್ಮರಕೂಟ್ಲು: ಬುಲೆಟ್‌ ಟ್ಯಾಂಕರ್‌ -ಟವೇರಾ ಢಿಕ್ಕಿ

Team Udayavani, Jul 20, 2019, 5:00 AM IST

ACIDENT

ಬಂಟ್ವಾಳ: ಬ್ರಹ್ಮರಕೂಟ್ಲು ಎಂಬಲ್ಲಿ ಗ್ಯಾಸ್‌ ಟಾಂಕರ್‌ ಹಾಗೂ ಟವೇರಾ ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

ಬಂಟ್ವಾಳ: ಬುಲೆಟ್‌ ಟ್ಯಾಂಕರ್‌ ಮತ್ತು ಟವೇರಾ ವಾಹನ ಢಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ದುರ್ಘ‌ಟನೆ ಬ್ರಹ್ಮರಕೂಟ್ಲು ಬ್ರಹ್ಮಸನ್ನಿಧಿ ಹಿಂಬದಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಘಟನೆಯಲ್ಲಿ ಒಬ್ಬರಿಗೆ ಗಂಭೀರ, ಆರು ಮಂದಿಗೆ ಸಾಧಾರಣ ಗಾಯಗಳಾಗಿವೆ. ಮೃತರೆಲ್ಲರೂ ಟವೇರಾ ವಾಹನ ಪ್ರಯಾಣಿಕರಾಗಿದ್ದು, ಭಟ್ಕಳ ಮೂಲದವರು. ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಕರಿದ್ದು, ಚಾಲಕ ಪವಾಡ ಸದೃಶವಾಗಿ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಗಾಯಾಳುಗಳನ್ನು ತುಂಬೆ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತರನ್ನು ಗೋವಿಂದ (59), ಪದ್ಮಾವತಿ (55), ಗಣೇಶ (30), ನಾಗರಾಜ (23) ಎಂದು ಗುರುತಿಸಲಾಗಿದೆ. ಶಿವಾನಂದ (40) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಜ್ಯೋತಿ (30), ಮಕ್ಕಳಾದ ಯಶ್ವಿ‌ನ್‌( 2), ವರ್ಷಾ (1); ನಿಕಟ ಸಂಬಂಧಿಗಳಾದ ಯಮುನಾ (25), ಅಕ್ಷಯ್‌ ( 22), ಗಣೇಶ (19) ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಮೃತರು ಮತ್ತು ಗಾಯಾಳುಗಳು ನಿಕಟ ಸಂಬಂಧಿಗಳಾಗಿದ್ದು, ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೈಲೂರಿನವರು.

ತೀರ್ಥಯಾತ್ರೆಗೆ ಹೊರಟವರು
ಟವೇರಾ ವಾಹನದಲ್ಲಿದ್ದವರು ಸಮೀಪ ಸಂಬಂಧಿಗಳಾಗಿದ್ದು, ಭಟ್ಕಳದ ಬೈಲೂರಿನಿಂದ ವಿವಿಧ ತೀರ್ಥಕ್ಷೇತ್ರಗಳನ್ನು ಸಂದರ್ಶಿಸಲು ಪ್ರಯಾಣ ಬೆಳೆಸಿದ್ದರು. ಗುರುವಾರ ಕೊಲ್ಲೂರು, ಶೃಂಗೇರಿ, ಹೊರನಾಡು ಕ್ಷೇತ್ರಗಳನ್ನು ಸಂದರ್ಶಿಸಿ ರಾತ್ರಿ ಧರ್ಮಸ್ಥಳದಲ್ಲಿ ತಂಗಿದ್ದರು. ಬೆಳಗ್ಗೆ ದೇವರ ದರ್ಶನ ಮಾಡಿ ಅಲ್ಲಿಂದ ಹೊರಟಿದ್ದು, ಮಧ್ಯಾಹ್ನ ಪಿಲಿಕುಳ ನಿಸರ್ಗಧಾಮವನ್ನು ಸಂದರ್ಶಿಸಿ ಅನಂತರ ಊರಿಗೆ ಮರಳುವ ಯೋಚನೆಯಲ್ಲಿದ್ದರು.

ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಟವೇರಾದ ಚಾಲಕ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗಿಂತ ಸ್ವಲ್ಪ ಹಿಂದೆ ಅಗಲ ಕಿರಿದಾದ ಸೇತುವೆಯ ಕೊನೆಯಲ್ಲಿ ಮಂಗಳೂರು ಕಡೆಯಿಂದ ಬರುತ್ತಿದ್ದ ಬುಲೆಟ್‌ ಟ್ಯಾಂಕರನ್ನು ಕಂಡು ಬ್ರೇಕ್‌ ಹಾಕಿದ್ದಾರೆ. ವೇಗವಾಗಿದ್ದ ಟವೇರಾ ನಿಯಂತ್ರಣ ತಪ್ಪಿ ತಿರುಚಿ ಮುಂದೆ ಹೋಗಿ ಟ್ಯಾಂಕರ್‌ನ ಎಡಬದಿಗೆ ಢಿಕ್ಕಿಯಾಗಿದ್ದು, ರಸ್ತೆಬದಿಯ ತಡೆಗೋಡೆಯಿಂದಾಗಿ ಕೆಳಕ್ಕುರುಳದೆ ನಿಂತಿದೆ. ಈ ಸಂದರ್ಭ ಟವೆರಾ ಬಾಗಿಲು ತೆರೆದುಕೊಂಡಿದ್ದು, ಮೃತರಿಬ್ಬರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ತಡೆಗೋಡೆ ಇಲ್ಲದಿದ್ದರೆ ಟವೆರಾ ಮೂವತ್ತು ಅಡಿ ಆಳಕ್ಕೆ ಉರುಳಿಬೀಳುವ ಸಾಧ್ಯತೆ ಇತ್ತು.

ಘಟನೆ ನಡೆದ ತತ್‌ಕ್ಷಣ ಸ್ಥಳೀಯರು ಮತ್ತು ಟೋಲ್‌ಗೇಟ್‌ ಸಿಬಂದಿ ಸಂದೀಪ್‌ ಧಾವಿಸಿ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಬಂಟ್ವಾಳ ವೃತ್ತ ನಿರೀಕ್ಷಕರು ಅದೇ ದಾರಿಯಲ್ಲಿ ಬರುತ್ತಿದ್ದು, ತತ್‌ಕ್ಷಣ ಸಂಚಾರಕ್ಕೆ ಅಡಚಣೆ ಆಗದಂತೆ ವಾಹನ ತೆರವಿಗೆ ಕೆಲವೇ ನಿಮಿಷಗಳಲ್ಲಿ ಕ್ರಮ ಕೈಗೊಂಡರು.

ಘಟನೆಯ ಬಳಿಕ ಸ್ವಲ್ಪ ಹೊತ್ತು ಹೆದ್ದಾರಿಯಲ್ಲಿ ಸಂಚಾರ ಅಡಚಣೆ ಆಗಿತ್ತು. ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆಗಳ ಹೆಚ್ಚುವರಿ ಸಿಬಂದಿ ಸ್ಥಳಕ್ಕೆ ಧಾವಿಸಿ ಸಂಚಾರ ಅಡಚಣೆ ತೆರವು ಮಾಡಿದರು.

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಜಿಲ್ಲಾ ಪೊಲೀಸ್‌ ಅಧೀಕ್ಷಕ ಲಕ್ಷ್ಮೀಪ್ರಸಾದ್‌ ಮಂಗಳೂರಿಂದ ಧಾವಿಸಿ ಬಂದರಲ್ಲದೆ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಎಎಸ್‌ಪಿ ಸೈದುಲ್‌ ಅಡಾವತ್‌, ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್‌ ಟಿ.ಡಿ., ಸಬ್‌ ಇನ್‌ಸ್ಪೆಕ್ಟರ್‌ ಚಂದ್ರಶೇಖರ, ಪ್ರಸನ್ನ, ಮಂಜುನಾಥ್‌ ಸ್ಥಳದಲ್ಲಿದ್ದು ಸಂಚಾರ ಅಡಚಣೆ ಆಗದಂತೆ ಕ್ರಮ ಕೈಗೊಂಡರು.

