ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ : ಜನಪದ ವಿದ್ವಾಂಸ ಅಮೃತ ಸೋಮೇಶ್ವರ
Team Udayavani, Feb 27, 2021, 6:50 AM IST
ಉಳ್ಳಾಲ: ಹಿರಿಯ ಸಾಹಿತಿ, ಜನಪದ ವಿದ್ವಾಂಸ ಅಮೃತ ಸೋಮೇಶ್ವರ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಲಭಿಸಿದೆ.
ಸೋಮೇಶ್ವರ ನಿವಾಸಿಯಾಗಿ ರುವ 85ರ ಹರೆಯ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡ ಮತ್ತು ತುಳು – ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರ. ತುಳು
ಭಾಷೆ ಹಾಗೂ ಜಾನಪದದ ಬಗ್ಗೆ ಸಂಶೋಧನೆ ಅವರ ಮತ್ತೂಂದು ಕ್ಷೇತ್ರ. ಇಷ್ಟಲ್ಲದೆ ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಬಗ್ಗೆ ಜನಜಾಗೃತಿಯ ನೆಲೆಯಲ್ಲಿ ಅವರು ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ.
ಭಗವತೀ ಆರಾಧನೆ ಎಂಬ ಅವರ ಕೃತಿ ಒಂದು ಮಹತ್ವದ ಕೃತಿಯಾಗಿದ್ದು ಅದರಲ್ಲಿ ಕರಾವಳಿ ಕರ್ನಾಟಕ ಹಾಗೂ ಕೇರಳದಲ್ಲಿ ಆರಾಧಿಸಲ್ಪಡುವ ಭಗವತಿ, ಚಾಮುಂಡಿ, ಇತ್ಯಾದಿ ವಿವಿಧ ದೆ„ವಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