ಅಭಿವೃದ್ಧಿ ನಿರೀಕ್ಷೆಯಲ್ಲಿ ಬೆಳಂದೂರು-ಪೆರುವಾಜೆ ಸಂಪರ್ಕ ರಸ್ತೆ


Team Udayavani, May 24, 2018, 5:05 AM IST

road-24-5.jpg

ಸವಣೂರು: ಬೆಳಂದೂರು- ಪೆರುವಾಜೆ ರಸ್ತೆಯಲ್ಲಿ ವಾಹನ ಚಲಾಯಿಸುವುದು ಬಿಡಿ, ನಡೆದಾಡಲೂ ಸಾಧ್ಯವಾಗದು. ಅಷ್ಟು ಕುಲಗೆಟ್ಟು ಹೋಗಿದೆ ಈ ರಸ್ತೆ. ಮಳೆಗಾಲದಲ್ಲಿ ಹೊಂಡಗಳಲ್ಲಿ ನೀರು ನಿಂತರೆ, ಬೇಸಿಗೆಯಲ್ಲಿ ಧೂಳಿನದೇ ಚಿಂತೆ. ಈ ರಸ್ತೆಯ ಅಭಿವೃದ್ಧಿಯ ನಿರೀಕ್ಷೆಯಲ್ಲಿ ಈ ಭಾಗದ ಜನತೆ ಇದ್ದಾರೆ. ತೀರಾ ಹದಗೆಟ್ಟಿರುವ ಬೆಳಂದೂರು – ಪೆರುವಾಜೆ ರಸ್ತೆಯ ಮೂಲಕ ಕಂಪ, ಪಾತಾಜೆ, ಪೆರುವಾಜೆ, ಪೆರುವೋಡಿ ಮೊದಲಾದೆಡೆ ಹೋಗಬಹುದಾಗಿದ್ದು, ಈ ರಸ್ತೆಯಲ್ಲಿ ಬೆಳಂದೂರುನಿಂದ ಬೆಳ್ಳಾರೆಗೆ ಇರುವ ದೂರ ಕೇವಲ 9 ಕಿ.ಮೀ. ಆದರೆ ಈ ರಸ್ತೆಯ ದುರವಸ್ಥೆಯಿಂದ ಜನತೆ ಸುತ್ತು ಬಳಸಿ ಪ್ರಯಾಣಿಸುವಂತಾಗಿದೆ. ಬೆಳಂದೂರುನಿಂದ ಪಾತಾಜೆವರೆಗಿನ ರಸ್ತೆ ಬೆಳಂದೂರು ಜಿ.ಪಂ. ಕ್ಷೇತ್ರದ ವ್ಯಾಪ್ತಿಗೆ ಬಂದರೆ, ಪಾತಾಜೆಯಿಂದ ಕಾಪುಕಾಡು ವರೆಗೆ ಬೆಳ್ಳಾರೆ ಜಿ.ಪಂ. ವ್ಯಾಪ್ತಿಗೆ ಬರುತ್ತದೆ.

ಸುತ್ತು ಬಳಸಿ ಪ್ರಯಾಣ
ಗುಂಡಿನಾರು ಎಂಬಲ್ಲಿಂದ ಬೆಳಂದೂರು ತಲುಪಲು ಕೇವಲ 2 ಕಿ.ಮೀ. ಅಂತರ. ಆದರೆ ರಸ್ತೆಯ ದುಸ್ಥಿತಿಯಿಂದ ಗುಂಡಿನಾರು ಪರಿಸರದ ಜನರು ಬೆಳಂದೂರಿಗೆ ಬರಬೇಕಾದರೆ ಕಾಣಿಯೂರು ಮೂಲಕ 6 ಕಿ.ಮೀ. ಪ್ರಯಾಣಿಸಬೇಕು. ಅದೇ ರೀತಿ ಬೆಳಂದೂರು ಸಮೀಪದ ಪಳ್ಳತ್ತಾರಿಗೆ ಹೋಗಲು ಬರೆಪ್ಪಾಡಿ ಮೂಲಕ ಸಂಚರಿಸುತ್ತಾರೆ.

ಆಟೋ ಬರುತ್ತಿಲ್ಲ!
ಬೆಳಂದೂರಿನಿಂದ ಪೆರುವಾಜೆಗೆ ಹೋಗಲು ಯಾವ ಆಟೋ ಚಾಲಕರೂ ಮುಂದೆ ಬರುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸಿದರೆ ಸಿಗುವ ಬಾಡಿಗೆಗಿಂತ ಹೆಚ್ಚು ಹಣ ವಾಹನ ರಿಪೇರಿಗೆ ಬೇಕಾಗುತ್ತದೆ ಎಂಬುದು ರಿಕ್ಷಾ ಚಾಲಕರ ಅಭಿಪ್ರಾಯ. ಹೀಗಾಗಿ ಹೆಚ್ಚಿನವರು ಸಣ್ಣ ಪ್ರಮಾಣದ ಹೊರೆಯನ್ನು ಹೆಗಲ ಮೇಲೆ ಹೊತ್ತುಕೊಂಡೇ ಹೋಗುವಂತಹ ಸ್ಥಿತಿ ಬಂದೊದಗಿದೆ.


