ಬೋಟ್‌ಗಳಲ್ಲಿ ಅಳವಡಿಕೆಯಾಗದ ಉಪ್ಪುನೀರು ಸಂಸ್ಕರಣ ಯಂತ್ರ: ಪ್ರಾತ್ಯಕ್ಷಿಕೆಗೆ ಸೀಮಿತವಾದ ಯೋಜನೆ


Team Udayavani, Mar 7, 2023, 7:48 AM IST

ಬೋಟ್‌ಗಳಲ್ಲಿ ಅಳವಡಿಕೆಯಾಗದ ಉಪ್ಪುನೀರು ಸಂಸ್ಕರಣ ಯಂತ್ರ: ಪ್ರಾತ್ಯಕ್ಷಿಕೆಗೆ ಸೀಮಿತವಾದ ಯೋಜನೆ

ಮಂಗಳೂರು: ವಾರ, ಹದಿನೈದು ದಿನ -ಹೀಗೆ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು ಬೋಟ್‌ಗಳಲ್ಲಿ ತಮ್ಮ ಜತೆ ಲೀಟರ್‌ಗಟ್ಟಲೆ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವ ಬದಲು ಸಮುದ್ರದ ನೀರನ್ನೇ ಸಂಸ್ಕರಿಸಿ ಉಪಯೋಗಿಸುವ ವ್ಯವಸ್ಥೆ ಯೊಂದನ್ನು ಮೀನುಗಾರರಿಗೆ ಪರಿಚಯಿಸುವ ಕೆಲಸ ಇಲಾಖೆ ಮಾಡಿತ್ತು. ಆದರೆ ಇದನ್ನು ಅನುಷ್ಠಾನಕ್ಕೆ ತರುವಲ್ಲಿ ಮಾತ್ರ ವಿಳಂಬವಾಗಿದೆ.

2021ರ ಸಪ್ಟೆಂಬರ್‌ ತಿಂಗಳಲ್ಲಿ ಸ್ವತಃ ಮೀನುಗಾರಿಕಾ ಸಚಿವರ ನೇತೃತ್ವದಲ್ಲೇ ಇದರ ಪ್ರಾತ್ಯಕ್ಷಿಕೆ ನಡೆಸಿ, ಮೀನುಗಾರಿಕಾ ಬೋಟ್‌ ಮಾಲಕರಿಗೆ ವಿವರಿಸಲಾಗಿತ್ತು. ಯಂತ್ರಕ್ಕೆ ಕೇಂದ್ರ ಸರಕಾರದಿಂದ ಶೇ. 50ರಷ್ಟು ಸಬ್ಸಿಡಿ ಮತ್ತು ರಾಜ್ಯದಿಂದಲೂ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದ್ದರು. ಆದರೆ ಯೋಜನೆ ಪ್ರಾಯೋಗಿಕ ಪರೀಕ್ಷೆಗೆ ಮಾತ್ರ ಸೀಮಿತವಾಗಿದ್ದು, ಅನಂತರ ಯಾವುದೇ ಬೆಳವಣಿಗೆಗಳು ನಡೆದಿಲ್ಲ.

ಮೀನುಗಾರರಿಗೆ ಅಗತ್ಯ
ಪ್ರಸ್ತುತ ಮೀನುಗಾರರು ತಮಗೆ ಅಗತ್ಯ ಇರುವಷ್ಟು ಶುದ್ಧ ಸಿಹಿನೀರನ್ನು ಬಂದರಿನಿಂದ ತೆರಳುವಾಗಲೇ ಟ್ಯಾಂಕ್‌ಗಳಲ್ಲಿ ಕೊಂಡೊಯ್ಯುತ್ತಿದ್ದಾರೆ. ಸಾವಿರಾರು ಲೀಟರ್‌ ನೀರಿನ ಟ್ಯಾಂಕ್‌ ಇರಿಸಿಕೊಳ್ಳು ವುದರಿಂದ ಬೋಟ್‌ನಲ್ಲಿ ಭಾರ ಹೆಚ್ಚುತ್ತದೆ. ಕೆಲವೊಮ್ಮೆ ಕೊಂಡೊಯ್ದ ನೀರು ಖಾಲಿಯಾಗುವ ಸಾಧ್ಯತೆಯೂ ಇದೆ. ಆದರೆ ಶುದ್ಧೀಕರಣ ಘಟಕ ಇರಿಸಿಕೊಳ್ಳುವುದು ಇವೆಲ್ಲದಕ್ಕೆ ಮುಕ್ತಿ ನೀಡುತ್ತದೆ. ಆದರೆ ಸಚಿವರು ಪ್ರಾತ್ಯಕ್ಷಿಕೆಗೆ ತೋರಿಸಿದ ಉತ್ಸುಕತೆಯನ್ನು ಬಳಿಕ ಅನುಷ್ಠಾನದಲ್ಲಿ ತೋರಿಸಿಲ್ಲ ಎಂದು ಮೀನುಗಾರರು ಆರೋಪಿಸಿದ್ದಾರೆ.

