ಹಳೆಯ ಮಾಡು, ಶಿಥಿಲ ಗೋಡೆ ಇದು ಸರಕಾರಿ ಶಾಲೆ!


Team Udayavani, May 23, 2018, 2:44 PM IST

23-may-15.jpg

ಸುಳ್ಯ : ಇನ್ನೊಂದು ವಾರದೊಳಗೆ ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಪುನಾರಂಭಗೊಳ್ಳಲಿದೆ. ತಾಲೂಕಿನ
ವಿವಿಧ ಶಾಲೆಗಳ ದುರಸ್ತಿಗೆ 13.71 ಲಕ್ಷ ರೂ., ಹೊಸ ಕೊಠಡಿಗೆ 31.50 ಲಕ್ಷ ರೂ. ಕ್ರಿಯಾ ಯೋಜನೆ ತಯಾರಿಸಿ, ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ತಾಲೂಕಿನಲ್ಲಿ ಸರಕಾರಿ 139 ಪ್ರಾಥಮಿಕ, 16 ಪ್ರೌಢಶಾಲೆಗಳಿವೆ. 13 ಶತಮಾನ ಪೂರೈಸಿದ ಶಾಲೆಗಳು ಇವೆ. ಅವುಗಳಲ್ಲಿ ಹಲವು ಶಾಲೆಗಳು ದುರಸ್ತಿಗೆ ಅನುದಾನ ಕೋರಿ ಮನವಿ ಸಲ್ಲಿಸಿವೆ.

ಅದಕ್ಕೆ ಸರಕಾರದ ಮಟ್ಟದಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲ ಶಾಲೆಗಳಲ್ಲಿ ಈಗಲೂ ಶಿಕ್ಷಕರ ಕೊರತೆ ಇದ್ದು, ಹೊಸ ನೇಮಕಾತಿ ನಿರೀಕ್ಷೆಯಲ್ಲಿದ್ದಾರೆ. ಪ್ರತಿ ವರ್ಷ ಮಕ್ಕಳ ಸಂಖ್ಯೆ ಇಳಿಕೆ ಎನ್ನುವ ಆಪಾದನೆ ಹೊತ್ತುಕೊಂಡೇ ವರ್ಷವಿಡಿ ಕಾರ್ಯ ನಿರ್ವಹಿಸುವ ಸರಕಾರಿ ಶಾಲೆಗಳು ಮೂಲ ಕೊರತೆಗಳಿಂದ ಹೊರತಾಗಿಲ್ಲ. ಗುಣಮಟ್ಟದ ಶಿಕ್ಷಣ, ಸುರಕ್ಷತೆ ದೃಷ್ಟಿಯಿಂದ ಶಾಲೆಗಳ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಿದೆ ಎಂಬ ಬೇಡಿಕೆಯು ಪ್ರತಿ ಗ್ರಾಮ, ತಾಲೂಕು ಸಭೆಗಳಲ್ಲಿ ಕೇಳಿ ಬರುತ್ತಿದೆ.

ಪ್ರಸ್ತಾವನೆ ಪಟ್ಟಿ
2018-19ನೇ ಸಾಲಿನಲ್ಲಿ ಆಯಾ ಜಿ.ಪಂ. ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ದುರಸ್ತಿಗೆ ಅನುದಾನಕ್ಕೆ ಬೇಡಿಕೆ ಪಟ್ಟಿ ಸಲ್ಲಿಸಲಾಗಿದೆ. ಗೂನಡ್ಕ ಸ.ಹಿ.ಪ್ರಾ. ಶಾಲೆ-1.75 ಲಕ್ಷ ರೂ., ಅಯ್ಯನಕಟ್ಟೆ ಸ.ಹಿ.ಪ್ರಾ. ಶಾಲೆಗೆ 1.75 ಲಕ್ಷ ರೂ., ಮಾವಿನಕಟ್ಟೆ ಸ.ಹಿ.ಪ್ರಾ. ಶಾಲೆಗೆ 1.50 ಲಕ್ಷ ರೂ., ಶೇಣಿ ಸ.ಹಿ.ಪ್ರಾ. ಶಾಲೆಗೆ 1.11 ಲಕ್ಷ ರೂ. ಸಹಿತ 6.11 ಲಕ್ಷ ರೂ. ಕ್ರಿಯಾಯೋಜನೆ ಪಟ್ಟಿ ರೂಪಿಸಲಾಗಿದೆ.

