ಕಾರು ಸೈಡ್ ಕೊಡದ ಕಾರಣ ಮುಂದಿಟ್ಟು ವಾಗ್ವಾದ, ಪ್ರಯಾಣಿಕನ ಸೊತ್ತು ಲೂಟಿ
Team Udayavani, Jul 15, 2019, 9:42 AM IST
ಉಪ್ಪಿನಂಗಡಿ: ಸೈಡ್ ಕೊಡಲಿಲ್ಲವೆಂಬ ಕಾರಣ ಮುಂದಿರಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಮುಗಿಬಿದ್ದ ನಾಲ್ವರು ಯುವಕರ ತಂಡವೊಂದು ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟಿ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಬೆಂಗಳೂರಿನ ಸಿಐಡಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಮಹಿಳೆಯ ಪತಿಯಾಗಿರುವ ವೀರಭದ್ರ ಎಂಬವರು ಬೆಂಗಳೂರಿನಿಂದ ಬ್ರಹ್ಮಾವರಕ್ಕೆಂದು ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಶನಿವಾರ ತಡರಾತ್ರಿ ರಸ್ತೆಯಲ್ಲಿ ಓವರ್ ಟೇಕ್ ಮಾಡಲು ಸೈಡ್ ಕೊಡಲಿಲ್ಲವೆಂದು ನೆಪವೊಡ್ಡಿ ರಿಟ್ಜ್ ಕಾರಿನಲ್ಲಿ ಬಂದ ನಾಲ್ವರು ವೀರಭದ್ರರ ಕಾರನ್ನು ಅಡ್ಡಗಟ್ಟಿ ಅವರೊಂದಿಗೆ ಸಂಘರ್ಷಕ್ಕಿಳಿದಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಲ್ಯಾಪ್ ಟಾಪ್, ಮೊಬೈಲ್, ಜಾಕೆಟ್ಗಳನ್ನು ಎಗರಿಸಿ ತಂಡ ಪರಾರಿಯಾಗಿದೆ.
ಸುತ್ತಲೂ ಕಾಡಿನಿಂದಾವೃತವಾದ ನಿರ್ಜನ ಪ್ರದೇಶದಲ್ಲಿ ಒಂಟಿ ಪ್ರಯಾಣದ ವೇಳೆ ನಾಲ್ವರು ಯುವಕರಿಂದ ಎದುರಾದ ಸಂಘರ್ಷದಿಂದ ಭೀತಿಗೊಳಗಾದ ವೀರಭದ್ರ ಅವರು ಯುವಕರಿಂದ ಪಾರಾಗಿ ಬ್ರಹ್ಮಾವರ ತಲುಪಿದ ಮೇಲೆ ಕಾರನ್ನು ಪರಿಶೀಲಿಸಿದಾಗ ಸೊತ್ತುಗಳು ಎಗರಿಸಲ್ಪಟ್ಟಿರುವುದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಅವರು ಮರಳಿ ಬಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ.
ಶಿರಾಡಿ ಘಾಟಿ ಪರಿಸರದಲ್ಲಿ ರಾತ್ರಿ ವೇಳೆ ಕಾರುಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿರುವುದಕ್ಕೆ ಪೊಲೀಸ್ ಅಧಿಕಾರಿಗಳು ಬ್ರೇಕ್ ಹಾಕಿದ ಬಳಿಕ ಹೊಸ ರೀತಿಯಲ್ಲಿ ದರೋಡೆ ಮಾಡುವ ಯತ್ನ ಇದಾಗಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು