ಗಿಡ ಬೆಳೆಸಲು ಮಕ್ಕಳಿಗೆ 5 ರೂ. ಪ್ರೋತ್ಸಾಹ


Team Udayavani, Oct 26, 2022, 4:09 PM IST

ಗಿಡ ಬೆಳೆಸಲು ಮಕ್ಕಳಿಗೆ 5 ರೂ. ಪ್ರೋತ್ಸಾಹ

ಬೆಂಗಳೂರು: ಬಾಲ್ಯದಲ್ಲೆ ಶಾಲಾ ಮಕ್ಕಳಲ್ಲಿ ಪರಿಸರ ಪ್ರೇಮ ಬಿತ್ತುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಪಂನ ಹೂಸ್ಕೂರ್‌ ಗ್ರಾಪಂ ದಾಪುಗಾಲಿರಿಸಿದೆ. ನೆರಳೆ, ಹಲಸು, ಮಾವು ಸೇರಿದಂತೆ ಮತ್ತಿತರ ಹಣ್ಣಿನ ಸಸಿಗಳನ್ನು ಬೆಳೆಸಿ ಗ್ರಾಪಂಗೆ ನೀಡುವ ಮಕ್ಕಳಿಗೆ ಪ್ರತಿ ಗಿಡಕ್ಕೆ 5ರೂ.ಗಳ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದೆ.

ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಗೆ ಸೇರುವ ಹುಸ್ಕೂರ್‌ ಗ್ರಾಪಂನಲ್ಲಿ ಹತ್ತಕ್ಕೂ ಅಧಿಕ ಗ್ರಾಮಗಳಿವೆ. ತೋಟಗೆರೆ, ಬೊಮ್ಮಶೆಟ್ಟಿಹಳ್ಳಿ, ರಾಮಪಾಳ್ಯ,ಅಗ್ರಹಾರ ಪಾಳ್ಯ, ಹೊಸಹಳ್ಳಿ ಪಾಳ್ಯ, ಹುಚ್ಚನ ಪಾಳ್ಯ, ಗೋವಿಂದಪುರ,ಹೊನ್ನಸಂದ್ರ, ವಡೇರಹಳ್ಳಿ, ಬೆತ್ತನಗೆರೆ ಗ್ರಾಮಗಳು ಹೂಸ್ಕೂರ್‌ ಗ್ರಾಪಂ ವ್ಯಾಪ್ತಿಗೆ ಸೇರಲಿವೆ. ಕಿರಿಯ ಪ್ರಾಥಮಿಕ ಶಾಲೆಯಿಂದ ಹಿರಿಯ ಪ್ರಾಥಮಿಕ ಶಾಲೆ ವರೆಗೂ ನೂರಾರು ಸಂಖ್ಯೆಯಲ್ಲಿ ಮಕ್ಕಳು ಕಲಿಕೆಯಲ್ಲಿ ನಿರತರಾಗಿದ್ದಾರೆ. ಶಾಲಾ ಹಂತದಲ್ಲೆ ವಿದ್ಯಾರ್ಥಿಗಳನ್ನು ಪರಿಸದತ್ತ ಆಕರ್ಷಿಸುವ ಸದುದ್ದೇಶ ಕೂಡ ಇದರಲ್ಲಿ ಸೇರಿದೆ.

ಈ ಕಾರ್ಯಕ್ರಮ ಯಶಸ್ವಿ ಸಂಬಂಧ ಹೂಸ್ಕೂರ್‌ ಗ್ರಾಪಂ ಪಣತೊಟ್ಟಿದ್ದು ಶಾಲಾ ಶಿಕ್ಷಕರನ್ನು ಒಳಗೂಡಿಸಿದೆ. ಗ್ರಾಪಂ ವ್ಯಾಪ್ತಿಯ ಎಲ್ಲ ಶಾಲಾ ಶಿಕ್ಷಕರಿಗೆ ಈ ಬಗ್ಗೆ ಪಂಚಾಯ್ತಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಕ್ಕಳು ಕೂಡ ಸಸಿಗಳ ಬೆಳೆಸುವ ಬಗ್ಗೆ ಆಸಕ್ತಿಯನ್ನು ಕೂಡ ತೋರಿಸುತ್ತಿದ್ದಾರೆ ಎಂದು ಪಂಚಾಯ್ತಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸರ ದಿನೇ ದಿನೆ ಕ್ಷೀಣಿಸುತ್ತಿದೆ. ಭವಿಷ್ಯತ್ತಿನ ದೃಷ್ಟಿಯಿಂದ ಗಿಡಮರಗಳನ್ನು ಬೆಳೆಸಬೇಕಾಗಿದೆ.ಆ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಗಿಡ ಬೆಳೆಸುವ ಸಂಸ್ಕೃತಿಯ ಬಗ್ಗೆ ತಿಳಿವಳಿಕೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಹುಸ್ಕೂರ್‌ ಗ್ರಾಪಂ ಇದೀಗ ಪ್ರಾಯೋಗಿಕ ಹೆಜ್ಜೆಯಿರಿಸಿದ್ದು ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಪರಿಸರದ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಹಣ್ಣುಗಳ ಗಿಡದ ಬಗ್ಗೆ ತಿಳಿವಳಿಕೆ: ಮಕ್ಕಳು ಮೊಬೈಲ್‌ ನಲ್ಲೆ ಮುಳುಗಿ ಹೋಗುತ್ತಿದ್ದಾರೆ. ಜತೆಗೆ ಕೆಲವು ಮಕ್ಕಳಿಗೆ ಹಣ್ಣು ಬಿಡುವ ಗಿಡಗಳ ಬಗ್ಗೆ ಪರಿಚಯವೇ ಇಲ್ಲ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಹಣ್ಣು ಬಿಡುವ ಗಿಡಗಳ ಬಗ್ಗೆ ತಿಳಿವಳಿಕೆ ಮೂಡಿಸುವುದು ಕೂಡ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಹೂಸ್ಕೂರ್‌ ಗ್ರಾಪಂನ ಪಿಡಿಒ ರಾಜೇಶ್‌ ಹೇಳುತ್ತಾರೆ. ಗ್ರಾಪಂನಿಂದಲೇ ಹಣ್ಣಿನ ಗಿಡ ಬೆಳೆಸಲು ಮಕ್ಕಳಿ ಪ್ಲಾಸ್ಟಿಕ್‌ ಕೊಟ್ಟೆಗಳನ್ನು ಕೂಡ ನೀಡಲಾಗುತ್ತದೆ. ಅವುಗಳಲ್ಲಿ ಗಿಡಗಳನ್ನು ಪೋಷಿಸಿ, ಸಂರಕ್ಷಣೆ ಮಾಡಿ ಮಕ್ಕಳು ಗ್ರಾಪಂಗೆ ನೀಡಿದರೆ ಅವರಿಗೆ 5.ರೂ.ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪಂಚಾಯ್ತಿಯ ಸ್ವನಿಧಿಯಿಂದ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಬಳಕೆ ಮಾಡಲಾಗುವುದು ಎಂದು ತಿಳಿಸುತ್ತಾರೆ.

