ಕೆಎಸ್ಸಾರ್ಟಿಸಿ ಮಂಗಳೂರು-ಬೆಂಗಳೂರು ವಿಭಾಗಕ್ಕೆ  1.10 ಕೋಟಿ ರೂ. ನಷ್ಟ


Team Udayavani, Aug 19, 2018, 9:46 AM IST

19-agust-1.jpg

ಮಹಾನಗರ: ಕರಾವಳಿ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಶಿರಾಡಿ, ಸಂಪಾಜೆ ಘಾಟಿಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬಸ್‌ ಸಂಚಾರ ವ್ಯತ್ಯಯಗೊಂಡಿತ್ತು. ನಾಲ್ಕು ದಿನಗಳಲ್ಲಿ ಕೆಎಸ್ಸಾರ್ಟಿಸಿ ಮಂಗಳೂರು ಮತ್ತು ಬೆಂಗಳೂರು ವಿಭಾಗಕ್ಕೆ ಒಟ್ಟಾರೆ 1.10 ಕೋಟಿ ರೂ.ಗೂ ಹೆಚ್ಚಿನ ನಷ್ಟ ಉಂಟಾಗಿದೆ.

ಮಂಗಳೂರು ವಿಭಾಗದಿಂದ ಬೆಂಗಳೂರು, ಮಡಿಕೇರಿ, ಮೈಸೂರಿಗೆ ತೆರಳುವ ಮತ್ತು ಬೆಂಗಳೂರು ವಿಭಾಗದಿಂದ ಮಂಗಳೂರು, ಉಡುಪಿ, ಕುಂದಾಪುರಕ್ಕೆ ತೆರಳುವ ಹೆಚ್ಚಿನ ಬಸ್‌ಗಳ ಟ್ರಿಪ್‌ ಕಡಿತಗೊಂಡಿವೆ. 4 ದಿನಗಳಲ್ಲಿ ಮಂಗಳೂರು ಕೆಎಎಸ್ಸಾರ್ಟಿಸಿ ವಿಭಾಗಕ್ಕೆ ಸುಮಾರು 70 ಲಕ್ಷ ರೂ., ಮತ್ತು ಬೆಂಗಳೂರು ವಿಭಾಗಕ್ಕೆ ಸುಮಾರು 50 ಲಕ್ಷ ರೂ. ನಷ್ಟ ಉಂಟಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗಬಹುದು ಎನ್ನಲಾಗುತ್ತಿದೆ.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಬೆಂಗಳೂರಿಗೆ ಪ್ರತಿದಿನ 70 ಬಸ್‌ಗಳು ಹಾಗೂ ಮಡಿಕೇರಿ ಮಾರ್ಗವಾಗಿ ಮೈಸೂರಿಗೆ 55 ಬಸ್‌ಗಳು ಸಂಚರಿಸುತ್ತಿದ್ದವು. ಆದರೆ ಕೊಡಗಿನಲ್ಲಿ ಭಾರೀ ಮಳೆ ಮತ್ತು ಶಿರಾಡಿ, ಸಂಪಾಜೆ ಘಾಟಿ ಬಂದ್‌ ಆದ ಕಾರಣದಿಂದ ಆ.14 ರಿಂದ 17ರ ವೆರೆಗೆ ಬೆಂಗಳೂರು ಮತ್ತು ಮೈಸೂರಿಗೆ ತೆರಳುವ ಹೆಚ್ಚಿನ ಬಸ್‌ ಟ್ರಿಪ್‌ ಗಳು ರದ್ದಾಗಿದೆ.

ಪ್ರಯಾಣಿಕರು ಕ್ಷೀಣ 
ಈ ಹಿಂದೆ ಸಾಮಾನ್ಯ ದಿನಗಳಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರತೀ ದಿನ ಸರಾಸರಿ 3,000ಕ್ಕೂ ಹೆಚ್ಚಿನ ಮಂದಿ ಕೆಎಸ್ಸಾರ್ಟಿಸಿ ಬಸ್‌ ಮೂಲಕ ಪ್ರಯಾಣಿಸುತ್ತಿದ್ದರು. ಆದರೆ ಸದ್ಯ ಪ್ರಯಾಣಿಕರ ಸಂಖ್ಯೆ 1,500ಕ್ಕೆ ಇಳಿದಿದೆ.

