Road Mishap; ಉಳ್ಳಾಲ: ಡಿವೈಡರ್‌ಗೆ ಬಡಿದ ಬೈಕ್‌: ಇಬ್ಬರು ಸಾವು


Team Udayavani, Mar 26, 2024, 12:44 AM IST

Road Mishap; ಉಳ್ಳಾಲ: ಡಿವೈಡರ್‌ಗೆ ಬಡಿದ ಬೈಕ್‌: ಇಬ್ಬರು ಸಾವು

ಉಳ್ಳಾಲ: ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ನಾಟೆಕಲ್‌ ತಿರುವು ಬಳಿ ರವಿವಾರ ರಾತ್ರಿ ನಡೆದ ಬೈಕ್‌ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಹಳೆಯಂಗಡಿ ತೋಕೂರು ಬಸ್‌ ನಿಲ್ದಾಣದ ಬಳಿಯ ನಿವಾಸಿ ಶ್ರೀನಿಧಿ (30) ಮತ್ತು ಶಕ್ತಿನಗರ ಕಾರ್ಮಿಕ ಕಾಲನಿ ನಿವಾಸಿ ಯತೀಶ್‌ ದೇವಾಡಿಗ ಮೃತಪಟ್ಟವರು.

ಕೊಣಾಜೆ ಮೋಡಿಜೇರ ಬಳಿಯ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್‌ ಮಂಗಳೂರು ಕಡೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಶ್ರೀ ನಿಧಿ ವಿವಾಹಿತರಾಗಿದ್ದು, ಇಬ್ಬರು ಮಕ್ಕಳನ್ನು ಆಗಲಿದ್ದಾರೆ. ಯತೀಶ್‌ ಎಲೆಕ್ಟ್ರೀಷಿಯನ್‌ ಆಗಿದ್ದು ಶಕ್ತಿನಗರದ ಖಾಸಗಿ ಕಾಲೇಜಿನಲ್ಲಿ ಮೈಂಟೆನೆನ್ಸ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಶ್ರೀನಿಧಿ ಅವರ ಸಂಬಂಧಿಕರ ಮನೆಯ ಗೃಹಪ್ರವೇಶ ಕೊಣಾಜೆಯಲ್ಲಿ ನಡೆದಿದ್ದು, ಅವರು ತನ್ನ ಸ್ಕೂಟರ್‌ನಲ್ಲಿ ಅಲ್ಲಿಂದ ಆಗಮಿಸಿ ಮಂಗಳೂರಿನಿಂದ ಸ್ನೇಹಿತ ಯತೀಶ್‌ ದೇವಾಡಿಗ ಅವರ ಬೈಕ್‌ನಲ್ಲಿ ಆಗಮಿಸಿದ್ದರು. ಬೈಕ್‌, ತಿಬ್ಲೆಪದವು ಮತ್ತು ನಾಟೆಕಲ್‌ ನಡುವಿನ ಗ್ರೀನ್‌ ಗ್ರೌಂಡ್‌ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಇನ್ನೊಂದು ಬದಿಯ ರಸ್ತೆಗೆ ಬೈಕ್‌ ಸಮೇತ ಇಬ್ಬರೂ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ನಾಟೆಕಲ್‌ ಕಡೆಯಿಂದ ಅಸೈಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು ಈ ಇಬ್ಬರ ದೇಹದ ಮೇಲೆ ಹರಿದಿದ್ದು, ಶ್ರೀನಿಧಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟರು. ಸವಾರ ಯತೀಶ್‌ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಅಪಘಾತದ ವೀಡಿಯೋ ವೈರಲ್‌
ಬೈಕ್‌ ನೇರವಾಗಿ ಡಿವೈಡರ್‌ಗೆ ಬಡಿದು ಈ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಬೇರೊಂದು ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಇರಿಸಿದ್ದ ವೀಡಿಯೋ ಕೆಮರಾದಲ್ಲಿ ಅಪಘಾತದ ಅಂತಿಮ ದೃಶ್ಯ ದಾಖಲಾಗಿದ್ದು, ಬೈಕ್‌ ಏಕಾಏಕಿ ಡಿವೈಡರ್‌ನಿಂದ ಹಾರಿ ಇನ್ನೊಂದು ಬದಿಯ ರಸ್ತೆಗೆ ಎಸೆಯಲ್ಪಟ್ಟಿರುವುದು ದಾಖಲಾಗಿದ್ದು, ಇದೇ ಸಂದರ್ಭದಲ್ಲಿ ಕೆಂಪು ಬಣ್ಣದ ಕಾರೊಂದು ರಸ್ತೆಗೆ ಬಿದ್ದಿದ್ದ ಇಬ್ಬರ ಮೇಲೆ ಹರಿದಿರುವ ದೃಶ್ಯ ಸೆರೆಯಾಗಿದೆ. ಘಟನೆಯ ಬಳಿಕ ಕಾರು ನಾಪತ್ತೆಯಾಗಿದ್ದು, ವೀಡಿಯೋ ಆಧಾರದ ಮೇಲೆ ಕಾರಿನ ಶೋಧ ಕಾರ್ಯ ನಡೆಯುತ್ತಿದೆ. ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.