ಗಾಂಜಾ ಮಾರಾಟ: ಇಬ್ಬರ ಬಂಧನ, ಮೂವರು ಪರಾರಿ
Team Udayavani, Jun 3, 2017, 11:59 AM IST
ಬಜಪೆ: ಗಂಜಿಮಠ¨ ನಾರ್ಲಪದವಿನಲ್ಲಿ ಗಾಂಜಾ ಮಾರಾಟ ದಲ್ಲಿ ತೊಡಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಹಿತ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿ 100 ಗ್ರಾಂ ಗಾಂಜಾ ಸಹಿತ ಒಟ್ಟು 61,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮೂವರು ಪರಾರಿಯಾಗಿದ್ದಾರೆ.
ಕಾಸರಗೋಡು ತಳಂಗೆರೆಯ ವಿದ್ಯಾರ್ಥಿ ಮಹಮ್ಮದ್ ಅಶ್ವದ್ (21) ಮತ್ತು ಬಜಪೆ ಸಮೀಪದ ಭಟ್ರಕೆರೆಯ ಅಜ್ಮಲ್ (18) ಬಂಧಿತರು. ಅವರಿಂದ 1ಬೈಕ್, 1 ಸ್ಕೂಟರ್, 100 ಗ್ರಾಂ ಗಾಂಜಾ ಸಹಿತ ಒಟ್ಟು 61,500ರೂ. ಮೌಲ್ಯದ 7 ಪ್ಯಾಕೇಟ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ಸಂದರ್ಭ ಗಾಂಜಾ ಮಾರಾಟಕ್ಕೆ ಬಂದಿದ್ದ ಅಲ್ತಾಫ್, ಬಿಲಾಲ್ ಮತ್ತು ತಾಜ್ ಅವರು ಪರಾರಿಯಾದರು.
ಬಂಧಿತ ಮಹಮದ್ ಅಶ್ವದ್ ಪರಾರಿಯಾದ ವ್ಯಕ್ತಿಗಳಿಂದ ಗಾಂಜಾ ಪಡೆದುಕೊಂಡು ಅದನ್ನು ಕಾಲೇಜು ಕ್ಯಾಂಪಸ್ನಲ್ಲಿ ಮಾರಾಟ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು