12 ಬ್ಲಾಕ್‌ಗಳಲ್ಲಿ ಇಂದಿನಿಂದ ಮರಳುಗಾರಿಕೆ ಸ್ಥಗಿತ

ದಕ್ಷಿಣ ಕನ್ನಡ ಜಿಲ್ಲೆ ಸಿಆರ್‌ಝಡ್‌

Team Udayavani, Oct 16, 2019, 4:06 AM IST

u-36

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದ 22 ಮರಳು ದಿಬ್ಬಗಳ ಪೈಕಿ ಮೊದಲ ಹಂತದಲ್ಲಿ ಮರಳುಗಾರಿಕೆ ಆರಂಭಗೊಂಡಿದ್ದ 12 ಮರಳು ದಿಬ್ಬಗಳಲ್ಲಿ ಪರವಾನಿಗೆ ಅವಧಿ ಅ.15ರಂದು ಮುಕ್ತಾಯಗೊಳ್ಳಲಿದ್ದು, ಬಳಿಕ ಸ್ಥಗಿತಗೊಳ್ಳಲಿದೆ.

2ನೇ ಹಂತದಲ್ಲಿ 10 ದಿಬ್ಬಗಳ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿದ್ದು, ಅವಧಿ ಡಿ.25ಕ್ಕೆ ಪೂರ್ಣಗೊಳ್ಳಲಿದೆ. ಹೀಗಾಗಿ ಈ 10 ದಿಬ್ಬ ಬಿಟ್ಟು ಜಿಲ್ಲೆಯಲ್ಲಿ ಬುಧವಾರದಿಂದ ಮರಳುಗಾರಿಕೆಗೆ ಅವಕಾಶವಿರುವುದಿಲ್ಲ. ಹೊಸದಾಗಿ ಬೇಥಮೆಟ್ರಿಕ್‌ ಸರ್ವೇ ನಡೆದು, ಮರಳು ದಿಬ್ಬ ಗುರುತಿಸಿ, ಪರಿಸರ ಇಲಾಖೆಯ ಅನುಮತಿ ಪಡೆದ ಬಳಿಕ ಆರಂಭಗೊಳಿಸಬೇಕಾಗುತ್ತದೆ. ಈ ಪ್ರಕ್ರಿಯೆಗಳಿಗೆ ಕನಿಷ್ಠ ಸುಮಾರು 2ತಿಂಗಳು ಬೇಕು. ಹೀಗಾಗಿ ಮುಂದಿನ ಫೆಬ್ರವರಿ ಮಧ್ಯಭಾಗದಲ್ಲಷ್ಟೇ ಮರಳುಗಾರಿಕೆ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ.

ಕಳೆದ ಬಾರಿಯ ಸರ್ವೇಯಲ್ಲಿ ನೇತ್ರಾವತಿಯಲ್ಲಿ ಒಟ್ಟು 13 ಬ್ಲಾಕ್‌ಗಳನ್ನು ಗುರುತಿಸಿ, 4,30,357 ಮೆ. ಟನ್‌ ಮರಳು ಇದ್ದು, 43,027 ಲಾರಿ ಲೋಡ್‌ ಆಗುತ್ತದೆ ಎಂದು ಅಂದಾಜಿಸಲಾಗಿತ್ತು. ಫಲ್ಗುಣಿ ನದಿಯಲ್ಲಿ ಒಟ್ಟು 9 ಬ್ಲಾಕ್‌ಗಳನ್ನು ಗುರುತಿಸಿ 4,20,270 ಮೆ. ಟನ್‌ ಮರಳಿದ್ದು, 42,027 ಲಾರಿ ಲೋಡ್‌ ಆಗುತ್ತದೆ ಎಂದು ಅಂದಾಜಿಸಲಾಗಿತ್ತು. ಒಟ್ಟು 22 ಬ್ಲಾಕ್‌ಗಳಲ್ಲಿ 105 ಮಂದಿಗೆ ಮರಳುಗಾರಿಕೆಗೆ ಅವಕಾಶ ನೀಡಲಾಗಿತ್ತು.

