ನಿರಾಶ್ರಿತರಲ್ಲಿ ಭರವಸೆ ತುಂಬಿದ ದೀಪಾವಳಿ


Team Udayavani, Nov 10, 2018, 9:52 AM IST

10-november-1.gif

ಅರಂತೋಡು: ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕರು ನಿರಾಶ್ರಿತರಾದ ಹಲವರು ದ.ಕ. ಸಂಪಾಜೆ ಪರಿಹಾರ ಕೇಂದ್ರದಲ್ಲಿ ಇನ್ನೂ ಆಶ್ರಯ ಪಡೆದಿದ್ದು, ತಮ್ಮ ನೋವನ್ನು ನುಂಗಿ, ದೀಪಾವಳಿಯನ್ನು ಆಚರಿಸಿ ಸಂಭ್ರಮಿಸಿದರು.

ನೆರೆಯಿಂದಾಗಿ ಸರ್ವಸ್ವವನ್ನೂ ಕಳೆದುಕೊಂಡು ಸಂಕಷ್ಟಗಳಲ್ಲಿ ಜೀವನ ಕಳೆಯುವಂತಾಗಿದೆ. ನಿರಾಶ್ರಿತರ ಪುನರ್ವಸತಿ ಕುರಿತು ಸರಕಾರ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ, ನಿರೀಕ್ಷೆಯಲ್ಲೇ ಕಾಲ ನೂಕುತ್ತಿದ್ದಾರೆ. ಕಳೆದ ವರ್ಷದ ವರೆಗೂ ಮನೆಗಳಿಗೆ ಬಂಧು-ಮಿತ್ರರನ್ನು ಆಹ್ವಾನಿಸಿ ಇವರೆಲ್ಲ ದೀಪಾವಳಿ ಆಚರಿಸುತ್ತಿದ್ದರು. ಈ ದೀಪಾವಳಿಯಲ್ಲಿ ತಮಗೆ ಬೆಳಕಿಲ್ಲ, ಬರೀ ಕತ್ತಲು ಎಂದು ಕೊರಗುತ್ತಿದ್ದರು.

ಮರಳಿತು ಸಂಭ್ರಮ
ಜೀವನೋಪಾಯಕ್ಕಾಗಿ ಬೇರೆ ಊರುಗಳಿಗೆ ಕೆಲಸ ಅರಸಿ ತೆರಳಿದ್ದ ಹಲವು ನಿರಾಶ್ರಿತರು ಪರಿಹಾರ ಕೇಂದ್ರಕ್ಕೆ ಮರಳಿದರು. ಶಾಲೆ – ಕಾಲೇಜಿಗೆ ರಜೆಯಿದ್ದ ಕಾರಣ ವಿದ್ಯಾರ್ಥಿಗಳೂ ಹೆತ್ತವರನ್ನು ಸೇರಿಕೊಂಡರು. ನಿರಾಶ್ರಿತರ ಕೇಂದ್ರದ ಉಸ್ತುವಾರಿ ವಹಿಸಿರುವ ಅವಿನಾಶ್‌ ಕಡೆಪಾಲ ದೀಪಾವಳಿಯನ್ನು ಆಚರಿಸುವ ಸುದ್ದಿಯನ್ನು ನೀಡಿದರು. ನಿರಾಶ್ರಿತರ ಮುಖದಲ್ಲಿ ಮಂದಹಾಸ ಚಿಮ್ಮಿತು. ಮಕ್ಕಳು ಕೇಕೆ ಹಾಕಿ ಕುಣಿದರು. ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು ಸಂಭ್ರಮಮಿಸಿದರು. ಪಟಾಕಿ ಸಿಡಿಸಿ, ನಕ್ಷತ್ರ ಕಡ್ಡಿಗಳನ್ನು ಉರಿಸಿದರು. ಸಿಹಿ ತಿಂಡಿ – ತಿನಿಸು ತಿಂದರು.

ಕುಟುಂಬದಂತೆ ಆಚರಣೆ
ಸಂಘ – ಸಂಸ್ಥೆಗಳು, ಜನಪ್ರತಿನಿಧಿಗಳು ಭಾಗಿಯಾಗಿ, ನಿರಾಶ್ರಿತರಿಗೆ ಸಹಕಾರ ನೀಡಿದರು. ಜೋಡುಪಾಲದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಜಮೀನು, ಮನೆಗಳನ್ನು ಕಳೆದುಕೊಂಡು ಸಂತ್ರಸ್ತ ರಾದವರು ನಾವು. ಮನಸ್ಸಿನಲ್ಲಿ ತುಂಬ ನೋವಿದೆ. ಸರಕಾರ ಈ ತನಕ ನಮ್ಮ ಭವಿಷ್ಯದ ದೃಷ್ಟಿಯಿಂದ ಯಾವುದೇ ಶಾಶ್ವತ ಯೋಜನೆಯ ಕುರಿತು ಅಧಿಕೃತ ಘೋಷಣೆ ಮಾಡಿಲ್ಲ. ಆದರೂ ಪರಿಹಾಕ ಕೇಂದ್ರದಲ್ಲಿ ಇರುವ ಎಲ್ಲರೂ ಸೇರಿಕೊಂಡು ಒಂದು ಕುಟುಂಬದಂತೆ ದೀಪಾವಳಿ ಆಚರಿಸಿ, ಸಂತೋಷ ಪಟ್ಟಿದ್ದೇವೆ ಎಂದು ನಿರಾಶ್ರಿತೆ ಸುಜಾತಾ ಎ.ಬಿ. ಪ್ರತಿಕ್ರಿಯಿಸಿದ್ದಾರೆ.

ಹೊಸ ಅನುಭವ
ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಅನೇಕ ಜಾತಿಯ ಜನರಿದ್ದಾರೆ. ನಾವೆಲ್ಲ ಒಟ್ಟಾಗಿ ಒಂದು ಕುಟುಂಬದಂತೆ ದೀಪಾವಳಿ ಆಚರಣೆ ಮಾಡಿದ್ದೇವೆ. ಇದು ನನ್ನ ಜೀವನದ ಹೊಸ ಅನುಭವ. ತುಂಬಾ ಸಂತೋಷ ಪಟ್ಟೆ.
– ಶೇಷಪ್ಪ
ಎರಡನೇ ಮೊಣ್ಣಂಗೇರಿ ನಿರಾಶ್ರಿತ 

ನೋವು ಮರೆಸಿದ ಹಬ್ಬ
ದ.ಕ ಸಂಪಾಜೆ ಪರಿಹಾರ ಕೇಂದ್ರದಲ್ಲಿ ವಿಶೇಷ ರೀತಿಯಲ್ಲಿ ಸುಡುಮದ್ದು, ಪಟಾಕಿ ಸಿಡಿಸಿ, ಕೇಂದ್ರದ ಆವರಣದಲ್ಲಿ ದೀಪ ಹಚ್ಚಿ ದೀಪಾವಳಿಯನ್ನು ಆಚರಿಸಿದ್ದೇವೆ. ಸಂಘ – ಸಂಸ್ಥೆಗಳು ನಿರಾಶ್ರಿತರಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ಮಾಡಿವೆ. ನೋವನ್ನು ಮರೆತು ಸಂತೋಷಪಟ್ಟಿದ್ದಾರೆ.
– ಅವಿನಾಶ್‌ ಕಡೆಪಾಲ
ದ.ಕ. ಸಂಪಾಜೆ ನಿರಾಶ್ರಿತರ
ಪರಿಹಾರ ಕೇಂದ್ರದ ಉಸ್ತುವಾರಿ

 ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.