ತುಕ್ಕು ಹಿಡಿಯುತ್ತಿವೆ ನಿರುಪಯುಕ್ತ ಸರಕಾರಿ ಆ್ಯಂಬುಲೆನ್ಸ್‌ಗಳು !

ಹರಾಜಿನಲ್ಲಿ ಭಾಗವಹಿಸಲು ಹಿಂದೆ ಸರಿದ ಬಿಡ್‌ದಾರರು

Team Udayavani, Dec 20, 2020, 1:04 PM IST

ತುಕ್ಕು ಹಿಡಿಯುತ್ತಿವೆ ನಿರುಪಯುಕ್ತ ಸರಕಾರಿ ಆ್ಯಂಬುಲೆನ್ಸ್‌ಗಳು !

ಮಹಾನಗರ, ಡಿ. 19: ಆರೋಗ್ಯ ಇಲಾಖೆಗೆ ಸಂಬಂಧಿಸಿದ ನಿರುಪಯುಕ್ತ ಆ್ಯಂಬುಲೆನ್ಸ್‌ (108) ವಾಹನಗಳ ಹರಾ ಜಿನಲ್ಲಿ ಭಾಗವಹಿಸಲು ಬಿಡ್‌ದಾರರು ಮುಂದೆ ಬರುತ್ತಿಲ್ಲ. ಹೀಗಾಗಿ, ಮಂಗಳೂರು ಸಹಿತ ರಾಜ್ಯದೆಲ್ಲೆಡೆ ನೂರಾರು ನಿರುಪಯುಕ್ತ ಆ್ಯಂಬುಲೆನ್ಸ್‌ ವಾಹನಗಳು ಹಲವು ಸಮಯದಿಂದ ಆರೋಗ್ಯ ಇಲಾಖೆ ಕಚೇರಿ ಮತ್ತು ಸರಕಾರಿ ಆಸ್ಪತ್ರೆಗಳ ಆವರಣದಲ್ಲಿ ತುಕ್ಕು ಹಿಡಿದು ನಿಂತಿವೆ.

ದ.ಕ. ಜಿಲ್ಲೆಯಲ್ಲಿ ಈ ರೀತಿ ನಿಂತಲ್ಲೇ  ನಿಂತಿರುವ ಏಳು ಆ್ಯಂಬುಲೆನ್ಸ್‌ ವಾಹನ ಗಳಿವೆ. ಮಂಗಳೂರಿನ ಸರಕಾರಿ ವೆನಾÉಕ್‌ ಆಸ್ಪತ್ರೆಯ ಹಿಂಭಾಗದಲ್ಲಿ ನಾಲ್ಕು, ಮೂಡು ಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಎರಡು ಹಾಗೂ ಪುತ್ತೂರು ತಾ| ಸರಕಾರಿ ಆಸ್ಪತ್ರೆ ಆವರಣದಲ್ಲಿ ಒಂದು ನಿರುಪಯುಕ್ತ ಆ್ಯಂಬುಲೆನ್ಸ್‌ ವಾಹನ ಇವೆ.

ಈ ವಾಹನಗಳನ್ನು ಮಾರಾಟ ಮಾಡಿ ವಿಲೇವಾರಿ ಮಾಡಲು ಆರೋಗ್ಯ ಇಲಾಖೆ ಈಗಾಗಲೇ ಎರಡು ಬಾರಿ ಹರಾಜು ಹಾಕಿದೆ; ಆದರೆ ಬಿಡ್‌ದಾರರು ಯಾರೂ ಆಸಕ್ತಿ ವಹಿಸಿ ಮುಂದೆ ಬಾರದ ಕಾರಣ ಈ ವಾಹನಗಳು ವಿಲೇವಾರಿಯಾಗಿಲ್ಲ. ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಆವರಣದಲ್ಲಿ ಸ್ಥಳಾವಕಾಶದ ಕೊರತೆ ಇರುವ ಕಾರಣ ನಗ ರದ 4 ನಿರುಪಯುಕ್ತ ಆ್ಯಂಬುಲೆನ್ಸ್‌ ಗಳನ್ನು ವೆನಾÉಕ್‌ ಆಸ್ಪತ್ರೆಯ ಹಿಂಭಾಗದಲ್ಲಿ ಇರಿಸಲಾಗಿದೆ. ಆ್ಯಂಬುಲೆನ್ಸ್‌ ವಾಹನಗಳನ್ನು ಸಾಮಾನ್ಯವಾಗಿ 4 ಲಕ್ಷ ಕಿ.ಮೀ. ಓಡಿದ ಬಳಿಕ ನಿರುಪಯುಕ್ತ ಎಂದು ಪರಿಗಣಿಸಿ, ಜಿಲ್ಲಾಮಟ್ಟದಲ್ಲಿ ಟೆಂಡರ್‌ ಕರೆಯಲಾ ಗು ತ್ತಿತ್ತು. ಆದರೆ ಒಂದೂವರೆ ವರ್ಷದ ಹಿಂದೆ ಟೆಂಡರ್‌ ಪ್ರಕ್ರಿಯೆಯ ನಿಯಮಗಳನ್ನು ಬದಲಾಯಿಸಿ ರಾಜ್ಯ ಮಟ್ಟದಲ್ಲಿ ಟೆಂಡರ್‌ ಕರೆಯುವ ಕ್ರಮ ಜಾರಿಗೆ ಬಂದಿದೆ. ರಾಜ್ಯಮಟ್ಟದಲ್ಲಿ ವರ್ಷದಲ್ಲಿ ಒಂದೆರಡು ಬಾರಿ ಅಥವಾ ನಿರುಪಯುಕ್ತ ವಾಹನಗಳ ಸಂಖ್ಯೆಯನ್ನು ಪರಿಗಣಿಸಿ ಟೆಂಡರ್‌ ಕರೆಯಲಾಗುತ್ತದೆ.

