ಸಜೀಪನಡು: ಗ್ರಾಮದಲ್ಲಿ ಇನ್ನೂ 11 ದಿನ ಕ್ವಾರಂಟೈನ್
Team Udayavani, Apr 13, 2020, 10:28 AM IST
ಬಂಟ್ವಾಳ: ಕೋವಿಡ್ ಸೋಂಕು ದೃಢಪಟ್ಟಿದ್ದ ಸಜೀಪನಡು ಗ್ರಾಮದ 10 ತಿಂಗಳ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೂ ಗ್ರಾಮದಲ್ಲಿ ಕ್ವಾರಂಟೈನ್ ಮುಂದುವರಿಯಲಿದೆ ಎಂದು ತಾಲೂಕು ಆಡಳಿತ ಸ್ಪಷ್ಟಪಡಿಸಿದೆ.
ಎಲ್ಲರ ಹಾರೈಕೆಯಂತೆ ಮಗು ಗುಣಮುಖ ಆಗಿರುವುದು ಇಡೀ ಗ್ರಾಮದ ಆತಂಕವನ್ನು ದೂರ ಮಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮವು 28 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವುದು ಅನಿವಾರ್ಯವಾಗಿದೆ. ಹೀಗಾಗಿ ಮಾ. 27ರಂದು ಗ್ರಾಮದ ಕ್ವಾರಂಟೈನ್ ಪ್ರಾರಂಭಗೊಂಡಿತ್ತು. ಪ್ರಸ್ತುತ 17 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದ್ದು, ಇನ್ನೂ 11 ದಿನಗಳು ಬಾಕಿ ಇವೆ. ಅಲ್ಲಿಯವರೆಗೆ ಗ್ರಾಮಕ್ಕೆ ಪ್ರವೇಶವಾಗಲಿ, ಗ್ರಾಮದಿಂದ ಹೊರಗೆ ಹೋಗುವುದಕ್ಕೆ ಅವಕಾಶವಿಲ್ಲ. ಗ್ರಾಮಸ್ಥರಿಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ನಡೆಯುತ್ತಿದೆ.
ತಾ| ಆಡಳಿತದಿಂದ ಪಡಿತರ
ತಾಲೂಕಿನಲ್ಲಿ 2 ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಜೀಪನಡು ಹಾಗೂ ತುಂಬೆ ಗ್ರಾಮದಲ್ಲಿ ತಾಲೂಕು ಆಡಳಿತದ ಸಿಬಂದಿ ಪಡಿತರ ಅಕ್ಕಿ ವಿತರಿಸುವ ಕಾರ್ಯ ನಡೆಸುತ್ತಿದ್ದಾರೆ. ಸರಕಾರವು ತಿಂಗಳ ಅಕ್ಕಿಯನ್ನು ನೀಡಿದ್ದು, ಅದನ್ನು ಕ್ವಾರಂಟೈನ್ನಲ್ಲಿರುವ ಮನೆಗಳಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ.
ವಿರಳ ಜನಸಂಚಾರ
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಬೆಳಗ್ಗಿನ ಹೊತ್ತು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ತಾಲೂಕಿನಲ್ಲಿ ರವಿವಾರ ಎಂದಿಗಿಂತ ಕೊಂಚ ಮಟ್ಟಿನ ಜನಸಂಚಾರ ಕಡಿಮೆ ಇತ್ತು. ಬ್ಯಾಂಕ್ ಶಾಖೆಗಳು, ಸಹಕಾರಿ ಸಂಸ್ಥೆಗಳಿಗೆ ರವಿವಾರ ರಜೆ ಇದ್ದ ಹಿನ್ನೆಲೆಯಲ್ಲಿ ಜನಸಂಚಾರ ಕಡಿಮೆಯಾಗಿತ್ತು. ಮಧ್ಯಾಹ್ನದ ಬಳಿಕ ಸಂಪೂರ್ಣ ಬಂದ್ ಆಗಿದ್ದು, ಅನಗತ್ಯ ತಿರುಗಾಟ ನಡೆಸುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು