ಅಂಕತ್ತಡ್ಕ-ಮಂಜುನಾಥನಗರ ರಸ್ತೆಗೆ 2 ಕೋಟಿ ರೂ. ಮಂಜೂರು


Team Udayavani, Jan 31, 2019, 4:14 AM IST

31-january-1.jpg

ಸವಣೂರು: ಬೆಳಂದೂರು ಜಿ.ಪಂ. ವ್ಯಾಪ್ತಿಯ ಸವಣೂರು ಗ್ರಾ.ಪಂ.ಗೆ ಒಳಪಟ್ಟ ಅಂಕತ್ತಡ್ಕ-ಬಂಬಿಲ-ಮಂಜುನಾಥನಗರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಕೊನೆಗೂ ದಿನ ಕೂಡಿ ಬಂದಿದೆ.

ಈ ರಸ್ತೆಯ ಅಭಿವೃದ್ಧ್ದಿಗೆ ಲೋಕೋಪಯೋಗಿ ಇಲಾಖೆ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಎಂಜಿನಿಯರ್‌ ಅವರು ಟೆಂಡರ್‌ ಪ್ರಕಟನೆ ನೀಡಿದ್ದು, ಈ ರಸ್ತೆಗೆ 2 ಕೋಟಿ ರೂ. ಅನುದಾನದ ಕಾಮಗಾರಿ ನಡೆಯಲಿದೆ.

ಪಾಲ್ತಾಡಿ ಗ್ರಾಮದ ಮಂಜುನಾಥನಗರ- ಅಂಕತ್ತಡ್ಕ ಸಂಪರ್ಕಿಸುವ ಈ ರಸ್ತೆಯು ಇಂಗುಗುಂಡಿಯಂತಹ ಹೊಂಡಗಳಿಂದ ಆವೃತ್ತ ವಾಗಿದ್ದು, ಸುಗಮ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ರಸ್ತೆಯನ್ನು ಬೆಳ್ಳಾರೆ, ಮಾಡಾವು, ಕುಂಬ್ರ ಪೇಟೆ ಹಾಗೂ ಅಂಕತ್ತಡ್ಕ ಭಾಗದವರು ಸವಣೂರು ಸಂಪರ್ಕಿಸಲು ಉಪಯೋಗಿಸಲಾಗುತ್ತಿದೆ.

ತಾತ್ಕಾಲಿಕ ದುರಸ್ತಿಯಲ್ಲೇ ತೃಪ್ತಿ
ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಹದೆಗೆಟ್ಟು ಸಂಚರಿಸುವುದೇ ಕಷ್ಟಕರವಾದ ಪರಿಸ್ಥಿತಿ ಉದ್ಭವಿಸುತ್ತಿತ್ತು. ಪ್ರತೀ ಬಾರಿಯೂ ಮಳೆಗಾಲದಲ್ಲಿ ಊರಿನ ಪ್ರಮುಖರು ಸೇರಿಕೊಂಡು ತಮ್ಮ ಸ್ವಂತ ಖರ್ಚಿನಲ್ಲಿ ಕೆಂಪು ಕಲ್ಲು, ದಪ್ಪ ಮರಳು ತಂದು ಹೊಂಡ ಮುಚ್ಚಿಸಿ ರಸ್ತೆ ದುರಸ್ತಿಪಡಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದರು. ಈ ಬಾರಿ ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ. ಅವರ ಮುಂದಾಳತ್ವದಲ್ಲಿ ದುರಸ್ತಿ ಮಾಡಲಾಗಿತ್ತು.

ಸಂಸದರ ಶಿಫಾರಸು, ಶಾಸಕರ ಮುತುವರ್ಜಿ
ಈ ಭಾಗದ ಪ್ರಮುಖರ ಹಾಗೂ ಸಾರ್ವಜನಿಕರ ಬೇಡಿಕೆಯಂತೆ ಸಂಸದ ನಳಿನ್‌ ಕುಮಾರ್‌ ಅವರ ಶಿಫಾರಸಿನಂತೆ ಶಾಸಕ ಎಸ್‌. ಅಂಗಾರ ಅವರು 2 ಕೋಟಿ ರೂ. ಅನುದಾನವನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್‌
ಅಂಕತ್ತಡ್ಕದಿಂದ ಬೇರಿಕೆ ತಿರುವಿನ ವರೆಗೆ ಈ ಹಿಂದೆ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಗ್ರಾಮ ಸಡಕ್‌ ಯೋಜನೆಯಲ್ಲಿ ಡಾಮರು ಕಾಮಗಾರಿ ನಡೆಸಲಾಗಿತ್ತು. ಬಂಬಿಲ ಕ್ರಾಸ್‌ನಿಂದ ಮಂಜುನಾಥನಗರದವರೆಗೆ ಸುವರ್ಣ ಗ್ರಾಮ ಯೋಜನೆ, ಸಂಸದರ ಅನುದಾನದಲ್ಲಿ ಡಾಮರು ಹಾಕಲಾಗಿತ್ತು. ಬೇರಿಕೆ ತಿರುವಿನಿಂದ ಮಂಜುನಾಥನಗರದವರೆಗಿನ ರಸ್ತೆ ಡಾಮರು ಕಾಣದೆ ಹಾಗೆಯೇ ಉಳಿದುಕೊಂಡಿತ್ತು. ಇದೀಗ ಅನುದಾನ ಬಿಡುಗಡೆಗೊಂಡಿದೆ. ಟೆಂಡರ್‌ ಪ್ರಕ್ರಿಯೆ ನಡೆದ ಬಳಿಕ 6 ತಿಂಗಳೊಳಗೆ ಈ ರಸ್ತೆ ಅಭಿವೃದ್ಧಿಯಾಗಲಿದೆ.

