ಬೆಳ್ಳಾರೆ: ವ್ಯಾನ್ – ಸ್ಕೂಟಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು
Team Udayavani, Jan 14, 2020, 3:06 PM IST
ಸುಳ್ಯ: ವ್ಯಾನ್ ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಗಂಭೀರ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ನಡೆದಿದೆ.
ಮೃತಪಟ್ಟ ಸ್ಕೂಟಿ ಸವಾರರನ್ನು ಕೊಲ್ಲಮೊಗ್ರ ಚಾಂತಳದ ಚಿದಾನಂದ (40) ಎಂದು ಗುರುತಿಸಲಾಗಿದೆ
ಕನಕಮಜಲಿನಲ್ಲಿ ತನ್ನ ಸಂಬಂಧಿಕರ ಮನೆಯ ಗೃಹಪ್ರವೇಶ ಪೂರ್ವ ಕಾರ್ಯಕ್ರಮಕ್ಕೆ ಸೋಮವಾರ ಹೋದವರು ಇಂದು ವಾಪಾಸು ಮನೆಗೆ ತೆರಳುತ್ತಿದ್ದಾಗ ಕಾವಿನಮೂಲೆಯಲ್ಲಿ ಈ ಘಟನೆ ನಡೆದಿದೆ.
ವ್ಯಾನ್ ಬೆಳ್ಳಾರೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿತ್ತು. ಹಾಗೂ ಚಿದಾನಂದ ಅವರು ಸೋಣಂಗೇರಿ ಕಡೆಯಿಂದ ಬೆಳ್ಳಾರೆಗೆ ಹೋಗುತ್ತಿದ್ದರು. ಢಿಕ್ಕಿಯ ಪರಿಣಾಮ ಸ್ಕೂಟಿ ಸವಾರ ಚಿದಾನಂದ ಅವರ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ವಿನೀತ್ ಎಂಬವರು ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