![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Mangaluru ಕೇಸರಿ ಧ್ವಜ ನಮ್ಮ ಹಕ್ಕು: ನಳಿನ್ ಕುಮಾರ್
Team Udayavani, Jan 31, 2024, 12:31 AM IST
![Mangaluru ಕೇಸರಿ ಧ್ವಜ ನಮ್ಮ ಹಕ್ಕು: ನಳಿನ್ ಕುಮಾರ್](https://www.udayavani.com/wp-content/uploads/2024/01/nalin-4-620x406.jpg)
ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹನುಮ ಧ್ವಜ ಹಾಕಬಹುದು. ಕೇಸರಿ ಧ್ವಜ ಹಾಕುವುದು ತಪ್ಪಲ್ಲ, ಅದು ನಮ್ಮ ಹಕ್ಕು. ಕೇಸರಿ ಧ್ವಜ ಧರ್ಮದ ದೃಷ್ಟಿಯಿಂದ ಅಲ್ಲ, ಅದು ಪರಂಪರೆಯಿಂದ ಬಂದಿದ್ದು. ರಾಮನ ಹೆಸರು ಇಟ್ಟುಕೊಂಡ ಸಿದ್ದರಾಮಯ್ಯ ಹನುಮಂತನಿಗೆ ಅಪಮಾನ ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಸಮಯದಲ್ಲೂ ಸರಕಾರಿ ರಜೆ ಕೊಟ್ಟಿಲ್ಲ. ಇದೀಗ ಹನುಮ ಭಕ್ತರು ಹಾಕಿದ ಧ್ವಜವನ್ನು ಅಧಿಕಾರಿಗಳ ಮೂಲಕ ತೆಗೆಸಿ, ಹಿಂದೂ ಸಮಾಜ ಮತ್ತು ರಾಮಭಕ್ತರಿಗೆ ಅಪಮಾನ ಮಾಡಿದೆ. ಹೋರಾಟ ಮಾಡಿದ ರಾಮ ಮತ್ತು ಹನುಮ ಭಕ್ತರ ಲಾಠಿ ಚಾರ್ಜ್ ಮಾಡಿ, ದಬ್ಟಾಳಿಕೆ- ದೌರ್ಜನ್ಯದ ಮೂಲಕ ಹಿಂದೂ ಹೋರಾಟವನ್ನು ದಮನ ಮಾಡುವ ಯತ್ನ ಮಾಡಿದೆ ಎಂದರು.
ಸಿದ್ದರಾಮಯ್ಯ ಈ ಹಿಂದೆಯೂ ಮುಖ್ಯಮಂತ್ರಿಯಾಗಿದ್ದಾಗ “ರಾವಣ’ನಂತೆ ಆಡಳಿತ ಮಾಡಿದವರು. ಅವರು ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಮಾಜದ ಮೇಲೆ ದೌರ್ಜನ್ಯ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ವಾಪಸ್ ಯತ್ನ, ಗೋ ರಕ್ಷಕರನ್ನು ಜೈಲಿಗಟ್ಟುವ ಕೆಲಸ ಮಾಡಿದ್ದು, ಗೋ ಹಂತಕರಿಗೆ ಪರಿಹಾರ ಕೊಡುವ ಮೂಲಕ ಹಿಂದೂ ವಿರೋಧಿ ನೀತಿ ಅನುಸರಿಸಿದ್ದರು ಎಂದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಇಂಥ ಹೋರಾಟ ನಡೆದಿತ್ತು. ಯಾವುದೇ ಪರಿಸ್ಥಿತಿಯಿದ್ದರೂ ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುವುದು ಸರಕಾರದ ಕರ್ತವ್ಯ. ಆದರೆ ಮಂಡ್ಯದಲ್ಲಿ ಅಧಿಕಾರಿಗಳ ಮೂಲಕ ಹಿಂದೂಗಳನ್ನು ಭಯ ಪಡಿಸುವ ಕೆಲಸ ಮಾಡಿದೆ. ಈ ವಿಚಾರವಾಗಿ ಅಧಿಕಾರಿಗಳನ್ನೂ ಬಲಿಪಶುಗಳಾಗಿ ಮಾಡಲಾಗುತ್ತಿದೆ ಎಂದರು.
ನಾಳೆ ಹನುಮಧ್ವಜ ಅಭಿಯಾನ
ಮಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಮಭಕ್ತರು ಹಾಕಿದ ಹನುಮಧ್ವಜವನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಫೆ. 1ರಂದು ರಾಜ್ಯದಾದ್ಯಂತ ಧ್ವಜಕಟ್ಟೆ, ಸರ್ಕಲ್, ಕಾರ್ಯಕರ್ತರ ಮನೆಗಳಲ್ಲಿ ಹನುಮಾನ್ ಧ್ವಜ ಹಾಕುವ ಅಭಿಯಾನ ನಡೆಯಲಿದೆ ಎಂದು ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.