ಅಂಗನವಾಡಿ ಕೇಂದ್ರದ ಆವರಣಗೋಡೆ ನಿರ್ಮಾಣಕ್ಕೆ ಅನುದಾನ ನೀಡಿ:ಗ್ರಾಮಸ್ಥರು


Team Udayavani, Aug 10, 2018, 10:13 AM IST

10-agust-2.jpg

ಪಡುಪಣಂಬೂರು: ಗ್ರಾಮದಲ್ಲಿನ ಪ್ರತೀ ಅಂಗನವಾಡಿ ಕೇಂದ್ರಕ್ಕೆ ಆವರಣ ಗೋಡೆ ನಿರ್ಮಿಸಲು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅನುದಾನ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಪಡುಪಣಂಬೂರು ಗ್ರಾಮ ಪಂಚಾಯತ್‌ ಪ್ರಥಮ ಹಂತದ ನರೇಗಾ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು.

ಗ್ರಾ. ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿ, ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಕರ್ಯ ನೀಡಲು ಪಂ.ಗೆ ಅನುದಾನದ ಕೊರತೆ ಇದ್ದಲ್ಲಿ ಕನಿಷ್ಟ ನರೇಗಾ ಯೋಜನೆಯಲ್ಲಾದರೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದಾಗ ಪಂಚಾಯತ್‌ ಸದಸ್ಯರು ಬೆಂಬಲಿಸಿದರು. ಈ ಬಗ್ಗೆ ಸಾರ್ವತ್ರಿಕ ನಿರ್ಣಯ ಕೈಗೊಳ್ಳಲಾಯಿತು.

ಯೋಜನೆಯಲ್ಲಿನ ಕೂಲಿ ಇನ್ನಷ್ಟು ಹೆಚ್ಚಿಸಬೇಕು. ಕುಡಿಯುವ ನೀರಿನ ಬಾವಿಯ ದುರಸ್ಥಿ ಕಾರ್ಯಕ್ಕೆ ಅನುದಾನ, ಕಾಮಗಾರಿ ನಡೆಸುವಾಗ ಸಾಮಗ್ರಿಗಳ ಖರೀದಿಗೆ ವಿಳಂಬವಾಗುತ್ತದೆ ಎಂಬ ದೂರುಗಳು ಕೇಳಿ ಬಂತು. ಗ್ರಾಮಸ್ಥರಾದ ಸಾಹುಲ್‌ ಹಮೀದ್‌ ಕದಿಕೆ, ಸವಿತಾ ಶರತ್‌ ಬೆಳ್ಳಾಯರು, ಅಶೋಕ್‌ ಭಟ್‌ ಮಾತನಾಡಿದರು.

ಪಂಚಾಯತ್‌ ಅಧ್ಯಕ್ಷ ಮೋಹನ್‌ ದಾಸ್‌ ಮಾತನಾಡಿ, ಯೋಜನೆಯಲ್ಲಿರುವ ಈಗಿನ ಕೆಲವೊಂದು ಕಾಮಗಾರಿಗಳಿಗೆ ಅನುದಾನ ಸಾಕಾಗುವುದಿಲ್ಲ. ದನದ ಹಟ್ಟಿಗೆ ಹೆಚ್ಚುವರಿಯಾಗಿ ಹಾಗೂ ಯೋಜನೆಯ ನಾಮಫಲಕಕ್ಕೆ ಪ್ರತ್ಯೇಕ ಅನುದಾನ ನೀಡಬೇಕು. ಶ್ಮಶಾನ ಅಭಿವೃದ್ಧಿಗೆ ಇದರಿಂದ ಅನುದಾನ ನೀಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಶ್ಯಾಮಲಾ ಅಧ್ಯಕ್ಷತೆ ವಹಿಸಿ, ಸಭಾ ಕಲಾಪ ನಡೆಸಿಕೊಟ್ಟರು.

ಉಪಾಧ್ಯಕ್ಷೆ ಸುರೇಖಾ ಕರುಣಾಕರ್‌, ಸದಸ್ಯರಾದ ಉಮೇಶ್‌ ಪೂಜಾರಿ, ಹೇಮನಾಥ ಅಮೀನ್‌, ದಿನೇಶ್‌ ಕುಲಾಲ್‌, ಮಂಜುಳಾ, ಸಂಪಾವತಿ, ಪುಷ್ಪಾವತಿ, ಶ್ವೇತಾ, ಯೋಜನೆಯ ಎಂಜಿನಿಯರ್‌ ಅಜಿತ್‌, ರೇಖಾಮಣಿ ಉಪಸ್ಥಿತರಿದ್ದರು. ಪಂ.ಅಭಿವೃದ್ಧಿ ಅಧಿಕಾರಿ ಅನಿತಾ ಕ್ಯಾಥರಿನ್‌ ಸ್ವಾಗತಿಸಿ, ವರದಿ ವಾಚಿಸಿದರು. ಯೋಜನೆಯ ಅಶ್ವಿ‌ತಾ ನಿರೂಪಿಸಿದರು.

ಆಡಳಿತ ಉತ್ತಮ
ಗ್ರಾ.ಪಂ. ನರೇಗಾ ಯೋಜನೆಯ ಕಡತ ನಿರ್ವಹಣೆಯಲ್ಲಿ ಉತ್ತಮವಾಗಿದೆ. ಯೋಜನೆಗಳ ಬಗ್ಗೆ ಎಲ್ಲ ವಿಧದಲ್ಲೂ ಸ್ಪಷ್ಟವಾದ ದಾಖಲೆ ಇಟ್ಟುಕೊಂಡಿದೆ. ಒಂದೆರಡು ಯೋಜನೆಗಳ ಪೂರಕ ಮಾಹಿತಿಯ ಅಗತ್ಯತೆ ಇದೆ. ಒಟ್ಟು 19 ಲಕ್ಷ ರೂ. ಗಳ ಯೋಜನೆ ಈ ವರ್ಷದಲ್ಲಿ ನಡೆದಿದೆ.
– ಧನಲಕ್ಷ್ಮೀ, ಯೋಜನೆಯ
ತಾಲೂಕು ಸಂಯೋಜನಾಧಿಕಾರಿ

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.