ಕಕ್ಕಿಂಜೆ ಗ್ರಾಮದ ಬಳಿ ಸಾಟಲೈಟ್ ಕರೆ, ಸ್ಪೋಟದ ಸದ್ದು ಪ್ರಕರಣ: ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ
Team Udayavani, Nov 27, 2022, 3:12 PM IST
ಮಂಗಳೂರು: ಧರ್ಮಸ್ಥಳದ ಕಕ್ಕಿಂಜೆ ಗ್ರಾಮದ ಬಳಿ ಉಪಗ್ರಹ ಕರೆಗಳು ಮತ್ತು ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ ಎಂಬ ವದಂತಿಗಳಿಗೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಭಾನುವಾರ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಾನೆ, ಧರ್ಮಸ್ಥಳ ಪೊಲೀಸರು ವದಂತಿಗಳನ್ನು ಪರಿಶೀಲಿಸಿದ್ದು, ಉಪಗ್ರಹ ಕರೆಗಳ ಕುರಿತು ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ.
ಇದಲ್ಲದೆ, ಸ್ಫೋಟದ ಶಬ್ದಗಳು ಸಾಮಾನ್ಯವಾಗಿ ಸ್ಥಳೀಯ ನಿವಾಸಿಗಳು ಆನೆಗಳನ್ನು ಹೆದರಿಸಲು ಬಳಸುವ ಪಟಾಕಿಗಳಿಗೆ ಸಂಬಂಧಿಸಿವೆ ಎಂದು ಸೋನಾವಾನೆ ಹೇಳಿದ್ದಾರೆ.
ಮಂಗಳೂರು ಸ್ಫೋಟದ ಹಿಂದಿನ ದಿನ ಬೆಳ್ತಂಗಡಿಯ ಬೇಂದ್ರಾಳದ ಬಾರೆಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಕರೆ ಮಾಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಬೇಂದ್ರಾಳ ಪ್ರದೇಶದಲ್ಲಿ ಶನಿವಾರ ಶೋಧ ನಡೆಸಿದ್ದರು. ಆದರೆ, ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೊನೆಗೂ ಮೈಸೂರು ಬಸ್ ನಿಲ್ದಾಣದ ಮೇಲಿದ್ದ ಎರಡು ಗುಂಬಜ್ ಗಳ ತೆರವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
ಹಳ್ಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ತನಿಖೆ
ಮಳೆ ಬಂದಾಗ ಅಣಬೆ ಹುಟ್ಟುತ್ತದೆ…. ಶಾಸಕ ಮಠಂದೂರು ಹೇಳಿಕೆಗೆ ಪುತ್ತಿಲ ಬೆಂಬಲಿಗರ ಆಕ್ರೋಶ
ಬರಲಿದೆ ಕ್ಯೂಆರ್ ಕೋಡ್ ಆಧರಿತ ಕಾಯಿನ್ ವೆಂಡಿಂಗ್ ಮಷಿನ್
ದಾವಣಗೆರೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಿಸಿದ ಸ್ಥಳೀಯರು