ಸುಳ್ಯ: ರಬ್ಬರ್‌ ಧಾರಣೆ ಕುಸಿತ, ಸಂಕಷ್ಟದಲ್ಲಿ ಬೆಳೆಗಾರರು


Team Udayavani, May 14, 2018, 7:50 AM IST

Rubber-Milk-600.jpg

ಬೆಳ್ಳಾರೆ: ರಬ್ಬರ್‌ ಧಾರಣೆ ಕುಸಿತಗೊಂಡ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅರಂತೋಡು, ಬೆಳ್ಳಾರೆ, ಸಂಪಾಜೆ ಭಾಗದಲ್ಲಿ ರಬ್ಬರ್‌ ಬೆಳೆಗಾರರು ತೀವ್ರ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಪರಿಣಾಮ ಸಾವಿರಾರು ಎಕ್ರೆಗಳಲ್ಲಿ ಬೆಳೆಯಲಾಗಿದ್ದ ರೈತರು ರಬ್ಬರ್‌ ಟ್ಯಾಪಿಂಗ್‌ ಮಾಡುವುದನ್ನೇ ನಿಲ್ಲಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಅಡಿಕೆ ಮತ್ತು ರಬ್ಬರ್‌ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇದೀಗ ಅಡಿಕೆ ಕೃಷಿಗೂ ಹಳದಿ ರೋಗ, ರಬ್ಬರ್‌ ವ್ಯಾಪಕವಾಗಿ ಹರಡಿಕೊಂಡಿರುವ ಪರಿಣಾಮ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆಮದು ನೀತಿಯನ್ನು ಸಡಿಲಿಸಿರುವುದೇ ಇದಕ್ಕೆ ಕಾರಣ ಎಂದು ರಬ್ಬರ್‌ ಕೃಷಿಕರು ಅಭಿಪ್ರಾಯ ಪಡುತ್ತಾರೆ.

ಅಸಲು ಅಧಿಕ
ಸ್ಥಳೀಯವಾಗಿ ಉತ್ಪಾದನಾ ವೆಚ್ಚ ಒಂದು ಕೆಜಿಗೆ 120 ಆಗುತ್ತಿದ್ದು ರಬ್ಬರ್‌ ಮರಕ್ಕೆ ಹಾಕುವ ಗಂ, ಪ್ಲಾಸ್ಟಿಕ್‌, ಹಾಗೂ ಇತರ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ. ಸಣ್ಣ ರಬ್ಬರ್‌ ಬೆಳೆಗಾರರು ತಾವೇ ಟ್ಯಾಪಿಂಗ್‌ ಮಾಡುತ್ತಿದ್ದು, ಕೂಲಿಕಾರ್ಮಿಕರನ್ನು ಆಶ್ರಯಿಸಿದ ಕೆಲವು ರಬ್ಬರ್‌ ಬೆಳೆಗಾರರು ಟ್ಯಾಪಿಂಗ್‌ ಈಗಾಗಲೇ ನಿಲ್ಲಿಸಿದ್ದಾರೆ. ಮುಂದಿನ ವರ್ಷವ ಮರದಲ್ಲಿ ಹಾಲು ಕಡಿಮೆಯಾದರೆ ಎಂಬ ಭಯದಿಂದ ಕೆಲವರು ನಷ್ಟದಲ್ಲಿದ್ದರೂ ರಬ್ಬರ್‌ ಹಾಲು ತೆಗೆಯುತ್ತಿದ್ದಾರೆ. ರಬ್ಬರ್‌ ಬೆಳೆಗಾರರ ನಿರುತ್ಸಾಹ ಹಾಲು ತೆಗೆಯುವ ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದೆ. ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕರು ಜೀವನ ನಿರ್ವಾಹಣೆಗಾಗಿ ಪರ್ಯಾಯ ಕೆಲಸದ ಮೊರೆ ಹೋಗಿದ್ದಾರೆ.

ರಾಜ್ಯದ 60 ಸಾವಿರ ಹೆಕ್ಟೆರ್‌ ರಬ್ಬರ್‌ ತೋಟದ ಪೈಕಿ ಶೇ. 50 ರಷ್ಟು ದ.ಕ. ಜಿಲ್ಲೆಯಲ್ಲಿದೆ. ಇದೀಗ ರಬ್ಬರ್‌ ಟ್ಯಾಪಿಂಗ್‌ ನಿಲ್ಲಿಸಿರುವುದರಿಂದ ದೇಶದಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ ಮತ್ತು ರಾಜ್ಯದಲ್ಲಿ 10 ಸಾವಿರ ಮೆಟ್ರಿಕ್‌ ಉತ್ಪಾದನೆ ಕುಸಿದಿದೆ ಅಂದಾಜಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ 35 ಸಾವಿರ ಮೆಟ್ರಿಕ್‌ ಟನ್‌ ಉತ್ಪಾದನೆ ಆಗುತ್ತಿತ್ತು. ಈ ಹಿಂದೆ ಅಡಿಕೆ ಜಾಗದಲ್ಲಿ ರಬ್ಬರ್‌ ಬೆಳೆಯನ್ನು ಪರಿಚಯಿಸಲಾಗಿತ್ತು.ಆದರೆ ಈಗ ರಬ್ಬರ್‌ ಲಾಭ ತರದ ಹಿನ್ನೆಲೆಯಲ್ಲಿ ಸುಳ್ಯ ಭಾಗದವರು ತಾಳೆ ಬೆಳೆಯತ್ತ ಮುಖ ಮಾಡುತ್ತಿದ್ದಾರೆ.

ಭವಿಷ್ಯವಿಲ್ಲ
ಈಗ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಕೆ.ಜಿಗೆ ರೂ. 121 ಇದೆ. ಈ ಮಾರುಕಟ್ಟೆ ಏನೂ ಸಾಲದೂ. ಕಾರ್ಮಿಕರರನ್ನು ಇಟ್ಟುಕೊಂಡು ರಬ್ಬರ್‌ ಟ್ಯಾಪಿಂಗೆ ಹಾಗೂ ಇತರೆ ಕೆಲಸ ಮಾಡಿಸಿದರೆ ಉಳಿತಾಯ ಸಿಗದ ಪರಿಸ್ಥಿತಿ ಸೃಷ್ಟಿಯಾಗಿದೆ. ಕನಿಷ್ಠ ರಬ್ಬರ್‌ಗೆ ಕೇಜಿಯೊಂದಕ್ಕೆ ರೂ. 170 ಮಾರುಕಟ್ಟೆ ಧಾರಣೆ ಬರಬೇಕು. ಇಲ್ಲದಿದ್ದರೆ ರಬ್ಬರ್‌ ಕೃಷಿಕರಿಗೆ ಭವಿಷ್ಯ ಇಲ್ಲ.
– ಮಾಧವ ಗೌಡ ಕಾಮಧೇನು, ರಬ್ಬರ್‌ ಕೃಷಿಕರು ಬೆಳ್ಳಾರೆ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.