ನಿರ್ವಹಣೆ ಇಲ್ಲದೆ ಸೊರಗುತ್ತಿರುವ ರಸ್ತೆಗಳು


Team Udayavani, Jun 19, 2018, 11:48 AM IST

19-june-4.jpg

ಕೊಳಂಬೆ : ಒಂದು ಕಾಲದಲ್ಲಿ ಇಲ್ಲಿಂದ ನಿತ್ಯವೂ ವಿಮಾನಗಳ ಹಾರಾಟ ಸದ್ದು ಕೇಳುತ್ತಿತ್ತು, ಸುಂದರವಾದ ರಸ್ತೆಗಳಲ್ಲಿ ನಿಮಿಷಕ್ಕೊಂದರಂತೆ ವಾಹನಗಳು ಸಂಚರಿಸುತ್ತಿದ್ದವು, ಅಂಗಡಿ, ಮುಂಗಟ್ಟುಗಳಲ್ಲಿ ಭರ್ಜರಿ ವಹಿವಾಟು ನಡೆಯುತ್ತಿತ್ತು, ಗಣ್ಯಾತೀಗಣ್ಯರು ಇಲ್ಲಿಗೆ ಬರುತ್ತಿದ್ದರು, ನಿತ್ಯವೂ ಜನಸಂದಣಿಯಿಂದ ತುಂಬಿರುತ್ತಿತ್ತು…. ಆದರೆ ಈಗ ಯಾವುದೂ ಇಲ್ಲ. ಇದು ಬಜಪೆಯಲ್ಲಿರುವ ಹಳೆ ವಿಮಾನ ನಿಲ್ದಾಣದ ಕಥೆಯಿದು.

ಬಜಪೆ ಹಳೆ ವಿಮಾನ ನಿಲ್ದಾಣ ಪ್ರದೇಶ ಈಗ ಕೇವಲ ಗತವೈಭವವನ್ನು ನೆನಪಿಸಲು ಮಾತ್ರ ಎಂಬಂತಾಗಿದೆ. ಕಾರಣ ಸೂಕ್ತ ನಿರ್ವಹಣೆಯಿಲ್ಲದೆ ಈ ಪ್ರದೇಶ ಸೊರಗುತ್ತಿದೆ. ರಾಷ್ಟ್ರಪತಿಗಳು, ರಾಜ್ಯಪಾಲರು, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸಚಿವರು, ವಿದೇಶಿಯರು ದಿನನಿತ್ಯವೆಂಬಂತೆ ಬಂದುಹೋಗುತ್ತಿದ್ದ ಇಲ್ಲಿ ಈಗ ಏನೂ ಇಲ್ಲ. ರಸ್ತೆ ದುರಸ್ತಿ ಕಾಣದೆ ಹಲವು ವರ್ಷಗಳೇ ಕಳೆದಿವೆ.

ಹೊಂಡಗಳಿಂದ ತುಂಬಿದ ರಸ್ತೆ
ಹಳೆ ವಿಮಾನ ನಿಲ್ದಾಣದ ರಸ್ತೆಯ ಆಗಮನ, ನಿರ್ಗಮನ ರಸ್ತೆಯಲ್ಲಿ ಈಗ ದೊಡ್ಡದೊಡ್ಡ ಹೊಂಡಗಳು ಕಾಣಿಸಿಕೊಂಡಿವೆ. ಕೆಂಜಾರಿನಲ್ಲಿ ಹೊಸ ವಿಮಾನ ನಿಲ್ದಾಣ ಆರಂಭಗೊಂಡ ಬಳಿಕ ಇಲ್ಲಿನ ರಸ್ತೆಯನ್ನು ಸಂಪೂರ್ಣ ನಿಲರ್ಕ್ಷಿಸಲಾಗಿದೆ. ಯಾವುದೇ ಡಾಮರೀಕರಣವಾಗಲಿ, ತೇಪೆ ಕಾರ್ಯವಾಗಲಿ ನಡೆದಿಲ್ಲ. ಇದರಿಂದಾಗಿ ರಸ್ತೆಯಲ್ಲಿ ದೊಡ್ಡದೊಡ್ಡ ಹೊಂಡಗಳು ಬಿದ್ದಿವೆ. ಮಳೆ ಬಂದಾಗ ಇದರಲ್ಲಿ ನೀರು ನಿಂತು ಹೊಂಡಗಳ ಬಗ್ಗೆ ಅರಿವಿಲ್ಲದೆ ಬರುವ ವಾಹನಗಳು ಅಪಘಾತಕ್ಕೀಡಾದ ಘಟನೆಗಳು ಸಂಭವಿಸಿವೆ. 

