ದೀಪಕ್ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ;50 ಲಕ್ಷಕ್ಕೆ ಆಗ್ರಹ
Team Udayavani, Jan 4, 2018, 11:40 AM IST
ಮಂಗಳೂರು: ದುಷ್ಕರ್ಮಿಗಳಿಂದ ಬುಧವಾರ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರ ಕುಟುಂಬಕ್ಕೆ ಜಿಲ್ಲಾಡಳಿತ 5 ಲಕ್ಷ ರೂಪಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಿಸಿದೆ. ಆದರೆ ಈ ಪರಿಹಾರ ಧನ ಸಾಲುವುದಿಲ್ಲ 50 ಲಕ್ಷ ರೂಪಾಯಿ ನೀಡುವಂತೆ ಸಂಬಂಧಿಕರು,ಸಂಘಟನೆಗಳ ಮುಖಂಡರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಮೃತ ದೀಪಕ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಇಂದೇ 5 ಲಕ್ಷ ರೂಪಾಯಿ ಪರಿಹಾರ ಧನ ನೀಡುವ ಬಗ್ಗೆ ತಿಳಿಸಿದರು.
ತಕ್ಷಣ ಜಿಲ್ಲಾಡಳಿತದ ವತಿಯಿಂದ 5 ಲಕ್ಷ ರೂಪಾಯಿ ನೀಡುತ್ತೇವೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ನೀಡಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಈ ವೇಳೆ ಹಿಂದೂ ಪರ ಸಂಘಟನೆಯ ಮುಖಂಡರು ಧಿಕ್ಕಾರಗಳನ್ನು ಕೂಗಿದ್ದು ದನಕಳ್ಳ ಸತ್ತರೆ 10 ಲಕ್ಷ ನೀಡುತ್ತೀರಿ ನಮಗೇಕೆ ನೀಡುವುದಿಲ್ಲ ಎಂದು ಘೋಷಣೆಗಳನ್ನು ಕೂಗಿದರು.
ಜಿಲ್ಲಾಧಿಕಾರಿಗಳು ಪರಿಹಾರ ಧನದ ಬಗ್ಗೆ ಘೋಷಿಸಿ ಸಾಂತ್ವನ ಹೇಳಿದ ಬಳಿಕ ಪೋಷಕರು ದೀಪಕ್ ಅಂತ್ಯಸಂಸ್ಕಾರ ನಡೆಸಲು ಒಪ್ಪಿಗೆ ಸೂಚಿಸಿದರು. ಗ್ರಾಮದಲ್ಲೇ ಮೆರವಣಿಗೆ ನಡೆಸಿ ಬಳಿಕ ಅಂತ್ಯ ಸಂಸ್ಕಾರ ನಡೆಸಲಾಗುತ್ತಿದೆ.
ಮೊಬೈಲ್ ಅಂಗಡಿಯಲ್ಲಿ ಸಿಮ್ ವಿತರಕರಾಗಿ ಕೆಲಸ ಮಾಡುತ್ತಿದ್ದ ದೀಪಕ್ ಬಡ ಕುಟುಂಬಕ್ಕೆ ಆಧಾರ ವಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