ಕಜೆ: ಮಂಜಲ್ಪಡು-ಕೊಡಿಪ್ಪಾಡಿ ರಸ್ತೆ ಕುಸಿತ, ಸಂಚಾರ ಆತಂಕಿತ


Team Udayavani, Jul 8, 2018, 12:01 PM IST

8-july-10.jpg

ಕೊಡಿಪ್ಪಾಡಿ: ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಮಂಜಲ್ಪಡ್ಪು  -ಕೊಡಿಪ್ಪಾಡಿ ಜಿ.ಪಂ. ರಸ್ತೆ ಮಧ್ಯ ಭಾಗದಿಂದಲೇ ಕುಸಿದು ಬಿದ್ದಿರುವ ಕಾರಣ, ವಾಹನ ಸಂಚಾರಕ್ಕೆ ತೊಡಕಾಗಿದೆ. ಪುತ್ತೂರು ನಗರಸಭೆ ವ್ಯಾಪ್ತಿಯ ಮಂಜಲ್ಪಡ್ಪು ಹತ್ತಿರದ ಕಜೆ ಎಂಬಲ್ಲಿ ಈ ರಸ್ತೆ ಕುಸಿತ ಉಂಟಾಗಿದೆ. ಘನ ವಾಹನಗಳ ಸಂಚಾರ ಅಸಾಧ್ಯವಾಗಿರುವ ಈ ರಸ್ತೆಯಲ್ಲಿ ಕಾರು, ಆಟೋ ಹಾಗೂ ದ್ವಿಚಕ್ರ ವಾಹನಗಳು ಸಂಚರಿಸುವಷ್ಟು ಮಾತ್ರ ಜಾಗ ಉಳಿದಿದೆ. ಆದರೆ, ರಸ್ತೆ ನಿರಂತರ ಕುಸಿಯುತ್ತಿರುವ ಕಾರಣ, ಸಂಪರ್ಕ ಸಂಪೂರ್ಣ ಮುಚ್ಚಿಹೋಗುವ ಭೀತಿ ಎದುರಾಗಿದೆ.

ಮಾಣಿ – ಮೈಸೂರು ಹೆದ್ದಾರಿಯಿಂದ ಮಂಜಲ್ಪಡ್ಪು ಮೂಲಕ ಕೊಡಿಪ್ಪಾಡಿ ಜನಾರ್ದನ ದೇವಸ್ಥಾನ, ಕೊಡಿಪ್ಪಾಡಿ ಗ್ರಾ.ಪಂ. ಕಚೇರಿ ಹಾಗೂ ಕೊಡಿಪ್ಪಾಡಿ ಸರಕಾರಿ ಶಾಲೆ ವರೆಗೆ ತಲುಪಲು ಇದು ಎಕೈಕ ಸಂಪರ್ಕ ರಸ್ತೆಯಾಗಿದೆ. ದಿನ ನಿತ್ಯ ಶಾಲಾ ಕಾಲೇಜು ಮತ್ತಿತರ ಕೆಲಸ ಕಾರ್ಯಗಳಿಗೆ ತೆರಳುವ ನೂರಾರುಜನರು ಇದೇ ರಸ್ತೆಯನ್ನು ಅವಲಂಬಿಸಿದಾರೆ. ಇದೇ ರಸ್ತೆಯಲ್ಲಿ ಕುಸಿತ ಉಂಟಾದಲ್ಲಿಂದ ಕೊಂಚ ದೂರದಲ್ಲಿ ಮರವೊಂದು ಬರೆಯ ಮಣ್ಣಿನ ಸಮೇತ ರಸ್ತೆಗೆ ಉರುಳಿದೆ.

ಈ ರಸ್ತೆಯಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳು, ಇತರ ವಾಹನಗಳು ನಿತ್ಯ ಸಂಚರಿಸುತ್ತಿವೆ. ಏಕೈಕ ಸಂಪರ್ಕ ರಸ್ತೆ ಕುರಿತ ಉಂಟಾದಲ್ಲಿ ಸ್ಥಳೀಯರು ತೊಂದರೆ ಎದುರಿಸಲಿದ್ದಾರೆ. ಈ ಜನರಿಗೆ ಪುತ್ತೂರಿನಿಂದ ಕಬಕಕ್ಕೆ ಬಂದು, ಕುಳ ಗ್ರಾಮದ ಕುಂಡಡ್ಕ ಸಂಪರ್ಕದ ಜಿ.ಪಂ. ರಸ್ತೆ ಮೂಲಕ ಅರ್ಕ ಗ್ರಾಮವನ್ನು ಬಳಸಿ ಕೊಡಿಪ್ಪಾಡಿಗೆ ತಲುಪಬೇಕಾಗಿದೆ. ಇದು ಸುಮಾರು 10 ಕಿ.ಮೀ. ಸುತ್ತು ಬಳಸಿನ ದಾರಿ.

ಈ ಮೊದಲು ಜಿ.ಪಂ. ಅಧಿಕಾರಿಯೊಬ್ಬರು ಆಗಮಿಸಿ, ವೀಕ್ಷಣೆ ಮಾಡಿದರೂ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ಶನಿವಾರ ಬೆಳಗ್ಗೆಯೇ ರಸ್ತೆ ಮಧ್ಯೆ ಕುಸಿತ ಉಂಟಾಗಿದ್ದರೂ ಅಧಿಕಾರಿಗಳು ಸಂಜೆ ವರೆಗೂ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿಲ್ಲ. ವಾಹನಗಳ ಸುರಕ್ಷತೆ ದೃಷ್ಟಿಯಿಂದ ಕುಸಿತದ ಸ್ಥಳದ ಸುತ್ತ ಬೇಲಿಯನ್ನು ಅಳವಡಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.