ಯಾವ ಇಲಾಖೆಗೆ ?
ಹಳೆ ವಿಮಾನ ನಿಲ್ದಾಣದ ಆಗಮನ ಹಾಗೂ ನಿರ್ಗಮನ ರಸ್ತೆಯು ಸುಮಾರು 600 ಮೀಟರ್‌ ಯಾವ ಇಲಾಖೆಗೆ ಸೇರಿದೆ ಎನ್ನುವುದನ್ನು ಯಾರೂ ಹೇಳುತ್ತಿಲ್ಲ. ಇದರಿಂದ ಇಲ್ಲಿ ರಸ್ತೆ ಕಾಮಗಾರಿ ನಡೆದೇ ಇಲ್ಲ. ಇಲ್ಲಿನ ಆಗಮನ ರಸ್ತೆಯಿಂದ ಬಜಪೆಯ ರಸ್ತೆಗೆ ತೇಪೆ ಕಾರ್ಯ ಕೆಲಕಾಲದ ಹಿಂದೆ ನಡೆದಿತ್ತು. ನಿರ್ಗಮನ ರಸ್ತೆಯಿಂದ ಉಣಿಲೆಗೆ ಹೋಗುವ ರಸ್ತೆಯ ತೇಪೆ ಕಾರ್ಯಗಳು ನಡೆದಿದೆ. ಆದರೆ ವಿಮಾನ ನಿಲ್ದಾಣ ರಸ್ತೆ ಕಾಮಗಾರಿಯನ್ನು ಮಾತ್ರ ಯಾರೂ ನಡೆಸಿಯೇ ಇಲ್ಲ.

ಗ್ರಾಮೀಣ ಪ್ರದೇಶಕ್ಕೆ ಸಂಪರ್ಕ
ಬಜಪೆಯಿಂದ ಮುರನಗರಕ್ಕೆ ಹಳೆ ವಿಮಾನ ನಿಲ್ದಾಣವಾಗಿ ಉಣಿಲೆ, ಅದ್ಯಪಾಡಿಗೆ ಹೋಗುವ ರಸ್ತೆ ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ರಸ್ತೆಯಾಗಿದೆ. ಇದು ಈ ಭಾಗದ ಕೃಷಿಕರು, ಶಾಲೆ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ನಿತ್ಯ ಕಚೇರಿ, ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಹೋಗಿ ಬರಲು ಇರುವಂಥ ಮುಖ್ಯ ರಸ್ತೆಯಾಗಿದೆ. ಈಗ ಈ ರಸ್ತೆ ದುರಸ್ತಿಯಾಗದೆ ನಿತ್ಯ ಪ್ರಯಾಣಿಸುವ ಪ್ರಯಾಣಿಕರು ಇಲ್ಲಿ ಪರದಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಈ ರಸ್ತೆ ಯಾರದ್ದು ?
ತಾಲೂಕು ಪಂಚಾಯತ್‌ನ ಕಳೆದ 6 ಸಾಮಾನ್ಯ ಸಭೆಯಲ್ಲಿ ಈ ರಸ್ತೆ ಯಾವ ಇಲಾಖೆಗೆ ಸೇರಿದೆ ಎಂಬ ಬಗ್ಗೆ ಕೇಳಿದ್ದೆ. ಗ್ರಾಮ ಪಂಚಾಯತ್‌, ಜಿಲ್ಲಾ ಪಂಚಾಯತ್‌, ಲೋಕೋಪಯೋಗಿ ಇಲಾಖೆ, ನಮ್ಮ ಗ್ರಾಮ ನಮ್ಮ ರಸ್ತೆ, ವಿಮಾನ ನಿಲ್ದಾಣ ಪ್ರಾಧಿಕಾರ ಸಹಿತ ಎಲ್ಲರೂ ಈ ರಸ್ತೆ ನಮ್ಮದಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಈ ರಸ್ತೆ ಯಾರಿಗೆ ಸೇರಿದ್ದು? ಗುಂಡಿ ಬಿದ್ದಿರುವ ರಸ್ತೆ ದುರಸ್ತಿ ಕಾಮಗಾರಿ ಯಾರು ನಡೆಸಬೇಕು ಎನ್ನುವುದು ಇಲ್ಲಿ ಯಕ್ಷ ಪ್ರಶ್ನೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಹಲವು ಮಂದಿ ಈಗಾಗಲೇ ಹೊಂಡಗುಂಡಿಗಳನ್ನು ತಪ್ಪಿಸಲು ಹೋಗಿ ಬಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಈ ಭಾಗದ ಜನರ ಸಮಸ್ಯೆ ಅರಿತು ಈ ರಸ್ತೆ ಕಾಮಗಾರಿ ನಡೆಯಲೇಬೇಕಿದೆ.
– ವಿಶ್ವನಾಥ ಶೆಟ್ಟಿ,
  ಸದಸ್ಯ, ತಾಲೂಕು ಪಂಚಾಯತ್‌ ಕ್ಷೇತ್ರ ಕೊಳಂಬೆ

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.