ಹಸಿರು ನಿಶಾನೆಗೆ ಕಾಯುತ್ತಿದೆ  5,987 ಕೋ.ರೂ. ಯೋಜನೆ


Team Udayavani, May 1, 2017, 12:22 PM IST

PMKSY.jpg

ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ:

ಮಂಗಳೂರು: ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯಲ್ಲಿ (ಪಿಎಂಕೆಎಸ್‌ವೈ) ದ.ಕ. ಜಿಲ್ಲೆಯಿಂದ ಕೇಂದ್ರಕ್ಕೆ ಸಲ್ಲಿಕೆಯಾಗಿರುವ 5987 ಕೋ. ರೂ. ನೀರಾವರಿ ಯೋಜನೆಗಳು ಮಂಜೂರಾತಿಗಾಗಿ ಕಾಯುತ್ತಿವೆ. 

ವಿವಿಧ ಇಲಾಖೆಗಳು 2017-18ನೇ ಸಾಲಿನಿಂದ ಪ್ರಾರಂಭಗೊಂಡು ಮುಂದಿನ 5 ವರ್ಷಗಳ ಅವಧಿಗೆ ಮಾಡಿರುವ ಕ್ರಿಯಾ ಯೋಜನೆಗಳನ್ನು ಕ್ರೋಡೀಕರಿಸಿ ಯೋಜನೆ ಸಿದ್ಧಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಅನುಮೋದನೆಗೊಂಡು 2016ರ ಆಗಸ್ಟ್‌ನಲ್ಲಿ ರಾಜ್ಯ ಕೃಷಿ ಆಯುಕ್ತರಿಗೆ ಸಲ್ಲಿಸಲಾಗಿತ್ತು. ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಈ ಪ್ರಸ್ತಾವನೆ ಮಂಡಿಸಲಾಗಿದ್ದು, ಅನುಮೋದನೆಗೆ ಕಾಯುತ್ತಿದೆ.
 
1.11 ಕೋ. ಘನ ಮೀಟರ್‌ ನೀರು ಸೃಜಿಸುವ ಗುರಿ
ದ.ಕನ್ನಡ ಜಿಲ್ಲೆಯಲ್ಲಿ ವಾಡಿಕೆಯಂತೆ 3912 ಮಿ. ಮೀ. ಮಳೆಯಾಗುತ್ತಿದ್ದು, ಮೇಲ್ಮೈ ಮತ್ತು ಅಂತರ್ಜಾಲ ಸೇರಿ 0.43 ಕೋಟಿ ಘನ ಮೀಟರ್‌ ನೀರು ಲಭ್ಯವಿದೆ. ಆದರೆ ಪ್ರಸ್ತುತ ಜಿಲ್ಲೆಯ ನೀರಾವರಿ, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಮತ್ತು ಕೈಗಾರಿಕಾ ಬೇಡಿಕೆ ಸೇರಿ 2020ರ ವೇಳೆಗೆ ಒಟ್ಟಾರೆ 0.487 ಕೋಟಿ ಘನ ಮೀಟರ್‌ ನೀರಿನ ಬೇಡಿಕೆ ಉಂಟಾಗಲಿದೆ. ಇದನು ಪೂರೈಸಲು ವಿವಿಧ ಇಲಾಖೆಗಳು ಸೇರಿ ಪ್ರಧಾನಿ ಕೃಷಿ ಸಿಂಚಯಿ ಯೋಜನೆಯಲ್ಲಿ 5987 ಕೋ. ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ.