ಪ್ರೌಢಶಾಲೆಗಳ ಪೈಕಿ ಎಡಮಂಗಲ ಸರಕಾರಿ ಪ್ರೌಢಶಾಲೆಗೆ 3 ಲಕ್ಷ ರೂ., ಏನೆಕಲ್ಲು ಸ. ಪ್ರೌಢಶಾಲೆಗೆ 2.10 ಲಕ್ಷ ರೂ., ಗಾಂಧಿನಗರ ಪ್ರೌಢಶಾಲೆಗೆ 2.50 ಲಕ್ಷ ರೂ. ಸಹಿತ 7.60 ಲಕ್ಷ ರೂ. ಅಂದಾಜು ಮೊತ್ತದ ಕ್ರಿಯಾಯೋಜನೆ ತಯಾರಿಸಿಲಾಗಿದೆ. ಶಾಲಾ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿ, ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ 1 ಕೊಠಡಿ ನಿರ್ಮಾಣಕ್ಕೆ 15.75 ಲಕ್ಷ ರೂ., ಗುತ್ತಿಗಾರು ಸ. ಪ್ರೌಢಶಾಲೆಗೆ 15.75 ಲಕ್ಷ ರೂ. ಸಹಿತ ಒಟ್ಟು 31.50 ಲಕ್ಷ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ.

ಶತಮಾನದ 13 ಶಾಲೆ
ತಾಲೂಕಿನಲ್ಲಿ 13 ಪ್ರಾಥಮಿಕ ಶಾಲೆಗಳು 100 ವರ್ಷ ದಾಟಿವೆ. ಅವುಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿ, ವಿಶೇಷ ಅನುದಾನ ಒದಗಿಸುವ ಅಗತ್ಯವಿದೆ.

ಶಾಲಾ ಖರ್ಚು
66 ಕಿರಿಯ ಪ್ರಾಥಮಿಕ ಶಾಲೆಗಳಿಗೆ ತಲಾ 5 ಸಾವಿರ ರೂ.ನಂತೆ 3.30 ಲಕ್ಷ ರೂ., ಹಿರಿಯ ಪ್ರಾಥಮಿಕ ಶಾಲೆಗಳಿಗೆ
ತಲಾ 5,200 ರೂ.ನಂತೆ 18 ಶಾಲೆಗಳಿಗೆ 37.98 ಲಕ್ಷ ರೂ., ಪ್ರೌಢಶಾಲೆಗಳಿಗೆ ತಲಾ 5,500 ರೂ.ನಂತೆ 18
ಶಾಲೆಗಳಿಗೆ 8.8 ಲಕ್ಷ ರೂ. ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಕಳುಹಿಸಲಾಗಿದೆ.

ಅನುದಾನ ಬಂದಿಲ್ಲ
ಸರ್ವಶಿಕ್ಷಣ ಅಭಿಯಾನದಡಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆಂದು ಕಳೆದ ಬಾರಿ ಸುಳ್ಯ ತಾಲೂಕಿನ 61 ಶಾಲೆಗಳ
ಅಗತ್ಯ ಕಾಮಗಾರಿಗಳ ಕ್ರಿಯಾ ಯೋಜನೆ ರಚಿಸಿ ಪ್ರಸ್ತಾವನೆ ಪಟ್ಟಿ ಕಳುಹಿಸಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಏಳು ಬ್ಲಾಕ್‌ಗಳಿಗೆ 4 ಕೋಟಿ ರೂ. ಅಂದಾಜು ಪಟ್ಟಿ ರವಾನಿಸಲಾಗಿತ್ತು. ಅದರಲ್ಲಿ 99.54 ಲಕ್ಷ ರೂ. ಮಾತ್ರ ಬಿಡುಗಡೆಗೊಂಡಿತ್ತು. ಏಳು ಬ್ಲಾಕ್‌ಗಳ ಪೈಕಿ ಸುಳ್ಯ ತಾಲೂಕಿಗೆ ನಯಾ ಪೈಸೆ ಅನುದಾನ ಮಂಜೂರುಗೊಂಡಿಲ್ಲ.

ದುರಸ್ತಿಗೆ ಕ್ರಮ
ಪ್ರತಿ ಶಾಲೆಗಳ ಗುಣಮಟ್ಟದ ಬಗ್ಗೆ ಸಿಆರ್‌ಪಿಗಳಿಂದ ವರದಿ ಸಂಗ್ರಹಿಸಲಾಗುತ್ತಿದೆ. ಅದನ್ನು ಪರಿಶೀಲಿಸಿ, ವಿವಿಧ ಮೂಲಗಳ ಅನುದಾನ ಬಳಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನಷ್ಟೇ ಅನುದಾನ ಬರಬೇಕಿದ್ದು, ಬಂದ ತತ್‌ಕ್ಷಣ ದುರಸ್ತಿಗೆ ಆದ್ಯತೆ ನೀಡಲಾಗುವುದು.
– ಲಿಂಗರಾಜೇ ಅರಸ್‌
ಕ್ಷೇತ್ರ ಶಿಕ್ಷಣಾಧಿಕಾರಿ, ಸುಳ್ಯ 

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.