ಮಾಲಾಡಿ -ಗರ್ಡಾಡಿ ರಸ್ತೆ ತುಂಬಾ ಹೊಂಡಗುಂಡಿ


Team Udayavani, Aug 2, 2017, 3:15 AM IST

Maladi-1-8.jpg

ಬೆಳ್ತಂಗಡಿ- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ; 3 ದಶಕಗಳಿಂದಲೂ ನಿರ್ಲಕ್ಷ್ಯ 

ವಿಶೇಷ ವರದಿ

ಬೆಳ್ತಂಗಡಿ: ಕುವೆಟ್ಟು ಜಿಲ್ಲಾ ಪಂಚಾಯತ್‌ ಹಾಗೂ ಮಾಲಾಡಿ ತಾ.ಪಂ. ಕ್ಷೇತ್ರದ ಮಾಲಾಡಿ – ಸೋಣಂದೂರು – ಗರ್ಡಾಡಿ ಸಂಪರ್ಕ ರಸ್ತೆಯ ಅಳಿದುಳಿದ ಪಳೆಯುಳಿಕೆ ವಿಕಾರವಾಗಿ ಎದ್ದು ಕಾಣುತ್ತದೆ. ಬೆಳ್ತಂಗಡಿ – ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಮಾಲಾಡಿ – ಸೋಣಂದೂರು – ಗರ್ಡಾಡಿ ಜಿಲ್ಲಾ ಪಂಚಾಯತ್‌ ರಸ್ತೆಯು ತೀವ್ರ ಹದಗೆಟ್ಟಿದ್ದು ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿದೆ ಎಂಬುದು ಸ್ಥಳೀಯ ನಾಗರಿಕರ ಅಳಲು.

ರಾಷ್ಟ್ರೀಯ ಹೆದ್ದಾರಿಯ ಮಡಂತ್ಯಾರು ಸನಿಹದ ಕೊಲ್ಪೆದಬೈಲು ಎಂಬಲ್ಲಿಂದ ಸೋಣಂದೂರು ಗ್ರಾಮದ ಮೂಲಕ ಸುಮಾರು 4 ಕಿ.ಮೀ. ರಸ್ತೆಯು ಕೊನೆಯಲ್ಲಿ ಗುರುವಾಯನಕೆರೆ- ವೇಣೂರು ರಸ್ತೆಗೆ ಗರ್ಡಾಡಿಯಲ್ಲಿ ಸೇರಿಕೊಳ್ಳುತ್ತದೆ. ಈ ರಸ್ತೆಯಲ್ಲಿ ಖಾಸಗಿ ಬಸ್ಸು, ಆಟೋರಿಕ್ಷಾ ಸಹಿತ ನೂರಾರು ವಾಹನಗಳು ಸಂಚರಿಸುತ್ತಿದ್ದು ಶಾಲಾ ಮಕ್ಕಳು, ನಾಗರಿಕರು  ಮಾನಸಿಕ ಹಿಂಸೆಯಲ್ಲೇ ಪ್ರಯಾಣಿಸಬೇಕಾಗಿದೆ.

ಮಾಲಾಡಿಯ ಕೊಲ್ಪೆದಬೈಲಿನಿಂದ ಪ್ರಾರಂಭಗೊಳ್ಳುವ ಈ ರಸ್ತೆಯು ಪಡಂಗಡಿ ಪಂಚಾಯತ್‌ ವ್ಯಾಪ್ತಿಯ ಗರ್ಡಾಡಿವರೆಗೂ ಬಹುತೇಕ ಕಡೆಗಳಲ್ಲಿ ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು ಪೂರ್ಣ ಪ್ರಮಾಣದ ಅಭಿವೃದ್ಧಿಗೆ 10ರಿಂದ 15 ಲಕ್ಷ ರೂ. ಅನುದಾನದ ಅಗತ್ಯವಿದೆ ಎಂಬುದು ಕೆಲವು ಜನಪ್ರತಿನಿಧಿಗಳ ಅಭಿಪ್ರಾಯ. ಗ್ರಾ.ಪಂ. ಆಡಳಿತ ವ್ಯಾಪ್ತಿಗೊಳಪಡುವ ಈ ರಸ್ತೆಯನ್ನು ಕನಿಷ್ಠ ಮಳೆಗಾಲದಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯವನ್ನು ಕೈಗೊಂಡರೆ ನಾಗರಿಕರು ನಿಟ್ಟುಸಿರು ಬಿಡುವಂತಾಗಬಹುದು. ವಾಹನ ಸಂಚಾರಕ್ಕೆ ತಕ್ಕ ಮಟ್ಟಿಗಾದರೂ ಅನುಕೂಲವಾಗಬಹುದೆಂಬುದು ಸ್ಥಳೀಯರ ಅಭಿಪ್ರಾಯ. ಕೊಲ್ಪೆದಬೈಲು – ಮಾಲಾಡಿಯಲ್ಲಿ ಕೆಲವು ವರ್ಷಗಳ  ಹಿಂದೆ ಪ್ರಾರಂಭಗೊಂಡ ಮಾಲಾಡಿ ಸರಕಾರಿ ಐಟಿಐಯ ಸ್ವಂತ ನೂತನ ಕಟ್ಟಡವು ಇತ್ತೀಚೆಗಷ್ಟೆ ಉದ್ಘಾಟನೆಗೊಂಡಿದ್ದು ವಿದ್ಯಾರ್ಥಿಗಳೂ ಇದೇ ದುರವಸ್ಥೆಯ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.


