ಮರಳು ದಿಬ್ಬ ಸಮೀಕ್ಷೆ ಆರಂಭ ; ನವೆಂಬರ್‌ನಲ್ಲಿ ಮರಳು ಸಾಧ್ಯತೆ


Team Udayavani, Oct 19, 2021, 6:00 AM IST

ಮರಳು ದಿಬ್ಬ ಸಮೀಕ್ಷೆ ಆರಂಭ ; ನವೆಂಬರ್‌ನಲ್ಲಿ ಮರಳು ಸಾಧ್ಯತೆ

ಸಾಂದರ್ಭಿಕ ಚಿತ್ರ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳು ದಿಬ್ಬ ಗುರು ತಿಸುವ ಸಮೀಕ್ಷೆ ಆರಂಭಗೊಂಡಿದೆ. ಸಮೀಕ್ಷೆ ಮತ್ತಿತರ ಪ್ರಕ್ರಿಯೆಗಳಿಗೆ ಸುಮಾರು ಒಂದೂವರೆ ತಿಂಗಳು ಅಗತ್ಯವಿದ್ದು, ನವೆಂಬರ್‌ ಅಂತ್ಯಕ್ಕೆ ಮರಳುಗಾರಿಕೆ ಆರಂಭಗೊಂಡು ಮರಳು ದರ ಕೊಂಚ ಇಳಿಕೆಯಾಗುವ ನಿರೀಕ್ಷೆ ಮೂಡಿದೆ.

ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಪರಿಸರ ಇಲಾಖೆ ನೀಡಿರುವ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್‌) ಅವಧಿ ಮುಗಿದು ಸೆ. 17ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿತ್ತು. ಇನ್ನು ಹೊಸದಾಗಿ ಪ್ರಕ್ರಿಯೆಗಳು ನಡೆಯಬೇಕಾಗಿವೆ.

ನೇತ್ರಾವತಿ, ಫಲ್ಗುಣಿ ನದಿಯಲ್ಲಿ ಮರಳು ದಿಬ್ಬ ಸಮೀಕ್ಷೆಯನ್ನು ಈ ಬಾರಿ ಮೀನು ಗಾರಿಕೆ ಕಾಲೇಜಿಗೆ ವಹಿಸಲಾಗಿದೆ. ಕಾಲೇಜು ಸೋಮವಾರ ದಿಂದ ಇದನ್ನು ಆರಂಭಿಸಿದ್ದು, ಮಂಗಳವಾರದಿಂದ ಕಾಲೇಜಿನ ತಜ್ಞರ ತಂಡ ನದಿಗಳಲ್ಲಿ ಸಮೀಕ್ಷೆ ನಡೆಸಲಿದೆ. ಈ ಪ್ರಕ್ರಿಯೆ ಸುಮಾರು 15 ದಿನ ನಡೆಯುವ ಸಾಧ್ಯತೆಗಳಿವೆ.

ಮರಳು ದಿಬ್ಬಗಳನ್ನು ಗುರುತಿಸಿದ ಬಳಿಕ ಎನ್‌ಐಟಿಕೆಯಿಂದ ತಾಂತ್ರಿಕ ವರದಿ ಪಡೆಯಲಾಗುತ್ತದೆ. ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯು ವರದಿಯನ್ನು ಪರಿಶೀಲಿಸಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಗೆ ಅನುಮೋದನೆಗಾಗಿ ಕಳುಹಿಸುತ್ತದೆ. ಕೆಸಿಝಡ್‌ಎಂ ಇದನ್ನು ಪರಿಶೀಲಿಸಿ ಅನುಮೋದನೆ ನೀಡಿದ ಬಳಿಕ ಮರಳುಗಾರಿಕೆ ಪ್ರಕ್ರಿಯೆಗೆ ಚಾಲನೆ ದೊರಕುತ್ತದೆ. ಇವೆಲ್ಲ ಪ್ರಕ್ರಿಯೆಗಳು ಸುಮಾರು ಒಂದೂವರೆ ತಿಂಗಳು ತೆಗೆದುಕೊಳ್ಳುವ ಸಾಧ್ಯತೆಗಳಿದ್ದು, ನವೆಂಬರ್‌ ಅಂತ್ಯಕ್ಕೆ ಮರಳುಗಾರಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ.

ಇದನ್ನೂ ಓದಿ:ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಮರಳು ದುಬಾರಿ
ಈಗ ನಾನ್‌ ಸಿಆರ್‌ಝಡ್‌ ವಲಯದಿಂದ ಮರಳು ಪೂರೈಕೆಯಾಗುತ್ತಿದೆ. ಒಂದು ಲೋಡ್‌ ದರ 8 ಸಾವಿರ ರೂ. ವರೆಗಿದೆ. ಸಿಆರ್‌ಝಡ್‌ ವಲಯ ದಲ್ಲಿ ಮರಳುಗಾರಿಕೆ ಆರಂಭ ಶೀಘ್ರ ಆಗದಿದ್ದರೆ ಮರಳು ಅಭಾವ ತಲೆದೋರುವ ಸಾಧ್ಯತೆಗಳಿವೆ.

ಕರಾವಳಿಗೆ ಪ್ರತ್ಯೇಕ ಮರಳು ನೀತಿ?
ಕರಾವಳಿಗೆ ಪ್ರತ್ಯೇಕ ಮರಳುನೀತಿ ಸಿದ್ಧಗೊಂಡಿದ್ದು, ಸರಕಾರಕ್ಕೆ ಸಲ್ಲಿಕೆ ಯಾಗಿದೆ. ಸರಕಾರ ಇದನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಸಿಆರ್‌ಝಡ್‌, ನಾನ್‌ ಸಿಆರ್‌ಝಡ್‌ ಮರಳುಗಾರಿಕೆ ನೀತಿಯನ್ನು ಸರಳಗೊಳಿಸಬೇಕು ಎಂದು ಕರಾವಳಿಯ ಶಾಸಕರು ಭೂವಿಜ್ಞಾನ ಮತ್ತು ಗಣಿಗಾರಿಕೆ ಸಚಿವರಿಗೆ ಸಭೆ ನಡೆಸಿ ಬೇಡಿಕೆ ಮಂಡಿಸಿದ್ದರು. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.

ಸಿಆರ್‌ಝಡ್‌ನ‌ ನೇತ್ರಾವತಿ, ಫಲ್ಗುಣಿ ನದಿಗಳಲ್ಲಿ ಮರಳು ದಿಬ್ಬ ಗುರುತಿಸಲು ಸಮೀಕ್ಷೆಗೆ ಸೂಚಿಸಲಾಗಿದೆ. ಮೀನುಗಾರಿಕೆ ಕಾಲೇಜು ಮತ್ತು ಎನ್‌ಐಟಿಕೆ ತಜ್ಞರಿಂದ ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವರದಿಯನ್ನು ಕೆಸಿಝಡ್‌ಎಂಗೆ ಕಳುಹಿಸಿಕೊಡಲಾಗುವುದು.
– ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.