ಪಿಜಿ, ಹೋಂ ಸ್ಟೇ ನಿರ್ವಹಣೆಗೆ ನೀತಿ- ನಿಯಮ ರಚನೆ


Team Udayavani, Jun 6, 2019, 9:55 AM IST

U-T-khader

ಮಂಗಳೂರು: ನಗರ ಪ್ರದೇಶಗಳಲ್ಲಿರುವ ಪೇಯಿಂಗ್‌ ಗೆಸ್ಟ್‌ (ಪಿಜಿ) ಮತ್ತು ಹೋಂ ಸ್ಟೇಗಳಿಗೆ ಸಂಬಂಧಿಸಿ ಹೊಸ ನೀತಿ ರೂಪಿಸಲು ಸರಕಾರ ನಿರ್ಧರಿಸಿದೆ. ಅಧಿಕಾರಿಗಳು, ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದು, ನಿಯಮಾವಳಿ ಕರಡು ಹಂತದಲ್ಲಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶಗಳಲ್ಲಿರುವ ಪಿಜಿಗಳಿಗೆ ಮೂಲ ಸೌಲಭ್ಯ, ಭದ್ರತೆ ಮತ್ತಿತರ ವಿಚಾರಗಳಲ್ಲಿ ಸ್ಪಷ್ಟ ನೀತಿಗಳಿಲ್ಲ. ಇದರಿಂದಾಗಿ ಅಹಿತಕರ ಘಟನೆಗಳಾದಾಗ ಕ್ರಮಕ್ಕೆ ಸಾಧ್ಯವಾಗುತ್ತಿಲ್ಲ. ಈ ದಿಶೆಯಲ್ಲಿ ಸರಕಾರ ಕಾರ್ಯ ಪ್ರವೃತ್ತವಾಗಿದೆ. ನಗರದಲ್ಲಿರುವ ಹೋಂ ಸ್ಟೇಗಳಿಗೂ ನೀತಿ ರೂಪಿಸುವ ಚಿಂತನೆಯಿದೆ ಎಂದರು.

ಆಸ್ತಿ ತೆರಿಗೆ, ಖಾತೆ ಬದಲಾವಣೆಗೆ ಆನ್‌ಲೈನ್‌ ವ್ಯವಸ್ಥೆ
ಮಂಗಳೂರು ಮಹಾನಗರ ಪಾಲಿಕೆಯೂ ಸಹಿತ ರಾಜ್ಯದ ಎಲ್ಲ 10 ಮಹಾನಗರ ಪಾಲಿಕೆಗಳಲ್ಲೂ ಆಸ್ತಿ ತೆರಿಗೆ ಪಾವತಿ ಮತ್ತು ಖಾತಾ ಬದಲಾವಣೆ (ಮ್ಯುಟೇಶನ್‌) ಗೆ ಸಂಬಂಧಿಸಿ ಆನ್‌ಲೈನ್‌ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ. ಆಸ್ತಿ ತೆರಿಗೆ ಪಾವತಿಗೆ ಅನಗತ್ಯ ಗೊಂದಲ, ದಿನವಿಡೀ ಸಾಲಿನಲ್ಲಿ ಕಾಯುವುದು ಇತ್ಯಾದಿ ಸಮಸ್ಯೆಗಳಿವೆ. ಹಾಗಾಗಿ ಆನ್‌ಲೈನ್‌ ವ್ಯವಸ್ಥೆಗೆ ಮುಂದಾಗಿದ್ದು ಒಪ್ಪಿಗೆ ಸಿಕ್ಕಿದೆ ಎಂದರು.

ರಜೆ ರದ್ದತಿ- ತಪ್ಪು ಕಲ್ಪನೆ
ಗುಡ್‌ ಫ್ರೈಡೇ, ಈದ್‌ ಮಿಲಾದ್‌ ಹಾಗೂ ಮಹಾಲಯ ಅಮಾವಾಸ್ಯೆಯ ರಜೆಗಳನ್ನು ಸರಕಾರ ರದ್ದು ಮಾಡುತ್ತದೆ ಎನ್ನುವ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯವಿದೆ. ಈಗಿರುವ ರಜೆಗಳ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಇದು ವರದಿ ನೀಡಿದೆ ಅಷ್ಟೇ. ಅದರ ಅನುಷ್ಠಾನ ಆಗಿಲ್ಲ. ಈ ಬಗ್ಗೆ ಜನಾಭಿಪ್ರಾಯ ಪಡೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಇಂಗ್ಲಿಷ್‌ ಕಲಿಕೆಗೆ ಪ್ರವೇಶ ಮಿತಿ: ಇಂದು ಸಭೆ
ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಪ್ರವೇಶ ಪಡೆಯಲು ನಿಗದಿತ 30ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದಾರೆ. ಹಾಗಾಗಿ ತರಗತಿ ಒಂದಕ್ಕೆ 30 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎನ್ನುವ ಸರಕಾರದ ನಿಯಮದ ಕುರಿತು ಚರ್ಚಿಸಲು ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಇಲಾಖಾಧಿಕಾರಿಗಳ ಹಾಗೂ ಸಚಿವರ ಸಭೆಯನ್ನು ಕರೆದಿದ್ದಾರೆ ಎಂದರು.

ನೀರಿನ ಸಮಸ್ಯೆಯಾದರೆ ಟ್ಯಾಂಕರ್‌ ವ್ಯವಸ್ಥೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ನೀರಿನ ರೇಷನಿಂಗ್‌ ನಿಯಮ ಜಾರಿಗೆ ತಂದಿರುವ ಕಾರಣ ಇದುವರೆಗೆ ನೀರು ಸರಬರಾಜು ಸಾಧ್ಯವಾಗಿದೆ. ಜೂ. 10ರ ತನಕ ಪೂರೈಸಲು ನೀರು ಇದೆ. ಆ ಬಳಿಕ ಸಮಸ್ಯೆಯಾದರೆ ಟ್ಯಾಂಕರ್‌ ಮೂಲಕ ನೀರು ಒದಗಿಸಲು ಈಗಾಗಲೇ ವಾರ್ಡ್‌ಗೆ ಒಂದರಂತೆ ಟ್ಯಾಂಕರ್‌ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದರು. ಜೂ. 7, 8ರೊಳಗೆ ಮಾನ್ಸೂನ್‌ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆ ಬಳಿಕವೂ ಮಳೆಯಾಗದಿದ್ದರೆ ಪಾಲಿಕೆ ವ್ಯಾಪ್ತಿಯಲ್ಲಿರುವ ಬಾವಿ, ಕೊಳವೆ ಬಾವಿ ಸೇರಿದಂತೆ ಖಾಸಗಿ ನೀರಿನ ಮೂಲಗಳಿಂದ ನೀರನ್ನು ತೆಗೆದು ವಾರ್ಡ್‌ಗೆ ಒಂದರಂತೆ ಟ್ಯಾಂಕರ್‌ನೀರು ವಿತರಿಸಲಾಗುವುದು ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.