ಮ್ಯಾನ್ಹೋಲ್ಗೆ ರಸ್ತೆ ಅಗೆದು ಸಂಚಾರ ದುಸ್ತರ
Team Udayavani, May 17, 2018, 11:05 AM IST
ಮಹಾನಗರ: ಮಳೆಗಾಲ ಆರಂಭಗೊಂಡರೆ ಸಾಕು ರಸ್ತೆ ಹೊಂಡಗಳು ಸೃಷ್ಟಿಯಾಗಿ ಸಂಚಾರ ದುಸ್ತರವಾಗುವುದು ಸಹಜ. ಆದರೆ ನಗರದ ಕೊಟ್ಟಾರದಿಂದ ಕಲ್ಬಾವಿ ರಸ್ತೆಯಲ್ಲಿ ಸ್ಥಳೀಯಾಡಳಿತವೇ ಸಮಸ್ಯೆಯೊಂದನ್ನು ಸೃಷ್ಟಿಸಿದೆ. ಮ್ಯಾನ್ ಹೋಲ್ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಸಂಚಾರ ದುಸ್ತರವೆನಿಸಿದೆ.
ಮೂರು ತಿಂಗಳ ಹಿಂದೆ ರಸ್ತೆಯಲ್ಲಿ ಒಳಚರಂಡಿಯ ಮ್ಯಾನ್ಹೋಲ್ ನಿರ್ಮಾಣಕ್ಕೆ ಸುಸ್ಥಿತಿಯಲ್ಲಿದ್ದ ರಸ್ತೆಯನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಬಳಿಕ ಅಗೆದ ರಸ್ತೆಗೆ ಮತ್ತೆ ಡಾಮರು ಹಾಕಬೇಕಿದ್ದರೂ ಇಲ್ಲಿ ಹಾಗೇ ಬಿಡಲಾಗಿದೆ. ರಸ್ತೆಯ ಮಧ್ಯ ಭಾಗದಲ್ಲೇ ಈ ರೀತಿ ಅಗೆದು ಹಾಕಿರುವುದರಿಂದ ಸಂಚಾರ ತೀರಾ ದುಸ್ತರವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಸ್ಥಳೀಯ ಸಾಗರ್ ಕೋರ್ಟ್ ರೆಸಿಡೆನ್ಸಿ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಸ್ಥಳೀಯ ಕಾರ್ಪೊರೇಟರ್ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅಸೋಸಿಯೇಶನ್ ವತಿಯಿಂದ ಮನಪಾ ಕಮಿಷನರ್ ಅವರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಮೂರು ತಿಂಗಳಿನಿಂದ ರಸ್ತೆ ಸರಿಯಿಲ್ಲದೆ ಒದ್ದಾಡುತ್ತಿದ್ದೇವೆ. ರಸ್ತೆ ಮಧ್ಯದಲ್ಲೇ ಈ ರೀತಿ ಮಾಡಿರುವುದರಿಂದ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೂ ಕಷ್ಟವಾಗುತ್ತಿದೆ. ಹೀಗಾಗಿ ಕಮಿಷನರ್ ಅವರಿಗೆ ದೂರು ನೀಡಲು ನಿರ್ಧರಿಸಿದ್ದೇವೆ. ಮುಂದೆ ಮಳೆಗಾಲ ಬಂದರೆ ಇನ್ನೂ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ಸ್ಥಳೀಯ ನಿವಾಸಿ ಚಂದ್ರಮೋಹನ್ ಕಲಾºವಿ ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