ರಸ್ತೆ ನಾಮಕರಣ ವಿವಾದ: ಮೂಡದ ಒಮ್ಮತ; ಪರಿಶೀಲನ ಸಮಿತಿ ರಚನೆ


Team Udayavani, Aug 5, 2017, 11:30 AM IST

05-MLR-18.jpg

ಮಂಗಳೂರು: ನಗರದ ಕ್ಯಾಥೊಲಿಕ್‌ ಕ್ಲಬ್‌ನಿಂದ ಅಂಬೇಡ್ಕರ್‌ವೃತ್ತದವರೆಗಿನ ರಸ್ತೆಗೆ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂಬುದಾಗಿ ನಾಮಕರಣ ಮಾಡುವ ಕುರಿತು ಸರಕಾರ ಮಾಡಿರುವ ಆದೇಶಕ್ಕೆ ಸಂಬಂಧಪಟ್ಟಂತೆ ಉಂಟಾಗಿರುವ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆ ಒಮ್ಮತದ ತೀರ್ಮಾನ ಕಂಡುಕೊಳ್ಳಲು ವಿಫಲವಾಗಿದೆ. ವಾಸ್ತವಿಕ ಅಂಶಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರವನ್ನು  ಕೈಗೊಳ್ಳುವ ನಿಟ್ಟಿನಲ್ಲಿ ನಾಲ್ಕು ಮಂದಿ ಸದಸ್ಯರ ಪರಿಶೀಲನ ಸಮಿತಿಯನ್ನು ರಚಿಸುವುದಾಗಿ ಜಿಲ್ಲಾಡಳಿತ ಪ್ರಕಟಿಸಿದೆ.

ಈ ರಸ್ತೆಗೆ ಈಗಾಗಲೇ ಸಂತ ಅಲೋಶಿಯಸ್‌ ಕಾಲೇಜು ರಸ್ತೆ ಎಂಬುದಾಗಿ ಹೆಸರಿದ್ದು ಇದಕ್ಕೆ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂಬುದಾಗಿ ಮರು ನಾಮಕರಣ ಮಾಡಬಾರದು ಎಂದು ಸಂತ ಅಲೋಶಿಯಸ್‌ ಸಮೂಹ ಸಂಸ್ಥೆ ಆಕ್ಷೇಪ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಆದೇಶಕ್ಕೆ ಸರಕಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ವಿವಾದವನ್ನು ಸೌಹಾರ್ದ ಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರ ವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ರಸ್ತೆಗೆ ಈದ್ಗಾ ಮಸೀದಿ ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟ ಹಾಗೂ ಬಾವುಟಗುಡ್ಡೆ ರಸ್ತೆ ಎಂದು ನಾಮಕರಣ ಮಾಡಬೇಕು ಎಂಬುದಾಗಿ ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ಕೂಡ ಆಗ್ರಹಿಸಿದೆ.

ಪರಿಶೀಲನ ಸಮಿತಿ ರಚನೆ
ವಿಜಯ ಬ್ಯಾಂಕ್‌ ವರ್ಕರ್ ಆರ್ಗನೈಜೇಶನ್‌, ಅಲೋಶಿಯಸ್‌ ಸಮೂಹ ಸಂಸ್ಥೆ , ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟ, ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ತಮ್ಮ ಬೇಡಿಕೆಗಳಿಗೆ ಪೂರಕವಾಗಿ ವಾದಗಳನ್ನು ಹಾಗೂ ದಾಖಲೆಗಳನ್ನು ಮಂಡಿಸಿ ತಮ್ಮ ಬೇಡಿಕೆಯನ್ನು ಪುರಸ್ಕರಿಸಬೇಕು ಎಂದು ಮನವಿ ಮಾಡಿತು. ಒಮ್ಮತದ ನಿರ್ಧಾರ ಮೂಡಿಬರದ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲ ದಾಖಲೆಗಳನ್ನು ಹಾಗೂ ವಾಸ್ತವಿಕ ಅಂಶಗಳನ್ನು ಅಧ್ಯಯನ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಲು ಸಮಿತಿಯೊಂದನ್ನು ರಚಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ.ಜೆ. ಜಗದೀಶ್‌ ಅವರು ಪ್ರಕಟಿಸಿದರು. 