ಬೇಥಮೆಟ್ರಿಕ್‌ ಸರ್ವೇಗೆ ಟೆಂಡರ್‌
ಹೊಸದಾಗಿ ಮರಳುದಿಬ್ಬ ಗುರುತಿಸಲು ಸರ್ವೇಗಾಗಿ ಜಿಲ್ಲಾಡಳಿತ ಈಗಾಗಲೇ ಟೆಂಡರ್‌ ಕರೆದಿದೆ. ಮೀನು ಸಂತಾನೋತ್ಪತ್ತಿ ಹಿನ್ನೆಲೆಯಲ್ಲಿ ಈ ಬಾರಿಯೂ ಜೂನ್‌ನಿಂದ ಜು. 31ರ ವರೆಗೆ ಮರಳುಗಾರಿಕೆಗೆ ನಿಷೇಧವಿದ್ದು, ಆಗಸ್ಟ್‌ ಪ್ರಥಮ ವಾರದಿಂದ ಮತ್ತೆ ಆರಂಭಗೊಂಡಿತ್ತು.

ಉಡುಪಿ: 21,130 ಮೆ. ಟನ್‌ ಮರಳು ತೆರವು
ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಇಲ್ಲಿಯ ವರೆಗೆ 21,130 ಟ್ರಿಕ್‌ ಟನ್‌ ಮರಳು ತೆರವುಗೊಳಿಸಲಾಗಿದೆ. ಜಿಲ್ಲೆಯ ಸಿಆರ್‌ಝಡ್‌ನ‌ಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು 138 ಜನರಿಗೆ ಅನುಮತಿ ಸಿಕ್ಕಿದೆ. ಇವರಲ್ಲಿ 117 ಜನರ ಪರವಾನಿಗೆ ಐಎಲ್‌ಎಂಎಸ್‌ನಲ್ಲಿ ನೋಂದಣಿಯಾಗಿದ್ದು, ಉಳಿದ 21 ಪರವಾನಿಗೆದಾರರ ನೋಂದಣಿ ಪ್ರಗತಿಯಲ್ಲಿದೆ. ಮರಳು ವಾಹನ ವಶ ಅ. 14ರಂದು ಮಂಗಳೂರಿನಿಂದ ಕಾರ್ಕಳ ಮಾರ್ಗದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವೊಂದನ್ನು ಕಾರ್ಕಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಮತ್ತು ದ.ಕ. ಜಿಲ್ಲೆಯಿಂದ ಹೊರ ಜಿಲ್ಲೆಗೆ ಮರಳು ಸಾಗಾಟಕ್ಕೆ ನಿಷೇಧವಿದೆ. ಹೊರ ಜಿಲ್ಲೆಗೆ ಮರಳು ಸಾಗಾಟ ಮಾಡುವವರ ವಿರುದ್ಧ ಕೇಸು ದಾಖಲಾಗಲಿದೆ.

ಸಿಆರ್‌ಝಡ್‌ ವಲಯದ 12 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಪರವಾನಿಗೆ ಮಂಗಳವಾರ ಮುಕ್ತಾಯಗೊಂಡಿದೆ. ಇನ್ನುಳಿದ 10 ಬ್ಲಾಕ್‌ಗಳ ಅವಧಿ ಡಿಸೆಂಬರ್‌ವರೆಗೆ ಇದ್ದು, ಮರಳುಗಾರಿಕೆ ಮುಂದುವರಿಯಲಿದೆ. ಹೊಸದಾಗಿ ಬೇಥಮೆಟ್ರಿಕ್‌ ಸರ್ವೇಗೆ ಟೆಂಡರ್‌ ಕರೆಯಲಾಗಿದೆ.
– ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.