ಹವಾಮಾನ ಮಾಹಿತಿಗೆ ಎಸ್‌ ಬ್ಯಾಂಡ್‌ ರಾಡಾರ್‌

ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಧುನಿಕ ವ್ಯವಸ್ಥೆ

Team Udayavani, Nov 28, 2019, 4:01 AM IST

aa-12

ಮಹಾನಗರ: ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇ ಮತ್ತು ಪರಿಸರದ ಹವಾಮಾನ ಮಾಹಿತಿಯನ್ನು ಕ್ಷಣಕ್ಷಣಕ್ಕೆ ನೀಡುವ ಅತ್ಯಾಧುನಿಕ ಎಸ್‌ ಬ್ಯಾಂಡ್‌ ಮಾದರಿಯ ರಾಡಾರ್‌ ನಿರ್ಮಾಣಕ್ಕೆ ಭಾರತೀಯ ಹವಾಮಾನ ಇಲಾಖೆ ನಿರ್ಧರಿಸಿದೆ.

ಈ ಪ್ರಸ್ತಾವನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದ್ದು, ಶೀಘ್ರ ಅನುಷ್ಠಾನವಾಗುವ ನಿರೀಕ್ಷೆಯಿದೆ. ಸದ್ಯ ಹವಾಮಾನ ಮಾಹಿ ತಿಗಾಗಿ ಕಾರ್ಯಾಚರಿಸುತ್ತಿರುವ “ಇನ್‌ಸ್ಟ್ರೆಮೆಂಟ್‌ ಲ್ಯಾಂಡಿಂಗ್‌ ಸಿಸ್ಟಂ’ (ಐಎಲ್‌ಎಸ್‌) ಕಟ್ಟಡದಲ್ಲಿಯೇ ನೂತನ ರಾಡಾರ್‌ ಸ್ಥಾಪನೆಗೆ ಯೋಜಿಸಲಾಗಿದೆ. ಹೆಚ್ಚುವರಿಯಾಗಿ ಕೆಲವು ಪಿಲ್ಲರ್‌ಗಳಷ್ಟೇ ಬೇಕಿರುವುದರಿಂದ ಸ್ಥಾಪನೆ ವೆಚ್ಚವೂ ಕಡಿಮೆಯಾಗಲಿದೆ.

ಸದ್ಯ ವಿಮಾನ ನಿಲ್ದಾಣದಲ್ಲಿ ವಿಮಾನ ಗಳ ಆಗಮನ-ನಿರ್ಗಮನ ವೇಳೆ ರನ್‌ ವೇಸಹಿತ ಪರಿಸರದ ಹವಾಮಾನದ ಬಗ್ಗೆ ನಿಗದಿತ ಸಮಯಕ್ಕೆ ಅನುಗುಣವಾಗಿ ಮಾಹಿತಿ ಪಡೆಯಲಾಗುತ್ತದೆ. ಇದಕ್ಕಾಗಿಯೇ ಸುಸ ಜ್ಜಿತ ಕಚೇರಿ, 12 ತಜ್ಞರು ಇದ್ದಾರೆ. ಈ ವ್ಯವಸ್ಥೆ ಯನ್ನು ಇನ್ನಷ್ಟು ಉನ್ನತೀಕರಿಸುವುದೇ ಎಸ್‌ ಬ್ಯಾಂಡ್‌ ರಾಡಾರ್‌ ಸ್ಥಾಪನೆಯ ಉದ್ದೇಶ. ಹೊಸದಿಲ್ಲಿ, ಮುಂಬಯಿ, ಚೆನ್ನೈ ಅಂ. ವಿಮಾನ ನಿಲ್ದಾಣಗಳಲ್ಲಿ ಇದು ಈಗಾಗಲೇ ಜಾರಿಯಲ್ಲಿದೆ.

