2.5 ಕೋಟಿ ರೂ. ಮಂಜೂರು; ಪ್ರಗತಿಯಲ್ಲಿ ಕಟ್ಟಡ ಕಾಮಗಾರಿ
ಕಡಬ: ಅಲ್ಪಸಂಖ್ಯಾಕ ಬಾಲಕಿಯರ ಹಾಸ್ಟೆಲ್ಗೆ ಸ್ವಂತ ಕಟ್ಟಡ ಭಾಗ್ಯ
Team Udayavani, Jan 29, 2022, 5:22 PM IST
ಕಡಬ: ಕಳೆದ ನಾಲ್ಕು ವರ್ಷ ಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾ ಚರಿಸುತ್ತಿರುವ ಕಡಬದ ಅಲ್ಪಸಂಖ್ಯಾಕ ಬಾಲಕಿಯರ ಮೆಟ್ರಿಕ್ ಅನಂತರದ ವಿದ್ಯಾರ್ಥಿ ನಿಲಯಕ್ಕೆ ಕೊನೆಗೂ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಯೋಗ ಬಂದಿದೆ.
ವಿದ್ಯಾರ್ಥಿ ನಿಲಯಕ್ಕೆ ನೂತನ ಕಟ್ಟಡ ನಿರ್ಮಿಸಲು 2.5 ಕೋಟಿ ರೂ. ಮಂಜೂರುಗೊಂಡಿದ್ದು, ಕಾದಿರಿಸಿದ ಜಮೀನಿನಲ್ಲಿ ಕಟ್ಟಡದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
25 ಸೆಂಟ್ಸ್ ಜಮೀನು
ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಯಿಂದ ನಡೆಸಲ್ಪಡುವ ಈ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಡಬದ ಅಂಬೇಡ್ಕರ್ ಭವನದ ಬಳಿ 3 ವರ್ಷಗಳ ಹಿಂದೆಯೇ 25 ಸೆಂಟ್ಸ್ ಜಮೀನು ಕಾದಿರಿಸಲಾಗಿತ್ತು. ಬಳಿಕ 2.5 ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ಜಮೀನಿನಲ್ಲಿದ್ದ ಮರಗಳನ್ನು ತೆರವುಗೊಳಿಸಲು ತಡವಾದ ಕಾರಣದಿಂದಾಗಿ ಕಾಮಗಾರಿ ಆರಂಭಗೊಳ್ಳಲು ತೊಡಕಾಗಿತ್ತು. ಕೊನೆಗೂ ಜನಪ್ರತಿನಿಧಿಗಳು ಹಾಗೂ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರಂತರ ಪ್ರಯತ್ನದ ಫಲವಾಗಿ ಮರಗಳನ್ನು ತೆರವುಗೊಳಿಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. .
1.25 ಕೋಟಿ ರೂ. ಅನುದಾನ
ವಿದ್ಯಾರ್ಥಿ ನಿಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಸಲುವಾಗಿ ಒಟ್ಟು 2.5 ಕೋಟಿ ರೂ. ಅನುದಾನ ಮಂಜೂರುಗೊಂಡಿದ್ದು, ಆ ಪೈಕಿ 1.25 ಕೋಟಿ ರೂ. ಅನುದಾನ ಬಿಡುಗಡೆಯೂ ಆಗಿದೆ. 2.5 ಕೋಟಿ ರೂ. ಅನುದಾನದಲ್ಲಿ 1.98 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡರೆ, ಉಳಿದ 52 ಲಕ್ಷ ರೂ. ಗಳನ್ನು ತಡೆಗೋಡೆ ನಿರ್ಮಾಣ, ಆವರಣ ಗೋಡೆ ನಿರ್ಮಾಣ ಹಾಗೂ ಅಂಗಳಕ್ಕೆ ಇಂಟರ್ಲಾಕ್ ಅಳವಡಿಕೆಗೆ ವಿಂಗಡಿಸಲಾಗಿದೆ.
ಉದ್ದೇಶಿತ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಎರಡನೇ ಮಹಡಿಯ ಕಾಂಕ್ರೀಟ್ ಕೆಲಸ ನಡೆಯುತ್ತಿದೆ. ಈ ಬಾರಿಯ ಮಳೆಗಾಲಕ್ಕೆ ಮೊದಲು ಕಾಮಗಾರಿ ಪೂರ್ಣಗೊಳಿಸುವ ಗುರಿ ಇರಿಸಿ ಕೊಳ್ಳಲಾಗಿದೆ ಎಂದು ಮಂಗಳೂರಿನ ದ.ಕ. ನಿರ್ಮಿತಿ ಕೇಂದ್ರದ ಸಹಾಯಕ ಎಂಜಿ ನಿಯರ್ ಹರೀಶ್ ಮೆದು ತಿಳಿಸಿದ್ದಾರೆ.
50 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ
ವಿದ್ಯಾರ್ಥಿ ನಿಲಯದಲ್ಲಿ ಕಡಬ ಪ್ರದೇಶದ ಒಟ್ಟು 50 ವಿದ್ಯಾರ್ಥಿನಿಯರಿಗೆ ಪ್ರವೇಶಾ ವಕಾಶವಿದೆ. ಆ ಪೈಕಿ ಶೇ. 75 ಸೀಟುಗಳು ಅಲ್ಪಸಂಖ್ಯಾಕ ವಿದ್ಯಾರ್ಥಿನಿಯರಿಗೆ ಹಾಗೂ ಉಳಿದ ಶೇ. 25ರಷ್ಟು ಸೀಟ್ಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿನಿಯರಿಗೆ ಕಾದಿರಿಸಲಾಗಿದೆ.
ಶೀಘ್ರ ಬಿಡುಗಡೆ
ಮಂಜೂರಾಗಿರುವ 2.5 ಕೋಟಿ ರೂ. ಅನುದಾನದ ಪೈಕಿ 1.25 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಮಂಗಳೂರಿನ ದ.ಕ.ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದ್ದು, ಬಿಡುಗಡೆಗೆ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು.
-ಎಸ್.ಅಂಗಾರ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