ಮರಳಿಗಾಗಿ “ಸ್ಯಾಂಡ್‌ ಬಜಾರ್‌’ ಮೊಬೈಲ್‌ ಆ್ಯಪ್‌!


Team Udayavani, May 25, 2019, 6:00 AM IST

w-13

ಸಾಂದರ್ಭಿಕ ಚಿತ್ರ

ಮಂಗಳೂರು: ಕಟ್ಟಡ ಕಾಮಗಾರಿಗೆ ಮರಳು ಅಗತ್ಯವಿರುವ ಗ್ರಾಹಕರು ಇನ್ನು ಮರಳಿಗಾಗಿ ಹುಡುಕುವ ಅಗತ್ಯವಿಲ್ಲ. “ಸ್ಯಾಂಡ್‌ ಬಜಾರ್‌’ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡುವ ಮೂಲಕ ಜಿಲ್ಲಾಡಳಿತವು ನಾಗರಿಕರ ನೆರವಿಗೆ ಬಂದಿದೆ. ಇದೀಗ ಗ್ರಾಹಕರು ತಾವಿರುವ ಜಾಗದಿಂದಲೇ ಅಗತ್ಯವಿರುವಷ್ಟು ಮರಳು ಬುಕ್ಕಿಂಗ್‌ ಮಾಡಬಹುದು! ಆ್ಯಪ್‌ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಾಗಲೇ 43 ಜನರು ಮರಳು ಬುಕ್ಕಿಂಗ್‌ ಮಾಡಿದ್ದಾರೆ. 18 ಜನರಿಗೆ ಮರಳು ಸರಬರಾಜು ಮಾಡಲಾಗಿದೆ.

ಬುಕ್ಕಿಂಗ್‌ ಹೇಗೆ?
ಗ್ರಾಹಕರು ಮೊಬೈಲ್‌ನಲ್ಲಿ “ಸ್ಯಾಂಡ್‌ ಬಜಾರ್‌’ ಆ್ಯಪ್‌ ಡೌನೊಡ್‌ ಮಾಡಬೇಕು. ಬಳಿಕ ಸಂಪೂರ್ಣ ವಿಳಾಸ, ಮರಳು ಎಲ್ಲಿಗೆ ಪೂರೈಕೆ ಮಾಡಬೇಕು ಎಂಬಿತ್ಯಾದಿ ವಿವರ ನಮೂದಿಸಬೇಕು. ಆಧಾರ್‌ ನಂಬರ್‌ ನಮೂದಿಸಿ ಹತ್ತಿರವಿರುವ ಮರಳು ಧಕ್ಕೆ ಸ್ಥಳವನ್ನು ಟೈಪ್‌ ಮಾಡಿ ಕಳುಹಿಸಬೇಕು. ಈ ಸಂದರ್ಭ ಒಟಿಪಿ ಬರಲಿದ್ದು, ಆ್ಯಪ್‌ ಮುಖೇನ ಮರಳು ಸಾಗಾಟದ ದರ ಸಂದೇಶ ಬರಲಿದೆ. ಈ ಮೊತ್ತವನ್ನು ಪೇಟಿಎಂ, ನೆಟ್‌ಬ್ಯಾಕಿಂಗ್‌ ಮುಖೇನ ಸಂದಾಯ ಮಾಡಬೇಕು. ಹಣ ಸಂದಾಯವಾದ ಕೂಡಲೇ ಮೊಬೈಲ್‌ ಸಂದೇಶ ಬರಲಿದ್ದು ಅದನ್ನು ಸಂಬಂಧಪಟ್ಟ ಮರಳು ಧಕ್ಕೆಯ ಗಮನಕ್ಕೆ ತರಬೇಕು. ಜತೆಗೆ ಧಕ್ಕೆಗೆ ಕಂಟ್ರೋಲ್‌ ರೂಂನಿಂದ ಸಂದೇಶ ಹೋಗಲಿದೆ. ಇದರ ಆಧಾರದ ಮೇಲೆಯೇ ಮರಳು ಸಾಗಾಟ ನಡೆಯಲಿದೆ.

ಮಧ್ಯವರ್ತಿಗಳ ಹಾವಳಿ, ದರ ಏರಿಳಿತ ಸೇರಿದಂತೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದು
ಕೊಳ್ಳಲು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ಮರಳು ಬುಕ್ಕಿಂಗ್‌ ನೋಂದಾವಣೆಯಿಂದ ಹಿಡಿದು ಹಣಪಾವತಿ, ಮರಳು ಬುಕ್ಕಿಂಗ್‌, ವಾಹನ ಬುಕ್ಕಿಂಗ್‌, ಮರಳು ಲಾರಿ ಸಾಗಾಟವಾಗುವ ಟ್ರಾಕಿಂಗ್‌ ಸ್ಟೇಟಸ್‌ ಹಂತಹಂತವಾಗಿ ಸ್ಯಾಂಡ್‌ ಬಜಾರ್‌ ಆ್ಯಪ್‌ನಲ್ಲಿ ದೊರೆಯಲಿದ್ದು, ಗ್ರಾಹಕರ ಮಾಹಿತಿಗೆ ಅನುಕೂಲವಾಗಲಿದೆ. ಬುಕ್ಕಿಂಗ್‌ ಮಾಹಿತಿ,

ಗ್ರಾಹಕರ ಮಾಹಿತಿ, “ಗೂಗಲ್‌ ಮ್ಯಾಪ್‌ ವಿವ್‌’ ಮುಖೇನ ಮರಳು ಧಕ್ಕೆಯ ವಿವರವೂ ಸಿಗಲಿದೆ.
ಆ್ಯಪ್‌ನಲ್ಲಿ ಬುಕ್ಕಿಂಗ್‌ ಮಾಡಿದ ಮರಳನ್ನು ನಿಗದಿತ ಸಮಯದೊಳಗೆ ಸಂಬಂಧಪಟ್ಟ ಮರಳು ಲಾರಿಯವ ಸಾಗಾಟ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ. ಒಂದು ವೇಳೆ ವಿಳಂಬ ಮಾಡಿದರೆ ಆ ಲಾರಿಯ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ನಿರಂತರ ಮೂರು ಬಾರಿ ಇದೇ ರೀತಿ ಲೋಪವಾದರೆ ಆ ಲಾರಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನದಿ ದಡದಿಂದ ಮನೆಬಾಗಿಲಿಗೆ
ಶೋರ್‌ ಟು ಎವಿರಿ ಡೋರ್‌- (ನದಿ ದಡದಿಂದ ಮನೆಬಾಗಿಲಿಗೆ) ಎಂಬ ಸ್ಲೋಗನ್‌ನಲ್ಲಿ “ಸ್ಯಾಂಡ್‌ ಬಜಾರ್‌’ ಆ್ಯಪ್‌ ತಯಾರಿಸಲಾಗಿದೆ. ಈ ಯೋಜನೆ ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದ್ದು, ಭೂವಿಜ್ಞಾನ ಮತ್ತು ಗಣಿ ಇಲಾಖೆ ನಿರ್ವಹಿಸಲಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.