ಬಸ್‌ ಸಂಚಾರಕ್ಕೆ ಬೇಡಿಕೆ
ಈ ರಸ್ತೆಯಲ್ಲಿ ಸರಕಾರಿ ಬಸ್‌ ಓಡಿಸುವಂತೆ ಈ ಹಿಂದಿನಿಂದಲೂ ಬೇಡಿಕೆ ಸಾರ್ವಜನಿಕ ವಲಯ ದಿಂದ ಕೇಳಿಬಂದಿತ್ತು. ಬಳಿಕ ಗ್ರಾ.ಪಂ. ಮೂಲಕ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿಗೂ ಮನವಿ ಮಾಡಲಾಗಿತ್ತು. ರಸ್ತೆಯ ಅವ್ಯವಸ್ಥೆಯಿಂದಾಗಿ ಬಸ್‌ ಓಡಾಟಕ್ಕೆ ಕಷ್ಟಕರವಾಗುವ ಸಾಧ್ಯತೆಯಿಂದ ಈ ಭಾಗದಲ್ಲಿ ಬಸ್‌ ಓಡಾಟ ಪ್ರಕ್ರಿಯೆಗೆ ಚಾಲನೆ ಸಿಕ್ಕಿರಲಿಲ್ಲ. ಇನ್ನು ರಸ್ತೆ ಅಭಿವೃದ್ಧಿಯಾದರೆ ಬಸ್‌ ಸಂಚಾರದ ಬೇಡಿಕೆಗೆ ಪುಷ್ಠಿ ಸಿಗಲಿದೆ.

ಟೆಂಡರ್‌ ಪ್ರಕ್ರಿಯೆ ಬಳಿಕ ಕಾಮಗಾರಿ
ಅಂಕತ್ತಡ್ಕ-ಮಂಜುನಾಥನಗರ ರಸ್ತೆಗೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಟೆಂಡರ್‌ ಪ್ರಕಟನೆ ನೀಡಲಾಗಿದೆ ಮಾರ್ಚ್‌ ಅಂತ್ಯಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬಳಿಕ 6 ತಿಂಗಳೊಳಗೆ ಕಾಮಗಾರಿ ಮುಗಿಯಲಿದೆ. ಸುಳ್ಯ ಕ್ಷೇತ್ರವೂ ಹೆಚ್ಚು ವಿಸ್ತೀರ್ಣ ಹೊಂದಿದ್ದು, ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ. 
– ಎಸ್‌. ಅಂಗಾರ
ಶಾಸಕರು, ಸುಳ್ಯ

ಜನಪ್ರತಿನಿಧಿಗಳ ಶ್ರಮ: ಅಭಿನಂದನಾರ್ಹ
ಅಂಕತ್ತಡ್ಕ-ಮಂಜುನಾಥನಗರ ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆಯಾಗುವ ಮೂಲಕ ಬಹುವರ್ಷಗಳ ಬೇಡಿಕೆ ಈಡೇರಿದೆ. ಹಲವು ವರ್ಷಗಳಿಂದ ಈ ಕುರಿತು ಪ್ರಯತ್ನಿಸಲಾಗಿದೆ. ಅನುದಾನ ಮಂಜೂರುಗೊಳ್ಳುವಲ್ಲಿ ಗ್ರಾ.ಪಂ.ನಿಂದ ಸಂಸದರವರೆಗೂ ಸಾಕಷ್ಟು ಶ್ರಮ ವಹಿಸಿದ್ದಾರೆ. ಅವರೆಲ್ಲರೂ ಅಭಿನಂದನಾರ್ಹರು. 
 – ಬಿ.ಕೆ. ರಮೇಶ್‌ಸ್ಥಾಪಕಾಧ್ಯಕ್ಷರು,
ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನ, ಪಾಲ್ತಾಡಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.