ಮೋರಿ ಕುಸಿದು ರಸ್ತೆ ಬದಿ ಬಾಯ್ದೆರೆದಿರುವುದು. 

ಮಾಲಾಡಿ-ಗರ್ಡಾಡಿ ರಸ್ತೆಗೆ ಮಾಜಿ ಸಚಿವ ಕೆ. ಗಂಗಾಧರ ಗೌಡ ಶಾಸಕರಾಗಿದ್ದ ಅವಧಿ  ಅಂದರೆ 1990ರಲ್ಲಿ ಡಾಮರು ಕಾಮಗಾರಿ ನಡೆದಿತ್ತು. ಬಳಿಕ ಸಂಪೂರ್ಣ ದುರಸ್ತಿಗೊಳ್ಳದೆ ಮೂರು ದಶಕಗಳೇ ಕಳೆದು ಹೋಗಿದ್ದು ಜನಪ್ರತಿನಿಧಿಗಳಿಂದಲೂ ಸಂಬಂಧಪಟ್ಟ ಇಲಾಖಾಧಿಕಾರಿಗಳಿಂದಲೂ ನಿರ್ಲಕ್ಷ್ಯಕ್ಕೊಳಗಾಗಿರುವುದು ಸ್ಥಳೀಯರಲ್ಲಿ ಅಸಮಾಧಾನ ಮೂಡಿಸಿದೆ. ಕೆಲವು ಸಲ ತೇಪೆ ಕಾರ್ಯ ಹೊರತುಪಡಿಸಿದರೆ ಈ ರಸ್ತೆಯ ದುಃಸ್ಥಿತಿಯ ಬಗ್ಗೆ ಸಂಬಂಧಪಟ್ಟವರು ತಲೆಕೆಡಿಸಿಕೊಂಡಂತಿಲ್ಲ ಎಂಬ ಆರೋಪ ಈ ಭಾಗದ ನೊಂದ ಪ್ರಯಾಣಿಕರಿಂದ ಕೇಳಿ ಬಂದಿದೆ.

ಅಭಿವೃದ್ಧಿಗೆ ಅನುದಾನದ ಕೊರತೆ 
ರಸ್ತೆಯ ದುಃಸ್ಥಿತಿಯನ್ನು ಗಮನಿಸಿದ್ದೇನೆ. ಅಭಿವೃದ್ಧಿ ಬೇಡಿಕೆಯೂ ಗಮನದಲ್ಲಿದೆ. ಆದರೆ  13ನೇ ಹಣಕಾಸು ನಮ್ಮ ವ್ಯಾಪ್ತಿಯಲ್ಲಿರದ ಕಾರಣ ಅಭಿವೃದ್ಧಿ ಅನುದಾನದ ಕೊರತೆಯಿಂದಾಗಿ ರಸ್ತೆಯ ಅಭಿವೃದ್ಧಿ ವಿಳಂಬವಾಗಿದೆ. ರಸ್ತೆಯನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಿ ವಿಶೇಷ ಅನುದಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು.
– ಮಮತಾ ಎಂ. ಶೆಟ್ಟಿ,  ಜಿ.ಪಂ. ಸದಸ್ಯೆ ಕುವೆಟ್ಟು  ಕ್ಷೇತ್ರ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.