ಬೈಕ್ಗೆ ಕಾರು ಢಿಕ್ಕಿ; ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಸಾವು
Team Udayavani, May 8, 2022, 9:51 PM IST
ಸುರತ್ಕಲ್ : ಸುರತ್ಕಲ್ ಆ್ಯಕ್ಸಿಸ್ ಬ್ಯಾಂಕ್ ಮುಂಭಾಗದ ಹೆದ್ದಾರಿಯಲ್ಲಿ ರವಿವಾರ ಬೈಕ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಕುಮಾರ್(68) ಸಾವನ್ನಪ್ಪಿದ್ದಾರೆ.
ಸುರತ್ಕಲ್ ಜಂಕ್ಷನ್ನಲ್ಲಿ ಇಡ್ಯಾ ಕಡೆ ಹೋಗುವ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ತತ್ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ.
ಲಯನ್ಸ್ ಸೇವಾ ಟ್ರಸ್ಟ್ ಕಾರ್ಯದರ್ಶಿಯಾಗಿದ್ದರು. ಧೀರ್ಘ ಕಾಲದಿಂದ ಎಲ್ಐಸಿ ಏಜಂಟ್ ಆಗಿ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸುರತ್ಕಲ್ ಇಡ್ಯಾ ಬಿಲ್ಲವ ಸಂಘದ ಕೋಶಾಧಿಕಾರಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಅವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.
ಇದನ್ನೂ ಓದಿ :ದುಡ್ಡು ಕೊಟ್ಟು ಸಿಎಂ ಆದ ಬೊಮ್ಮಾಯಿ: ಸಿದ್ದರಾಮಯ್ಯ