ಒಪ್ಪಿಗೆಯಿಲ್ಲ
ಮಂಗಳೂರು ನಿಲ್ದಾಣದಲ್ಲಿ 20 ಕೋ.ರೂ ವೆಚ್ಚದಲ್ಲಿ “ಟಾಪ್‌ ಫ್ಲೋರ್‌ ವೆದರ್‌ ರಾಡಾರ್‌’ ಸ್ಥಾಪಿಸಲು ಕೇಂದ್ರ ಸರಕಾರ ಮೊದಲಿಗೆ ನಿರ್ಧರಿಸಿತ್ತು. ಶಕ್ತಿನಗರದಲ್ಲಿ ಜಾಗ ಗುರುತಿಸಿ 5 ಮಹಡಿ ಕಟ್ಟಡ ನಿರ್ಮಾಣಕ್ಕೂ ಉದ್ದೇಶಿಸಲಾಗಿತ್ತು. ಆದರೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡದ್ದರಿಂದ ಎಸ್‌. ಬ್ಯಾಂಡ್‌ ಮಾದರಿಯ ರಾಡಾರ್‌ ಆರಂಭಿಸಲು ಚಿಂತನೆ ನಡೆಸಿದ್ದು, ಒಪ್ಪಿಗೆ ಲಭಿಸಿದೆ.

ಕಾರ್ಯನಿರ್ವಹಣೆ ಹೇಗೆ?
ಈ ರಾಡಾರ್‌ ವಾತಾವರಣಕ್ಕೆ ಸಂಕೇತಗಳನ್ನು ರವಾನಿಸುತ್ತದೆ. ಪ್ರತಿಫಲನಗೊಂಡು ಹಿಂದಿರುಗಿದ ಈ ಸಂಕೇತಗಳನ್ನು ವಿಶ್ಲೇಷಿಸಿ ಹವಾಮಾನ ಮುನ್ಸೂಚನೆ ನೀಡಲಾಗುತ್ತದೆ. ಇದರಿಂದ ಮೋಡಗಳ ಸ್ಥಿತಿಗತಿ, ಗಾತ್ರ, ಸಾಂದ್ರತೆ, ತೇವಾಂಶ ಇತ್ಯಾದಿ ನಿಖರವಾಗಿ ತಿಳಿಯುತ್ತದೆ. ಇದರ ಮೂಲಕ ಸ್ಯಾಟಲೈಟ್‌ ಚಿತ್ರಗಳು, ಭಾತರದ ಯಾವುದೇ ಮೂಲೆಯ ಹವಾಮಾನ ಕೂಡ ತಿಳಿಯಲು ಸಾಧ್ಯ. ಸುಮಾರು 300 ಕಿ.ಮೀ. ವ್ಯಾಪ್ತಿಯಲ್ಲಿ ಹವಾ ಮಾನ ಸಂಬಂಧಿ ಯಾವುದೇ ಅಪಾಯಕಾರಿ ವಿದ್ಯಮಾನಗಳಿದ್ದರೂ ಅದು ಮುನ್ಸೂಚನೆ ನೀಡಬಲ್ಲುದು. ಇದರಿಂದ ಜಿಲ್ಲಾಡಳಿತಕ್ಕೆ ಮುನ್ನೆಚ್ಚರಿಕೆ ಕೈಗೊಳ್ಳಲು ಸಾಧ್ಯ.

ಶೀಘ್ರ ಕಾರ್ಯಾರಂಭ
ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಆಗಮನ-ನಿರ್ಗಮನ ಸಂದರ್ಭ ಹವಾಮಾನದ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಅತ್ಯಂತ ಸುಧಾರಿತ ಎಸ್‌. ಬ್ಯಾಂಡ್‌ ರಾಡಾರ್‌ ಸ್ಥಾಪಿಸಲು ಕೇಂದ್ರ ಹವಾಮಾನ ಇಲಾಖೆ ನಿರ್ಧರಿಸಿದೆ. ಶೀಘ್ರದಲ್ಲಿ ಈ ಕುರಿತಂತೆ ಕಾರ್ಯ ಆರಂಭವಾಗಲಿದೆ.
 - ಯದುಕಲೇಶ್‌ ಎಸ್‌., ಹವಾಮಾನ ತಜ್ಞರು, ಮಂಗಳೂರು ಅಂ. ವಿಮಾನ ನಿಲ್ದಾಣ

- ದಿನೇಶ್‌ ಇರಾ

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.