ಬೇಡಿಕೆಗಳ ಪರವಾಗಿ ಸಮರ್ಥನೆ
ಸಂತ ಅಲೋಶಿಯಸ್‌ ಸಮೂಹ ಸಂಸ್ಥೆಗಳ ಪರವಾಗಿ ಮಾತನಾಡಿದ ರೆಕ್ಟರ್‌ ಫಾ| ಡೈನೀಶಿಯಸ್‌ ವಾಝ್, ಕುಲಸಚಿವ ಪ್ರೊ | ನರಹರಿ, ಹಳೆ ವಿದ್ಯಾರ್ಥಿ ಸಂಘದ ಎನ್‌.ಜಿ. ಮೋಹನ್‌ ಅವರು, 1976ರಲ್ಲೇ ಈ ರಸ್ತೆಗೆ ಸಂತ ಅಲೋಶಿಯಸ್‌ ರಸ್ತೆ ಎಂದು ನಾಮಕರಣವಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಪೂರಕ ದಾಖಲೆಗಳಿವೆ ಎಂದರು. 

ವಿಜಯ ಬ್ಯಾಂಕ್‌ ವರ್ಕರ್ ಆರ್ಗನೈಜೇಶನ್‌ ಪರವಾಗಿ ಮಾತನಾಡಿದ ಮೂಲ್ಕಿ ಕರುಣಾಕರ ಶೆಟ್ಟಿ, ಮೂಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿ ಬಳಗದ ಪರವಾಗಿ ರಾಜಗೋಪಾಲ ರೈ ಹಾಗೂ ಹನುಮಂತ ಕಾಮತ್‌ ಅವರು ಇದು ಎಲ್‌ಎಚ್‌ಎಚ್‌ ರಸ್ತೆ ಆಗಿದ್ದು ಅಲೋಶಿಯಸ್‌ ಕಾಲೇಜು ರಸ್ತೆ ಎಂದು ಹೆಸರಿರಲಿಲ್ಲ. ನಾಮಕರಣಕ್ಕೆ ಸಂಬಂಧ ಪಟ್ಟಂತೆ ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ಎಂದು ನಾಮಕರಣ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ ಎಂದರು. 

ದ.ಕ. ಮುಸ್ಲಿಂ ಸಂಘಟನೆಗಳ ಪರವಾಗಿ ಮಾತ ನಾಡಿದ ಮಾಜಿ ಮೇಯರ್‌ ಕೆ.ಅಶ್ರಫ್‌ ಅವರು, ಇಲ್ಲಿ ಬಹಳ ಹಿಂದಿನ ಕಾಲದಿಂದಲೂ ಈದ್ಗಾ ಮಸೀದಿ ಇದೆ. ಆದುದರಿಂದ ಇದಕ್ಕೆ ಈದ್ಗಾ ಮಸೀದಿ ರಸ್ತೆ ಎಂದು ನಾಮಕರಣ ಮಾಡಬೇಕು ಎಂಬುದಾಗಿ ನಾವು ಈಗಾಗಲೇ ಮನವಿ ನೀಡಿದ್ದೇವೆ ಎಂದರು. 

