ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ
Team Udayavani, Nov 23, 2018, 3:35 AM IST
ಉಪ್ಪಿನಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ನಡುವಣ ರಾಜ್ಯ ಹೆದ್ದಾರಿ ಹೊಂಡ ಮುಚ್ಚುವ ಕಾಮಗಾರಿ ಭರದಿಂದ ಸಾಗುತ್ತಿದೆ. ವಾರದ ಹಿಂದಷ್ಟೇ ಉದಯವಾಣಿ – ಸುದಿನ ಈ ಕುರಿತು ಸಚಿತ್ರ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾಮಗಾರಿಗೆ ಚಾಲನೆ ದೊರೆತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 18 ಕೋಟಿ ರೂ. ಅನುದಾನದಲ್ಲಿ ಸರಕಾರ ರಸ್ತೆ ವಿಸ್ತರಣೆಗೊಳಿಸುವ ಕಾಮಗಾರಿಯನ್ನು ಮಂಜೂರುಗೊಳಿಸಿತ್ತು. ಗುತ್ತಿಗೆದಾರರೇ ಎರಡು ವರ್ಷಗಳ ಕಾಲ ರಸ್ತೆಯನ್ನು ನಿರ್ವಹಿಸಬೇಕೆಂಬ ನಿಬಂಧನೆ ವಿಧಿಸಲಾಗಿತ್ತು. ಈ ಬಾರಿ ಮುಂಗಾರು ಮಳೆಯಿಂದಾಗಿ ರಸ್ತೆಯಲ್ಲಿ ಹೊಂಡಗಳು ತುಂಬಿದ್ದು, ಕೆಲವು ಕಡೆ ತಡೆಗೋಡೆ ಕುಸಿದು ವಾಹನ ಸಂಚಾರಕ್ಕೆ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.
ಸಾರ್ವಜನಿಕರ ದೂರಿನ ಮೇರೇಗೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಶಿವಪ್ರಸಾದ್ ಅಜ್ರಿ ಅವರನ್ನು ಸಂಪರ್ಕಿಸಿದಾಗ, ತತ್ಕ್ಷಣವೇ ಎಚ್ಚೆತ್ತ ಅವರು, ತೇಪೆ ಕಾರ್ಯ ಆರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಈಗ 9 ಕಿ.ಮೀ. ರಸ್ತೆಯ ದುರಸ್ತಿ ಕಾಮಗಾರಿ ಮುಗಿದಿದ್ದು, ಮುಂದಿನ 10 ದಿನಗಳಲ್ಲಿ ಉಪ್ಪಿನಂಗಡಿ ಹೆದ್ದಾರಿ ಇಲಾಖೆಯ ಗಡಿ ತನಕ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅಜ್ರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