ಖಾಸಗಿ ಬಸ್‌ಗಳಲ್ಲೂ ನಷ್ಟ
ಮಂಗಳೂರಿನಿಂದ ಬೆಂಗಳೂರು -ಮೈಸೂರಿಗೆ ದಿನಂಪ್ರತಿ 400ಕ್ಕೂ ಹೆಚ್ಚಿನ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದು, ಆ.14 ರಿಂದ ಘಾಟಿ ಪ್ರದೇಶ ಬಂದ್‌ ಆದ ಕಾರಣ ಖಾಸಗಿ ವೋಲ್ವೊ ಬಸ್‌ ಸಂಚಾರ ಮತ್ತು ಕೆಲ ಸ್ಲೀಪರ್‌ ಕೋಚ್‌ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಮಂಗಳೂರಿನಿಂದ ಮೈಸೂರಿಗೆ ತೆರಳುವ ಖಾಸಗಿ ಬಸ್‌ ಗಳು ಮಡಿಕೇರಿ ಮೂಲಕ ಸಾಗುತ್ತಿತ್ತು. ಆದರೆ ಸಂಪಾಜೆ ಘಾಟಿ ಬಂದ್‌ ಆದ ಕಾರಣ ದಿಂದ ಚಾರ್ಮಾಡಿ-ಹಾಸನ ಮೂಲಕ ಮೈಸೂರಿಗೆ ತೆರಳುತ್ತಿದೆ. ಇದರಿಂದ ಮಡಿಕೇರಿ ಸಂಪರ್ಕ ಕಡಿತಗೊಂಡಿದೆ.

ಮಡಿಕೇರಿಗೆ ಯಾವುದೇ ಟ್ರಿಪ್‌ ಇಲ್ಲ
ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಡಿಕೇರಿ ಮಾರ್ಗವಾಗಿ ಮೈಸೂರಿಗೆ 55 ಬಸ್‌ ಗಳು ಸಂಚರಿಸುತ್ತಿದ್ದವು. ಆದರೆ ಸಂಪಾಜೆ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿತದ ಕಾರಣದಿಂದಾಗಿ ಇಲ್ಲಿಂದ ತೆರಳುವ ಎಲ್ಲ ಬಸ್‌ ಟ್ರಿಪ್‌ ಗಳನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಪ್ರಯಾಣಿಕರು ಚಾರ್ಮಾಡಿ- ಹಾಸನ- ಮೈಸೂರು ಮೂಲಕ ಮಡಿಕೇರಿ ಸಂಪರ್ಕಿಸಬೇಕಿದೆ.

ದಿನಂಪ್ರತಿ 15 ಲಕ್ಷ ರೂ. ನಷ್ಟ
ಮಂಗಳೂರು ಕೆಎಸ್ಸಾರ್ಟಿಸಿ ಡಿಪೋದಿಂದ ಬೆಂಗಳೂರು, ಮೈಸೂರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಜತೆಗೆ ಕೆಲ ಟ್ರಿಪ್‌ ಗಳನ್ನು ರದ್ದುಗೊಳಿಸಲಾಗಿದೆ. ಮಂಗಳೂರು ವಿಭಾಗಕ್ಕೆ ದಿನಂಪ್ರತಿ ಸರಾಸರಿ 15 ಲಕ್ಷ ರೂ. ನಷ್ಟ ಉಂಟಾಗಿದೆ. 
– ದೀಪಕ್‌ ಕುಮಾರ್‌
ಕೆಎಸ್ಸಾರ್ಟಿಸಿ ಮಂಗಳೂರು
ವಿಭಾಗಾಧಿಕಾರಿ

ನವೀನ್‌ ಭಟ್‌, ಇಳಂತಿಲ

ಟಾಪ್ ನ್ಯೂಸ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.