ವಿದೇಶಗಳಲ್ಲಿ ಈಗಾಗಲೇ ಬಳಕೆ
ಅಮೆರಿಕ, ಯೂರೋಪ್‌ನಲ್ಲಿ ಈ ತಂತ್ರಜ್ಞಾನ ಈಗಾಗಲೇ ಬಳಕೆಯಲ್ಲಿದೆ. ದೇಶದ ಮಟ್ಟಿಗೆ ನಮ್ಮಲ್ಲೇ ಮೊದಲ ಪ್ರಯೋಗವಾಗಿತ್ತು. ಬೋಟ್‌ ಸಂಚರಿಸುತ್ತಿರುವಾಗಲೇ ಉಪ್ಪು ನೀರನ್ನು ಪೈಪ್‌ ಮೂಲಕ ಸಂಗ್ರಹಿಸಿ, ಶುದ್ಧೀಕರಣ ಯಂತ್ರಕ್ಕೆ ಊಡಿಸಿದರೆ ಸಿಹಿ ನೀರು ಇನ್ನೊಂದು ಪೈಪ್‌ ಮೂಲಕ ಹೊರಗೆ ಬರುತ್ತದೆ. ದಿನಕ್ಕೆ 2 ಸಾವಿರ ಲೀ. ನೀರು ಶುದ್ಧೀಕರಿಸುವ ಸಾಮರ್ಥ್ಯ ಹೊಂದಿರುವ ಯಂತ್ರದ ಬೆಲೆ 4.60 ಲಕ್ಷ ರೂ. ಆಸ್ಟ್ರೇಲಿಯಾ ಮೂಲದ ರೆಯಾನ್ಸ್‌ ಎನ್ನುವ ಸಂಸ್ಥೆ ಈ ಕಿಟ್‌ ತಯಾರಿಸಿದೆ.

ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಉಪ್ಪು ನೀರು ಸಂಸ್ಕರಿಸಿ, ಸಿಹಿ ನೀರು ಪಡೆಯುವ ಯಂತ್ರ ಅಳವಡಿಸುವ ಉದ್ದೇಶ ಹೊಂದಲಾಗಿದೆ. ಈ ಸಂಬಂಧ ಪ್ರಕ್ರಿಯೆ ಜಾರಿಯಲ್ಲಿದೆ. ಮತ್ಸ್ಯ ಸಂಪದ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮೀನುಗಾರಿಗೆ ಒದಗಿಸುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗಿದೆ.
– ಎಸ್‌. ಅಂಗಾರ, ಮೀನುಗಾರಿಕೆ ಸಚಿವರು

ನೀರು ಸಂಸ್ಕರಿಸುವ ಕಿಟ್‌ ಅಳವಡಿಸಲು ಸರಕಾರದಿಂದ ಸಬ್ಸಿಡಿ ಇದೆ ಎಂದು ಹೇಳಿದ್ದರು. ಮಂಗಳೂರು, ಮಲ್ಪೆಯಲ್ಲಿ ಸಮುದ್ರಕ್ಕೆ ಬೋಟ್‌ನಲ್ಲಿ ತೆರಳಿ ಪ್ರಾತ್ಯಕ್ಷಿಕೆ ನಡೆಸಿದ್ದರು. ಅನಂತರ ಇಲಾಖೆಯಿಂದ ಮೀನುಗಾರರಿಗೆ ಯಾವುದೇ ಮಾಹಿತಿ ಬಂದಿಲ್ಲ.
– ಮೋಹನ್‌ ಬೆಂಗ್ರೆ, ಮೀನುಗಾರಿಕಾ ಮುಖಂಡರು

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.