ಬಂಟ್ವಾಳ ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌., ಕಂದಾಯ ಅಧಿಕಾರಿ ರಾಮ ಕಾಟಿಪಳ್ಳ, ಕಳ್ಳಿಗೆ ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್‌, ಸಿಬಂದಿ ಅಶೋಕ್‌, ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿದ್ದರು.

ಹತ್ತಿರದ ಸಂಬಂಧಿಗಳು
ದುರ್ಘ‌ಟನೆಯಲ್ಲಿ ಮೃತಪಟ್ಟ ಗೋವಿಂದ ಮೊಗೇರ ಮತ್ತು ಪದ್ಮಾವತಿ ಗಂಡ-ಹೆಂಡಿರು. ಮೃತ ನಾಗರಾಜ ಇವರ ಪುತ್ರ. ಪುತ್ರಿ ಯಮುನಾ ಗಾಯಗೊಂಡಿದ್ದರೆ ಅವರ ಪತಿ ಗಣೇಶ ಮೃತಪಟ್ಟಿದ್ದಾರೆ. ಗೋವಿಂದ ಅವರ ಭಾವ ಶಿವಾನಂದ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದು, ಅವರ ಪತ್ನಿ ಜ್ಯೋತಿ ಕೂಡ ಗಾಯಗೊಂಡಿದ್ದಾರೆ. ಈ ದಂಪತಿಯ ಪುಟ್ಟ ಮಕ್ಕಳಾದ ಯಶ್ವಿ‌ನ್‌ ಮತ್ತು ವರ್ಷಾ ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಗಣೇಶ್‌ ಗೋವಿಂದ-ಪದ್ಮಾವತಿ ದಂಪತಿಯ ಪುತ್ರನಾಗಿದ್ದರೆ, ಅಕ್ಷಯ್‌ ಮೃತ ಗೋವಿಂದ ಅವರ ಸಹೋದರನ ಪುತ್ರ.

ಚಾಲಕ ಪಾರು
ದುರ್ಘ‌ಟನೆಯಲ್ಲಿ ಟವೇರಾ ಚಾಲಕ ರಾಜೇಶ್‌ ತರಚು ಗಾಯ ಕೂಡ ಇಲ್ಲದೆ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಘಟನೆಯ ಬಳಿಕ ಪೊಲೀಸರು ಚಾಲಕನನ್ನು ಪ್ರಶ್ನಿಸಿದಾಗ ಆತ ಘಟನೆಯಿಂದ ದಿೂ¾ಢನಾಗಿದ್ದು, ಉತ್ತರಿಸಲಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚಿನ್ನಾಭರಣ ಕಾಣೆ ?
ಗಂಭೀರ ಸ್ವರೂಪದ ಘಟನೆ ನಡೆದು ಗಾಯಾಳುಗಳು ಜೀವನ್ಮರಣ ಸ್ಥಿತಿಯಲ್ಲಿದ್ದಾಗಲೂ ಗಾಯಾಳೊಬ್ಬರ ಚಿನ್ನಾಭರಣ ಕಾಣೆಯಾಗಿದೆ. ಘಟನೆ ಸಂದರ್ಭ ಅದು ಬಿದ್ದು ಹೋಗಿದೆಯೋ ಯಾರಾದರೂ ಎಗರಿಸಿದ್ದಾರೆಯೋ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಚಿನ್ನಾಭರಣ ಕಾಣೆಯಾದ ಬಗ್ಗೆ ವದಂತಿ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.