ತುರ್ತು ನೀರು ಪೂರೈಕೆಗೆ 6 ಕೋಟಿ ರೂ.: ಐವನ್
Team Udayavani, May 7, 2019, 6:15 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ತುರ್ತು ನೀರು ಪೂರೈಕೆಗೆ ಜಿಲ್ಲಾಡಳಿತಕ್ಕೆ ಸರಕಾರ 6 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತುಂಬೆಯಲ್ಲಿ ಈಗ 4.38 ಮೀಟರ್ ನೀರು ಇದೆ. ಕಳೆದ ವರ್ಷ ಇದೇ ಸಮಯ 5.6 ಮೀಟರ್ ನೀರಿತ್ತು. ಈ ಹಂತದಲ್ಲಿ ಟ್ಯಾಂಕರ್ ಸಹಿತ ಇತರ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮಾಡಲು ಜಿಲ್ಲಾಧಿಕಾರಿ ಜತೆ ಸಮಾಲೋಚನೆ ಮಾಡಲಾಗಿದೆ ಎಂದರು.
ಪ್ರಧಾನಿ ಮೋದಿಯಿಂದ ಕೀಳು ಮಟ್ಟದ ಭಾಷೆ
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿಯ ವಿರುದ್ಧ ಕೀಳು ಮಟ್ಟದ ಭಾಷಾ ಪ್ರಯೋಗ ನಡೆಸಿದ್ದಾರೆ. ಬೋಫೋರ್ಸ್ ಹಗರಣದಿಂದ ನ್ಯಾಯಾಲಯದ ಮೂಲಕ ದೋಷ ಮುಕ್ತರಾದ ಮತ್ತು ದಿವಂಗತರಾದ ರಾಜೀವ ಗಾಂಧಿ ವಿರುದ್ಧ ತೀರಾ ಕೆಳಮಟ್ಟದ ಭಾಷಾ ಪ್ರಯೋಗ ಪ್ರಧಾನಿಯ ಘನತೆಗೆ ತಕ್ಕುದಾಗಿಲ್ಲ ಎಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರಾದ ಎ.ಸಿ. ವಿನಯರಾಜ್, ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಕಾರ್ಪೊರೇಟರ್ಗಳಾದ ಅಪ್ಪಿ, ಪ್ರಕಾಶ್ ಸಾಲ್ಯಾನ್, ಆಶಾ ಡಿ’ಸಿಲ್ವ ಸಿ.ಎಂ. ಮುಸ್ತಾಫ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!