ಸುಳ್ಯದ ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ಆಚರಣಾ ಸಮಿತಿ ಪರವಾಗಿ ಮಾತನಾಡಿದ ಸಮಿತಿ ಅಧ್ಯಕ್ಷ ಎನ್‌.ಎಸ್‌. ದೇವಿಪ್ರಸಾದ್‌ ಸಂಪಾಜೆ ಹಾಗೂ ಗೋಪಾಲ ಪೇರಾಜೆ ಅವರು, ಬ್ರಿಟಿಷರ ವಿರುದ್ದ 1837ರಲ್ಲಿ ಬಂಡಾಯವೆದ್ದು ಸ್ವಾತಂತ್ರ್ಯ ಹೋರಾಟ ಕಿಚ್ಚು ಹಚ್ಚಿದ, ಬ್ರಿಟಿಷರನ್ನು ಸೋಲಿಸಿದ ಸಂಕೇತವಾಗಿ ಹಾರಿಸಿದ ಬಾವುಟದ ನೆನಪಿಗಾಗಿ ಪ್ರಚಲಿತದಲ್ಲಿರುವ ಬಾವುಟಗುಡ್ಡೆ ಎಂಬ ಹೆಸರನ್ನು ಯಥಾವತ್ತಾಗಿ ಉಳಿಸಿ ಇದಕ್ಕೆ ಬಾವುಟಗುಡ್ಡೆ ರಸ್ತೆ ಎಂದು ನಾಮಕರಣ ಮಾಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಚಿವ ಬಿ. ರಮಾನಾಥ ರೈ ಅವರು ಈ ವಿವಾದಕ್ಕೆ ಸೌಹಾರ್ದ ಯತ ಪರಿಹಾರ ರೂಪಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಶಾಸಕ ಜೆ.ಆರ್‌. ಲೋಬೋ ಮಾತ ನಾಡಿ, ಸಂಘರ್ಷದ ವಾತಾವರಣ ನಿರ್ಮಾಣ ವಾಗದೆ ಸಮಸ್ಯೆ ಸೌಹಾರ್ದಯುತವಾಗಿ ಬಗೆ  ಹರಿಯ  ಬೇಕು ಎಂಬ ನಿಟ್ಟಿನಲ್ಲಿ ಇದಕ್ಕೆ ತಾತ್ಕಾಲಿಕ ತಡೆಯಾಜ್ಞೆ ತರಲಾಗಿದೆ. ಎಲ್ಲರೂ ಒಮ್ಮತದಿಂದ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಮೇಯರ್‌ ಕವಿತಾ ಸನಿಲ್‌, ಪಾಲಿಕೆ ಆಯುಕ್ತ ಮಹಮ್ಮದ್‌ ನಜೀರ್‌ ಉಪಸ್ಥಿತರಿದ್ದರು.

ಪಾಲಿಕೆ ಎಚ್ಚರ ವಹಿಸಬೇಕು
ಮುಂದಿನ ದಿನಗಳಲ್ಲಿ ಯಾವುದೇ ರಸ್ತೆಗೆ ನಾಮಕರಣಗಳ ವಿಚಾರ ಬಂದಾಗ ಮಹಾ ನಗರ ಪಾಲಿಕೆ ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವ ಹಿಸಬೇಕು. ಇಲ್ಲದಿದ್ದಲ್ಲಿ ಇದರಿಂದ ಬಹಳಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಇಂತಹ ಉದಾ ಹರಣೆಗಳು ಈಗಾಗಲೇ ಸಾಕಷ್ಟಿವೆ. ರಸ್ತೆಗೆ ನಾಮ ಕರಣವನ್ನು ಯಾರೂ ಕೂಡ ಒಂದು ಹಕ್ಕು ಎಂದು ಭಾವಿಸಬಾರದು. ಇದು ಸರಕಾರ ನೀಡುವ ಒಂದು ಅವಕಾಶ ಮಾತ್ರ ಎಂದು ಸಚಿವ ರಮಾನಾಥ ರೈ ಅವರು ಹೇಳಿದರು.

ಪರಿಶೀಲನ ಸಮಿತಿ
ಮಂಗಳೂರು ವಿಶ್ವವಿದ್ಯಾನಿಲಯದ ಕುಲ ಸಚಿವರು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ದ.ಕ. ಅಪರ ಜಿಲ್ಲಾಧಿಕಾರಿಯವರು ಹಾಗೂ ಮಂಗಳೂರು ವಿವಿ ಇತಿಹಾಸ ವಿಭಾಗದ ಪ್ರೊಫೆಸರ್‌ ಅವರು ಈ ಸಮಿತಿಯಲ್ಲಿರುತ್ತಾರೆ. ಸಮಿತಿ ಎಲ್ಲ ಅಂಶಗಳನ್ನು ಅಧ್ಯಯನ ನಡೆಸಿ ಮುಂದಿನ ಸಭೆಗೆ ಮೊದಲು ವರದಿ ಮಂಡಿಸಲಿದೆ. ಇದರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ತನ್ನ ನಿರ್ಧಾರ ವನ್ನು ಪ್ರಕಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ.ಜೆ. ಜಗದೀಶ್‌ ಅವರು ತಿಳಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.