ಗರಿಷ್ಠ ಅನುದಾನ ಬೇಕು

ಗರಿಷ್ಠ ಅನುದಾನವಿಲ್ಲದೆ ಈ ರಸ್ತೆಯನ್ನು ಅಭಿವೃದ್ಧಿ ನಡೆಸುವುದು ಅಸಾಧ್ಯ. ಕೆಲವೆಡೆ ರಸ್ತೆಯಲ್ಲಿ ಡಾಮರಿನ ಯಾವುದೇ ಕುರುಹು ಕಾಣಸಿಗದು. ಮಣ್ಣಿನ ಕಚ್ಚಾ ರಸ್ತೆಯ ರೀತಿಯಲ್ಲಿ ಇದೆ. ಈ ರಸ್ತೆಯ ಅಭಿವೃದ್ಧಿ ಕುರಿತೂ ಹಲವು ಬಾರಿ ಬೆಳಂದೂರು ಗ್ರಾಮಸಭೆಯಲ್ಲೂ ವಿಚಾರ ಪ್ರಸ್ತಾಪವಾಗಿದೆ. ಜನರೂ ಮನವಿ ನೀಡಿದ್ದಾರೆ. ಆದರೆ ರಸ್ತೆಯ ಸ್ಥಿತಿಯಲ್ಲಿ ಸುಧಾರಣೆಯಾಗಿಲ್ಲ.

ಇಲಾಖೆಗೆ ನೀಡಿ
ಈ ರಸ್ತೆಯನ್ನು ಲೋಕೋಪಯೋಗಿ ಇಲಾಖೆಗೆ ಸೇರ್ಪಡೆಗೊಳಿಸಿ ಅಭಿವೃದ್ಧಿಪಡಿಸುವಂತೆ ಜಿಲ್ಲಾಧಿಕಾರಿ, ಶಾಸಕರಿಗೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಮಂಗಳೂರು ಇವರಿಗೆ ಮನವಿ ಸಲ್ಲಿಸಲಾಗಿದೆ. ಈ ಹಿಂದೆ ತುರ್ತು ಕಾಮಗಾರಿಗೆ 3 ಲಕ್ಷ ರೂ.ಗಳನ್ನು ಮಂಜೂರುಗೊಳಿಸಿ ಕಾಮಗಾರಿ ನಡೆಸಲಾಗಿದೆ. ರಸ್ತೆ ಡಾಮರು ಕಾಮಗಾರಿಗೆ ದೊಡ್ಡ ಮೊತ್ತದ ಹಣ ಬೇಕಾಗಿರುವುದರಿಂದ ಅನುದಾನ ನೀಡುವಂತೆ ಶಾಸಕ, ಸಂಸದರಿಗೂ ಕೇಳಿಕೊಳ್ಳಲಾಗಿದೆ ಎಂದು ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ್‌ ಹೇಳಿದ್ದಾರೆ.

ಪ್ರಯತ್ನ ಅಗತ್ಯ
ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಪ್ರಯತ್ನಿಸಬೇಕು. ರಸ್ತೆಯನ್ನು ಪ್ಯಾಚ್‌ ವರ್ಕ್‌ ಮಾಡುವುದರ ಬದಲು ಸಂಪೂರ್ಣ ಡಾಮರು ಕಾಮಗಾರಿ ಮಾಡಿಸಲು ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು ಎಂದು ರಸ್ತೆಯ ಬಳಕೆದಾರ ಪ್ರಜೀತ್‌ ರೈ ಪಾತಾಜೆ ಅಭಿಪ್ರಾಯಪಟ್ಟಿದ್ದಾರೆ.

CRF ಅನುದಾನ
ಬೆಳಂದೂರು – ಪೆರುವಾಜೆ ರಸ್ತೆಯ ಅಭಿವೃದ್ಧಿಗಾಗಿ ನಬಾರ್ಡ್‌ ಅನುದಾನಕ್ಕೆ ಈ ಹಿಂದಿನ ಅವಧಿಯಲ್ಲೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಗ್ರಾಮ ಸಡಕ್‌ ಯೋಜನೆಯಲ್ಲಿ ಅನುದಾನ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆವು. ಜನತೆಯ ಆವಶ್ಯಕತೆಗಳ ಈಡೇರಿಕೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. CRF ನಿಧಿಯಿಂದ 3 ಕೋಟಿ ರೂ. ಅನುದಾನ ನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆದ ಬಳಿಕ ಕಾಮಗಾರಿ ಆರಂಭವಾಗುತ್ತದೆ ಎಂದು ಸುಳ್ಯ ಶಾಸಕ ಎಸ್‌. ಅಂಗಾರ ತಿಳಿಸಿದ್ದಾರೆ.

— ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.