Mangaluru ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ| ಎಂ. ಶಾಂತಾರಾಮ ಶೆಟ್ಟಿ


Team Udayavani, Jan 21, 2024, 10:09 PM IST

Mangaluru ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಡಾ| ಎಂ. ಶಾಂತಾರಾಮ ಶೆಟ್ಟಿ

ಮಂಗಳೂರು: ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಯುವ ಸಮುದಾಯಕ್ಕೆ ಉತ್ತಮ ಭವಿಷ್ಯ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ನಿಟ್ಟೆ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಹೇಳಿದರು.

ಡೊಂಗರಕೇರಿ ಕೆನರಾ ವಿದ್ಯಾ ಸಂಸ್ಥೆಯ ಸುಧೀಂದ್ರ ಸಭಾಂಗಣದಲ್ಲಿ ರವಿವಾರ ಟೀಚರ್ಸ್‌ ಬ್ಯಾಂಕ್‌ ಲಿ. (ಟೀಚರ್ಸ್‌ ಕೋ ಆಪರೇಟಿವ್‌ ಬ್ಯಾಂಕ್‌ ನಿಯಮಿತ)ನ 109ನೇ ವರ್ಷದ ಸಂಸ್ಥಾಪನ ದಿನಾಚರಣೆ ಮತ್ತು ಐಎಂಪಿಎಸ್‌ ಹಾಗೂ ಹೋಮ್‌ ಪ್ಲಾಟ್‌ ಲೋನ್‌ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

109 ವರ್ಷದ ಹಿಂದೆ ಶಿರಾಲಿ ಸುಬ್ಬರಾವ್‌ ಅವರಿಂದ ಸ್ಥಾಪಿತವಾದ ಟೀಚರ್ ಬ್ಯಾಂಕ್‌ ಇಂದು ವ್ಯಾಪಕವಾಗಿ ಬೆಳೆದು, ಎಲ್ಲ ಶಿಕ್ಷಕರಿಗೆ ಬ್ಯಾಂಕ್‌ ಆಶಾಕಿರಣವಾಗಿದೆ. ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸುವ ಮೂಲಕ ಸಮಗ್ರ ಶಿಕ್ಷಕ ವರ್ಗಕ್ಕೆ ದಾರಿದೀಪವಾಗಲಿ ಎಂದರು.

“ಐಎಂಪಿಎಸ್‌ ಸೇವೆ’ಯನ್ನು ಅನಾವರಣ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ ಮಾತನಾಡಿ, ಟೀಚರ್ ಬ್ಯಾಂಕ್‌ ಸಾಮಾಜಿಕ ಬಾಂಧವ್ಯವನ್ನು ಗಟ್ಟಿಗೊಳಿಸಿಸುವ ಮೂಲಕ, ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುತ್ತಾ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಲಿ ಎಂದರು.

“ಹೋಂ ಪ್ಲಾಟ್‌ ಲೋನ್‌’ ಸೇವೆ ಅನಾವರಣಗೊಳಿಸಿದ ಹಂಪಿ ಕನ್ನಡ ವಿ.ವಿ. ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ ಮಾತನಾಡಿ, ಟೀಚರ್ ಬ್ಯಾಂಕ್‌ನ ಕುರಿತು ಮುಂದಿನ ದಿನಗಳಲ್ಲಿ ಕೃತಿಯ ಮೂಲಕ ದಾಖಲೀಕರಣ ಮಾಡುವ ಕೆಲಸವಾಗಬೇಕು ಎಂದರು.

ಮಂಗಳೂರು ವಿ.ವಿ. ರಾಜಕೀಯ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ದಯಾನಂದ ನಾಯಕ್‌ ಮಾತನಾಡಿ, ಇಂದು ಬ್ಯಾಂಕಿಂಗ್‌ ಕ್ಷೇತ್ರದಲ್ಲಿಯೂ ಕಡ್ಡಾಯವಾಗಿರುವ ಸಿಎಸ್‌ಆರ್‌ ಸೇವೆಯನ್ನು ಟೀಚರ್ ಬ್ಯಾಂಕ್‌ ಆರಂಭವಾಗುವಾಗಲೇ ಮಾಡಿಕೊಂಡು ಬಂದಿದೆ ಎಂದರು.

ಮಹಾಪ್ರಬಂಧಕ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು. ಬ್ಯಾಂಕ್‌ನ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ ವಂದಿಸಿದರು. ಮಾಜಿ ಅಧ್ಯಕ್ಷ ಡಾ| ಅಶೋಕ್‌ ಕುಮಾರ್‌ ಶೆಟ್ಟಿ ನಿರ್ವಹಿಸಿದರು.

ಹೊಸ ಶಾಖೆಗಳನ್ನು ಆರಂಭಿಸುವ ಗುರಿ
ಟೀಚರ್ ಬ್ಯಾಂಕ್‌ ರಾಜ್ಯದ 18 ಜಿಲ್ಲೆಗಳಲ್ಲಿ 14 ಶಾಖೆಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ದಾವಣಗೆರೆ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಿದೆ. ಶಿಕ್ಷಕರಿಗೆ 500 ರೂ. ಸಾಲ ಕೊಡಲು ಆರಂಭಿಸಿದ ಬ್ಯಾಂಕ್‌ ಇಂದು 50 ಲಕ್ಷ ರೂ. ವರೆಗೆ ವೈಯಕ್ತಿಕ ಸಾಲ ನೀಡುತ್ತಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಪರವಾನಿಗೆ ಪಡೆದು ಅಧಿಕೃತವಾಗಿ ಬ್ಯಾಂಕ್‌ ಆಗಿ ಪರಿವರ್ತನೆಗೊಂಡಿದ್ದು, ಆಧುನಿಕ ಬ್ಯಾಂಕಿನ ಎಲ್ಲ ಸೇವೆಗಳು ಗ್ರಾಹಕರಿಗೆ ದೊರೆಯುತ್ತಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.