ಸುಸಜ್ಜಿತ ಕಿರುರಸ್ತೆಯಾಗುತ್ತಿದೆ ಮಣ್ಣಗುಡ್ಡೆಯ ʼಸ್ವಚ್ಛತೆ ಹಾದಿ’!

ಒಳಚರಂಡಿ ಪೈಪ್‌ ಅಳವಡಿಕೆ ಪೂರ್ಣ : ರಸ್ತೆ ಅಭಿವೃದ್ಧಿ ಪ್ರಗತಿಯಲ್ಲಿ

Team Udayavani, Jun 14, 2022, 3:34 PM IST

15

ಮಣ್ಣಗುಡ್ಡೆ: ನಗರದ ಸೌಂದರ್ಯಕ್ಕೆ ತೊಡಕಾಗಿದ್ದ ಹಾಗೂ ಹಲವು ದಶಕದಿಂದ ನಿರುಪಯುಕ್ತ ಸ್ಥಿತಿಯಲ್ಲಿದ್ದ ಮಣಗುಡ್ಡೆಯ ಸ್ವಚ್ಛತೆ ಹಾದಿ (ಸ್ಕ್ಯಾವೆಂಜರ್‌ ಲೈನ್‌) ಇದೀಗ ಸುಸಜ್ಜಿತ ರಸ್ತೆಯಾಗಿ ಮಾರ್ಪಾಡುಗೊಂಡಿದೆ. ಮಣ್ಣಗುಡ್ಡೆ ಪರಿಸರದಲ್ಲಿ ಮಾತ್ರ ಇರುವ 12ಕ್ಕೂ ಅಧಿಕ ಸ್ಕ್ಯಾವೆಂಜರ್‌ ಲೈನ್‌ ಈ ಮುಖೇನ ಸಂಪರ್ಕ ರಸ್ತೆಯಾಗಿ ಬಳಕೆಯಾಗಲಿದೆ.

ಮಂಗಳೂರು ಮಹಾನಗರ ಪಾಲಿಕೆ ಒಳಚರಂಡಿ ಪೈಪ್‌ ಅಳವಡಿಕೆಗೆ ಈ ಹಾದಿಯನ್ನು ಬಳಸಲಾಗಿದ್ದು, ಪೈಪ್‌ ಅಳವಡಿಕೆ ಪೂರ್ಣಗೊಂಡ ಬಳಿಕ ಡಾಮರು ಹಾಕುವ ಮೂಲಕ ಸಂಪರ್ಕ ರಸ್ತೆಯಾಗಿ ಮಾರ್ಪಾಡು ಗೊಳಿಸ ಲಾಗಿದೆ. ಕುಡ್ಸೆಂಪ್‌ ಯೋಜನೆಯಡಿ ಇಲ್ಲಿ 1.6 ಕೋ. ರೂ. ವೆಚ್ಚದಲ್ಲಿ ಒಳಚರಂಡಿ ಪೈಪ್‌ ಅಳವಡಿಕೆ ಪೂರ್ಣಗೊಂಡಿದೆ. 1.5 ಕೋ.ರೂ. ವೆಚ್ಚದಲ್ಲಿ ರಸ್ತೆಯನ್ನು ಸುಸಜ್ಜಿತಗೊಳಿಸುವ ಕಾಮಗಾರಿ ಇಲ್ಲಿ ಪ್ರಗತಿಯಲ್ಲಿದೆ.

ಮಣ್ಣಗುಡ್ಡೆಯ ಬಹುತೇಕ ಅಡ್ಡ ರಸ್ತೆಯ, ಮನೆಗಳ ಸಾಲಿನ ಹಿಂಭಾಗದಲ್ಲಿ ಇಂತಹ ಪ್ರತ್ಯೇಕ ಹಾದಿಯನ್ನು ಕಾಣಬಹುದಾಗಿದೆ. ಒಳಚರಂಡಿ ವ್ಯವಸ್ಥೆಯ ಪೈಪ್‌ ಲೈನ್‌ ಹಾಗೂ ಮ್ಯಾನ್‌ಹೋಲ್‌ಗ‌ಳನ್ನು ಬಳಿಕ ಈ ಹಾದಿಯಲ್ಲಿ ಅಳವಡಿಸಲಾಗಿತ್ತು. ಆದರೆ ಕಾಲಾನಂತರ ಈ ಹಾದಿ ಬಳಕೆಯಾಗದೆ ಹುಲ್ಲು, ಪೊದೆ ಬೆಳೆದಿತ್ತು. ತ್ಯಾಜ್ಯ ತಂದು ಇಲ್ಲೇ ಸುರಿಯುತ್ತಿದ್ದರು. ನಗರದ ಸ್ವಚ್ಛತೆಗೆ ಈ ಹಾದಿಯೇ ಅಡ್ಡಿಯಾಗಿತ್ತು.

ಪಾಲಿಕೆಯ ಜಾಗವಾದ ಕಾರಣ ಸ್ಥಳೀಯ ನಿವಾಸಿಗಳು ಇದನ್ನು ಅಭಿವೃದ್ಧಿ ಪಡಿಸಲು ಮನಸ್ಸು ಮಾಡಿಲ್ಲ. ಪಾಲಿಕೆಯಿಂದ ಈ ಹಿಂದೆ 3 ಹಾದಿಗೆ ಡಾಮರು ಹಾಕಿ ಕಿರು ರಸ್ತೆಯಾಗಿ ಅಭಿವೃದ್ದಿ ಪಡಿಸಲಾಗಿತ್ತು. ಕೆಲವು ಕಡೆ ಸ್ಥಳೀಯರೇ ಇಂಟರ್‌ ಲಾಕ್‌ ಅಳವಡಿಸಿ ಹಾದಿಯನ್ನು ಸ್ವತ್ಛವಾಗಿಸಿದ್ದರು. ಉಳಿದ ಹಾದಿಗಳು ಕೊಳಚೆ ರಾಶಿಯಿಂದ ಪಾಳು ಬಿದ್ದಿದ್ದವು. ಈಗ ಎಲ್ಲ ಹಾದಿಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ಸ್ಕ್ಯಾವೆಂಜರ್‌ ಲೈನ್‌; ಏನಿದು?

ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಬಿಳಿಯರು ಹೆಚ್ಚಾಗಿ ಮಂಗಳೂರಿನ ಮಣ್ಣಗುಡ್ಡೆ, ಗಾಂಧಿನಗರ ಪ್ರದೇಶದಲ್ಲಿ ವಾಸವಾಗಿದ್ದರು. ಈ ಪ್ರದೇಶದಲ್ಲಿ ವ್ಯವಸ್ಥಿತವಾಗಿ ಮನೆಗಳ ಸಾಲು, ಮುಂಭಾಗದಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಆಗ ಒಳಚರಂಡಿ ವ್ಯವಸ್ಥೆ ಇರಲಿಲ್ಲ. ಮಲ ಹೊರುವ ಅನಿಷ್ಠ ಪದ್ಧತಿ ಜಾರಿಯಲ್ಲಿತ್ತು. ಅದಕ್ಕಾಗಿ ಮನೆಗಳ ಹಿಂಭಾಗದಲ್ಲಿ ಸ್ವಚ್ಛಗೊಳಿಸುವವರು ಅಡ್ಡಾಡಲು ಪ್ರತ್ಯೇಕವಾಗಿ ಸ್ಕ್ಯಾವೆಂಜರ್‌ ಲೈನ್‌ ನಿರ್ಮಿಸಲಾಗಿತ್ತು. ಮಣ್ಣಗುಡ್ಡೆ ಪ್ರದೇಶದಲ್ಲಿ ಮಾತ್ರ ಇಂತಹ ವ್ಯವಸ್ಥೆ ಇತ್ತು.

ಕಿರುರಸ್ತೆಯಾಗಿ ಅಭಿವೃದ್ಧಿ:  ಸ್ಕ್ಯಾವೆಂಜರ್‌ ಲೈನ್‌ ಎಂದು ಈ ಹಿಂದೆ ಕರೆಯಲ್ಪಡುತ್ತಿದ್ದ ಮಣ್ಣಗುಡ್ಡೆ ಪರಿಸರದ 12 ಓಣಿಗಳನ್ನು ಕಿರು ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ನಿರುಪಯುಕ್ತವಾಗಿದ್ದ ಈ ಓಣಿಗಳಲ್ಲಿ ಕೆಲವರು ತ್ಯಾಜ್ಯ ಸುರಿಯುತ್ತಿದ್ದ ಕಾರಣ ಸ್ವಚ್ಛತೆಗೆ ಅಡ್ಡಿಯಾಗಿತ್ತು. ಈಗ ಪರಿಸರ ಸ್ವಚ್ಛವಾಗಿದೆ. –ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

 

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.