1.43 ಲಕ್ಷ ಹೆಕ್ಟೇರಿಗೆ ನೀರಾವರಿ
ಪ್ರಸ್ತಾವಿತ ಯೋಜನೆ ಪ್ರಕಾರ ದ.ಕನ್ನಡ ಜಿಲ್ಲೆಯಲ್ಲಿ 1,43, 681 ಹೆಕ್ಟೇರ್‌ ವಿಸ್ತೀರ್ಣ ಪ್ರದೇಶಕ್ಕೆ ನೀರಾವರಿ ಆಗಲಿದೆ. ನೀರಾವರಿ ಇಲಾಖೆಯಿಂದ 51,900 ಹೆಕ್ಟೇರ್‌ ಪ್ರದೇಶಕ್ಕೆ 4222.47 ಕೋ. ರೂ. ಅಂದಾಜು ಮೊತ್ತ ನಿಗದಿ ಪಡಿಸಲಾಗಿದ್ದು, 1.08 ಕೋಟಿ ಘನ ಮೀಟರ್‌ ನೀರು ಸಂಗ್ರಹ, ಕೃಷಿ ಇಲಾಖೆಯಿಂದ 84704 ವಿಸ್ತೀರ್ಣ ಪ್ರದೇಶಕ್ಕೆ 167 ಕೋ. ರೂ. ಅಂದಾಜು ಮೊತ್ತ ವೆಚ್ಚ, ತೋಟಗಾರಿಕೆ ಇಲಾಖೆಯಂದ 7077 ಹೆಕ್ಟೇರ್‌ ಪ್ರದೇಶಕ್ಕೆ 378 ಕೋ. ರೂ. ನೀರಾವರಿ ವ್ಯವಸ್ಥೆ ಮಾಡುವ ಪ್ರಸ್ತಾವನೆ ಕ್ರಿಯಾ ಯೋಜನೆಯಲ್ಲಿ ಒಳಗೊಂಡಿದೆ. ಒಟ್ಟಾರೆ ಯೋಜನೆಯಲ್ಲಿ 1.118 ಕೋಟಿ ಘನ ಮೀಟರ್‌ ನೀರು ಸಂಪನ್ಮೂಲ ಹೊಂದುವ ಗುರಿ ಹೊಂದಲಾಗಿದೆ. ಇದರಲ್ಲಿ ನೀರಾವರಿ ಇಲಾಖೆಯಿಂದ 1029 ಕಿಂಡಿ ಅಣೆಕಟ್ಟು ಹಾಗೂ ಕೃಷಿ ಇಲಾಖೆಯಿಂದ 519 ಕಿಂಡಿ ಅಣೆಕಟ್ಟುಗಳು ಹಾಗೂ ಇತರ ಪೂರಕ ಕಾಮಗಾರಿಗಳನ್ನು ಕ್ರಿಯಾ ಯೋಜನೆ ಒಳಗೊಂಡಿದೆ. 
ದ.ಕ. : 1.13 ಲಕ್ಷ ಹೆ. ತೋಟಗಾರಿಕೆ, 28,700 ಹೆ. ಭತ್ತ ದಕ್ಷಿಣ ಕನ್ನಡ ಜಿಲ್ಲೆ ಒಟ್ಟು 4,77, 149 ಹೆಕ್ಟೇರ್‌ ವಿಸ್ತೀರ್ಣ ಹೊಂದಿದೆ. ಇದರಲ್ಲಿ 1,13,549 ಹೆ. ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಇದೆ. ಈ ಬಾರಿ ಮುಂಗಾರಿನಲ್ಲಿ 28,700 ಹಾಗೂ ಹಿಂಗಾರಿನಲ್ಲಿ 19930 ಹೆ. ಭತ್ತ ಕೃಷಿ ಮಾಡಲಾಗಿದೆ. 2016-17ನೇ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿರುವುದರಿಂದ ಭತ್ತದ ಕೃಷಿ ಗಣನೀಯವಾಗಿ ಕಡಿಮೆಯಾಗಿದೆ. ವಾರ್ಷಿಕವಾಗಿ ದ.ಕ. ಜಿಲ್ಲೆಯ ವಾಡಿಕೆ ಮಳೆ 3912.2 ಮಿ.ಮೀ. ಆಗಿದ್ದು, ಈ ಬಾರಿ 2965.3 ಮಿ.ಮೀ. ಮಳೆ ಬಂದಿದೆ. 2015 ನೇ ಸಾಲಿನಲ್ಲಿ 3151.6 ಮಿ.ಮೀ. ಮಳೆಯಾಗಿತ್ತು.

ಏನಿದು ಕೃಷಿ ಸಿಂಚಯಿ ಯೋಜನೆ 
ಹರ್‌ ಖೇತಿ ಕೋ ಪಾನಿ (ಪ್ರತಿಯೊಂದು ಹೊಲಕ್ಕೂ ನೀರು) ಎಂಬ ಪರಿಕಲ್ಪನೆಯೊಂದಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನಿ ಕೃಷಿ ಸಿಂಚಯಿ ಯೋಜನೆ (ಪಿಎಂಕೆಎಸ್‌ವೈ) ಒಟ್ಟು 5 ವರ್ಷಗಳ ಯೋಜನೆಯಾಗಿದ್ದು, ಇದಕ್ಕೆ 50,000 ಕೋ. ರೂ. ನಿಗದಿಪಡಿಸಲಾಗಿದೆ. ದೇಶದಲ್ಲಿ 142 ದಶಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಇದ್ದು ಇದರಲ್ಲಿ ಶೇ. 45 ಮಾತ್ರ ನೀರಾವರಿ ಸೌಲಭ್ಯ ಹೊಂದಿದೆ. 

ಈ ಹಿನ್ನೆಲೆಯಲ್ಲಿ ಎಲ್ಲ ಕೃಷಿ ಭೂಮಿಯನ್ನು ನೀರಾವರಿ ಸೌಲಭ್ಯಕ್ಕೆ ಒಳಪಡಿಸುವುದು, ನೀರಿನ ಮೂಲಗಳನ್ನು ಸೃಷ್ಟಿಸುವುದು, ನೀರಿನ ಬಳಕೆ ದಕ್ಷತೆ ಹೆಚ್ಚಿಸುವುದು, ನೀರು ಪೋಲು ಕಡಿಮೆ ಮಾಡುವುದು, ತಂತ್ರಜ್ಞಾನಗಳನ್ನು ಬಳಕೆ ಮಾಡಿ ಸಂರಕ್ಷಣೆ ಮಾಡುವುದು ಸೇರಿದಂತೆ ವಿವಿಧ ಉದ್ದೇಶಗಳನ್ನು ಒಳಗೊಂಡಿದೆ.

– ಕೇಶವ ಕುಂದರ್‌ 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.