ಕೃಷಿಯತ್ತ ಒಲವು ತೋರಲು ಸಹಕಾರಿ: ಮಕ್ಕಳಲ್ಲಿ ಪರಿಸರ ಆಸಕ್ತಿ ಮೂಡಿಸಲು ಇಂತಹ ಕಾರ್ಯ ಕ್ರಮಗಳು ಅನುಕೂಲವಾಗಲಿದೆ. ಭವಿಷ್ಯತ್ತಿನ ದೃಷ್ಟಿ ಯಿಂದ ಇಂತಹ ಕಾರ್ಯಕ್ರಮಗಳು ರೂಪಿತ ವಾಗಬೇಕು. ಮಕ್ಕಳಲ್ಲಿ ನಮ್ಮ ಸುತ್ತಮುತ್ತಲಿನ ಪರಿ ಸರದ ಬಗ್ಗೆ ಅರಿವು ಮೂಡುವುದರ ಜತೆಗೆ ಮುಂದಿ ದಿನಗಳಲ್ಲಿ ಮಕ್ಕಳು ಕೃಷಿ ಕ್ಷೇತ್ರದತ್ತ ಒಲವು ತೋರಲು ಕೂಡ ಇದು ಸಹಾಕವಾಗಲಿದೆ ಎಂದು ನರಸೀಪುರ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎನ್‌.ವಿ. ರಮೇಶ್‌ ಹೇಳುತ್ತಾರೆ.

ಗ್ರಾಪಂ ವ್ಯಾಪ್ತಿಯಲ್ಲಿರುವ ಸ್ಮಶಾನ,ಅರಣ್ಯ ಪ್ರದೇಶ ಸೇರಿದಂತೆ ಮತ್ತತಿರರ ಸ್ಥಳಗಳಲ್ಲಿ ಗಿಡುವ ಕಾರ್ಯಕ್ರಮವನ್ನು ಗ್ರಾಪಂನಿಂದ ಹಮ್ಮಿಕೊಳ್ಳುವ ಆಲೋಚನೆ ಇದೆ. ಆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಗ್ರಾಪಂನಿಂದ ನರ್ಸರಿ ಅನ್ನು ಕೂಡ ತೆರೆಯಲಾಗಿದೆ. ಗಿಡಮರಗಳನ್ನು ಬೆಳೆಸಿ ಸಂರಕ್ಷಿಸುವುದಕ್ಕೆ ಪಂಚಾಯ್ತಿ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಪಂ ಕಾರ್ಯ ಕೇವಲ ಒಳಚರಂಡಿ, ರಸ್ತೆ ನಿರ್ಮಾಣ ಮಾಡುವುದು ಅಷ್ಟೇ ಅಲ್ಲ. ಪರಿಸರದ ಬಗ್ಗೆ ಕಾಳಜಿ ತೋರುವುದು ಸೇರಿದೆ. ಆ ಹಿನ್ನೆಲೆಯಲ್ಲೆ ಇದೀಗ ಗ್ರಾಪಂನ ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದತ್ತ ಆಕರ್ಷಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಮುಂದಿನಗಳಲ್ಲಿ ಸ್ಮಶಾನ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಆಲೋಚನೆ ಇದೆ. – ರಾಜೇಶ್‌, ಪಿಡಿಒ, ಹೂಸ್ಕೂರ್‌ ಗ್ರಾಪಂ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.