ಸಾರಿಗೆ ಇಲಾಖೆಯ ಅಧಿಕಾರಿಗಳು ವಾಹನಗಳ ಕ್ಷಮತೆಯನ್ನು ಪರಿಗಣಿಸಿ ಮೌಲ್ಯ ನಿರ್ಣಯ ಮಾಡುತ್ತಾರೆ. ಸುಮಾರು 1 ವರ್ಷದ ಹಿಂದೆ ಮೊದಲು ಆಹ್ವಾನಿಸಿದ ಟೆಂಡರ್‌ಗೆ ಯಾರೂ ಬಿಡ್‌ ಹಾಕಿರಲಿಲ್ಲ. ಬಳಿಕ ಮರು ಮೌಲ್ಯ ನಿರ್ಣಯ ಮಾಡಿ ಟೆಂಡರ್‌ ಕರೆದಾಗಲೂ ಯಾರೊಬ್ಬರೂ ಬಿಡ್‌ ಹಾಕಲು ಮುಂದೆ ಬಂದಿಲ್ಲ. ಇದೀಗ 3 ನೇ ಬಾರಿ ಸಾರಿಗೆ ಇಲಾಖೆಯ ಅಧಿಕಾರಿಗಳಿಂದ ಮರು ಮೌಲ್ಯ ನಿರ್ಣಯ ಮಾಡಿ ಆರೋಗ್ಯ ಇಲಾಖೆಯ ಬೆಂಗಳೂರು ಕಚೇರಿಗೆ ಕಳುಹಿಸಿ ಕೊಡಲಾಗಿದೆ. ಯಾವಾಗ ಟೆಂಡರ್‌ ಕರೆಯುತ್ತಾರೆ ಎಂಬುದು ತಿಳಿ ಯದು ಎಂದು ಮಂಗಳೂರಿ ನ ಆರೋಗ್ಯ ಇಲಾಖೆ ಕಚೇರಿ ಮೂಲಗಳು ತಿಳಿಸಿವೆ.

ನಿರುಪಯುಕ್ತ ಆ್ಯಂಬಲೆನ್ಸ್‌ ವಾಹನಗಳ ಹರಾಜನ್ನು ರಾಜ್ಯಮಟ್ಟದಲ್ಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಈ ವಾಹನಕ್ಕೆ ದರ ನಿಗದಿ ಮಾಡುತ್ತದೆ. ಈಗಿರುವ 7 ನಿರುಪಯುಕ್ತ ಆ್ಯಂಬುಲೆನ್ಸ್‌ಗಳಿಗೆ 2 ಬಾರಿ ಟೆಂಡರ್‌ ಕರೆದಿದ್ದರೂ, ಯಾರೊಬ್ಬರೂ ಬಿಡ್‌ ಮಾಡಲು ಮುಂದೆ ಬಂದಿಲ್ಲ, ಇದೀಗ 3 ನೇ ಬಾರಿ ವಾಹನಗಳ ಮೌಲ್ಯವನ್ನು ಪರಿಷ್ಕರಿಸಿ (ಕಡಿಮೆ ಮಾಡಿ) ಬೆಂಗಳೂರಿನ ಆರೋಗ್ಯ ಇಲಾಖೆಗೆ ಕಳುಹಿಸಲಾಗಿದೆ.   -ಡಾ| ರಾಮಚಂದ್ರ ಬಾಯರಿ,ಜಿಲ್ಲಾ ಆರೋಗ್ಯ ಅಧಿಕಾರಿ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.