ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು
Team Udayavani, May 18, 2022, 1:10 AM IST
ಮೂಡುಬಿದಿರೆ: ಮಾಲಕನ ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಯೊಬ್ಬರು ಅಪಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗಾಂಧೀ ನಗರದಲ್ಲಿ ಸಂಭವಿಸಿದೆ.
ಪುತ್ತಿಗೆ ಗ್ರಾಮದ ಹಂಡೇಲು ಕಾಪಿಕಾಡು ನಿವಾಸಿ ವಿನಯ್ (48) ಮೃತರು. ಗಾಂಧೀನಗರದಲ್ಲಿ ಬೀಡಿ ಕಾಂಟ್ರ್ಯಾಕ್ಟರ್ ಆಗಿರುವ ಸಂಜೀವ ಅವರು ಸೋಮವಾರ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಅವರ ಬೀಡಿ ಬ್ರ್ಯಾಂಚ್ನ ಸಹಾಯಕ ವಿನಯ್ ಅವರು ಅಂತಿಮ ದರ್ಶನ ಪಡೆಯಲು ತೆರಳಿದ್ದರು. ಅಂತಿಮ ದರ್ಶನ ಮುಗಿಸಿ ರಾತ್ರಿ ಗಾಂಧೀನಗರದ ಬಳಿ ರಸ್ತೆ ದಾಟುವ ವೇಳೆ ವಿನಯ್ ಅವರಿಗೆ ಕಾರೊಂದು ಢಿಕ್ಕಿ ಹೊಡೆದಿದೆ.
ತೀವ್ರ ಗಾಯಗೊಂಡ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